ಸಭಾಪತಿಯಾಗುತ್ತಿದ್ದಂತೆಯೇ ಮಹತ್ವದ ರೂಲ್ಸ್ ಜಾರಿಗೆ ತರಲು ಮುಂದಾದ ಹೊರಟ್ಟಿ

Published : Feb 23, 2021, 04:29 PM IST
ಸಭಾಪತಿಯಾಗುತ್ತಿದ್ದಂತೆಯೇ ಮಹತ್ವದ ರೂಲ್ಸ್ ಜಾರಿಗೆ ತರಲು ಮುಂದಾದ ಹೊರಟ್ಟಿ

ಸಾರಾಂಶ

ಇತ್ತೀಚೆಗೆ ಕರ್ನಾಟಕ ವಿಧಾನಪರಿಷತ್ ಸಭಾಪತಿಯಾಗಿ ಆಯ್ಕೆಯಾಗಿರುವ ಬಸವರಾಜ ಹೊರಟ್ಟಿ ಅವರು ಮಹತ್ವದ ಕಾರ್ಯಕ್ಕೆ ಮುಂದಾಗಿದ್ದಾರೆ.

ಬೆಂಗಳೂರು, (ಫೆ.23): ವಿಧಾನಪರಿಷತ್​​ನಲ್ಲಿ ಸಂಪೂರ್ಣವಾಗಿ ಮೊಬೈಲ್ ಬ್ಯಾನ್ ಮಾಡಲು ನಿರ್ಧರಿಸಲಾಗಿದೆ. ಸದನದೊಳಗೆ ಪರಿಷತ್ ಸದಸ್ಯರು, ಮಾಧ್ಯಮ ಪ್ರತಿನಿಧಿಗಳು ಸೇರಿದಂತೆ ಯಾರಿಗೂ ಮೊಬೈಲ್ ಬಳಕೆಗೆ ಅವಕಾಶ ಇಲ್ಲದಂತೆ ಕೆಲವೊಂದು ನಿಯಮ ರೂಪಿಸಲು ಸಭಾಪತಿ ಬಸವರಾಜ್ ಹೊರಟ್ಟಿ ಮುಂದಾಗಿದ್ದಾರೆ.

ಹೌದು... ಇತ್ತೀಚಿಗೆ ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ಸದ್ಯಸರೊಬ್ಬರು ನೀಲಿ ಚಿತ್ರವನ್ನು ನೋಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಇದರ ಬೆನ್ನಲ್ಲೇ ಪರಿಷತ್ ನಲ್ಲಿ ಯಾರು ಕೂಡ ಮೊಬೈಲ್‌ ಬಳಕೆ ಮಾಡದಂತೆ ಹೊಸ ರೂಲ್ಸ್ ತರಲು ಹೊರಟ್ಟಿ ತೀರ್ಮಾನಿಸಿದ್ದಾರೆ. 

ಪರಿಷತ್‌ನಲ್ಲಿ ಸೆಕ್ಸ್‌ ವಿಡಿಯೋ ವೀಕ್ಷಣೆ ಪ್ರಕರಣ: ಸಭಾಪತಿಯಿಂದ ಮಹತ್ವದ ಆದೇಶ

ಈ ಕುರಿತು ಇಂದು ವಿಧಾನಸೌಧದಲ್ಲಿ ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಹೊರಟ್ಟಿ, ಮಾಧ್ಯಮಗಳನ್ನ ಯಾವುದೇ ಕಾರಣಕ್ಕೂ ದೂರ ಇಡುವ ಪ್ರಶ್ನೆಯೇ ಇಲ್ಲ. ಕೊರೋನಾ ಕಾರಣಕ್ಕೆ ಇನ್ನೂ ಮಾಧ್ಯಮಗಳಿಗೆ ಗ್ಯಾಲರಿಯಲ್ಲಿ ಅವಕಾಶ ಕೊಟ್ಟಿಲ್ಲ. ಮುಂದಿನ‌ ದಿನಗಳಲ್ಲಿ ಮಾಧ್ಯಮಗಳಿಗೆ ಅನುಕೂಲವಾಗುವಂತೆ ಮಾಡುತ್ತೇವೆ. ಬೇರೆ ಬೇರೆ ಕಡೆ ಮಾಧ್ಯಮಗಳನ್ನ ನಿಷೇಧ ಮಾಡಲಾಗಿದೆ. ನಮ್ಮಲ್ಲಿ ಬ್ಯಾನ್ ಮಾಡುವ ಅವಶ್ಯಕತೆ ಇಲ್ಲ ಎಂದು ಹೇಳಿದರು.

ಪ್ರಕಾಶ್ ರಾಥೋಡ್ ಮೊಬೈಲ್ ವೀಕ್ಷಣೆ ವಿಚಾರವೇ ಇಡೀ ದಿನ ಸುದ್ದಿಯಾಗಿತ್ತು. ಊಟ ಮಾಡಿ ಸದನಕ್ಕೆ ಸದಸ್ಯರು ಬಂದಾಗ ಕೆಲ ನಿಮಿಷ ನಿದ್ದೆ ಮಾಡ್ತಾರೆ. ಮಾಧ್ಯಮಗಳಲ್ಲಿ ಅದೇ ಹೆಚ್ಚು ಸುದ್ದಿಯಾಗುತ್ತಿದೆ. ಇದರಿಂದ ಇಡೀ ಸದನದ ಗೌರವ ಮಣ್ಣಾಗುತ್ತೆ. ಯಾವುದೋ ಒಂದು ಸಣ್ಣ ಘಟನೆಯನ್ನೇ ದೊಡ್ಡದಾಗಿ ತೋರಿಸಲಾಗುತ್ತೆ ಎಂದರು.

ಕೆಲ ಮಾಧ್ಯಮಗಳು ಮಾಡುತ್ತಿರುವ ವರದಿಗಳ ಬಗ್ಗೆ ಕೂಡ ಅಸಮಾಧಾನ ವ್ಯಕ್ತಪಡಿಸಿ, ಮುಂಬರು ದಿವಸದಲ್ಲಿ ಸದನದಲ್ಲಿ ಕೆಲವು ಬದಲಾವಣೆಯಾಗಲಿದ್ದೇವೆ ಅಂತ ಮೂನ್ಸಚನೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್