'ಚಕ್ರವರ್ತಿ ಸೂಲಿಬೆಲೆ ಬಾಡಿಗೆ ಭಾಷಣಕಾರ, ಅವಹೇಳನ ಕಾಮೆಂಟ್‌ಗೆ ಕ್ಷಮೆ ಕೇಳಲಿ' - ಕಾಂಗ್ರೆಸ್ ಮುಖಂಡ ಟೀಕೆ

Published : Sep 02, 2023, 04:46 PM ISTUpdated : Sep 02, 2023, 04:48 PM IST
'ಚಕ್ರವರ್ತಿ ಸೂಲಿಬೆಲೆ ಬಾಡಿಗೆ ಭಾಷಣಕಾರ, ಅವಹೇಳನ ಕಾಮೆಂಟ್‌ಗೆ ಕ್ಷಮೆ ಕೇಳಲಿ' - ಕಾಂಗ್ರೆಸ್ ಮುಖಂಡ ಟೀಕೆ

ಸಾರಾಂಶ

ಬಿಜೆಪಿ ಪರ ಸುಳ್ಳು ಭಾಷಣ ಮಾಡುವುದನ್ನೇ ಕಾಯಕ ಮಾಡಿಕೊಂಡಿರುವ ಬಾಡಿಗೆ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ಅವರು ಮಹಿಳೆ ಬಗ್ಗೆ ಅಗೌರವವಾಗಿ ಕಮೆಂಟ್‌ ಮಾಡಿರುವುದು ಸರಿಯಲ್ಲ. ಕೂಡಲೇ ಅವರು ಮಹಿಳೆ ಬಳಿ ಕ್ಷಮೆಯಾಚಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಎಸ್‌. ಸುಂದರೇಶ್‌ ಹೇಳಿದರು.

 ಶಿವಮೊಗ್ಗ (ಸೆ.2) :  ಬಿಜೆಪಿ ಪರ ಸುಳ್ಳು ಭಾಷಣ ಮಾಡುವುದನ್ನೇ ಕಾಯಕ ಮಾಡಿಕೊಂಡಿರುವ ಬಾಡಿಗೆ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ಅವರು ಮಹಿಳೆ ಬಗ್ಗೆ ಅಗೌರವವಾಗಿ ಕಮೆಂಟ್‌ ಮಾಡಿರುವುದು ಸರಿಯಲ್ಲ. ಕೂಡಲೇ ಅವರು ಮಹಿಳೆ ಬಳಿ ಕ್ಷಮೆಯಾಚಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಎಸ್‌. ಸುಂದರೇಶ್‌ ಹೇಳಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಚಕ್ರವರ್ತಿ ಸೂಲಿಬೆಲೆ(Chakravarthy sulibele) ಒಬ್ಬ ಬಾಡಿಗೆ ಭಾಷಣಕಾರ. ಆದರೆ ಒಂದು ಹೆಣ್ಣಿನ ಬಗ್ಗೆ ಹೀಯಾಳಿಸುವುದು ಅಶ್ಲೀಲವಾಗಿ ಮಾತನಾಡುವುದು ಸರಿಯಲ್ಲ. ಸಾಮಾಜಿಕ ಜಾಲತಾಣದಲ್ಲಿ ಅವರ ಫೇಸ್ಬುಕ್ ಖಾತೆಯಿಂದ ಒಂದು ಹೆಣ್ಣನ್ನು ಅಗೌರವಿಸುವಂತಹ ಹೇಳಿಕೆ ಬಂದಾಗಲೂ ಕೂಡ ಅದಕ್ಕೆ ವಿಷಾದ ವ್ಯಕ್ತಪಡಿಸದೆ ಸಮರ್ಥಿಸಿಕೊಳ್ಳುವುದು ಎಷ್ಟರ ಮಟ್ಟಿಗೆ ಸರಿ ಟೀಕಿಸಿದರು.

ಕಾಂಗ್ರೆಸ್ ಕಾರ್ಯಕರ್ತೆ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪ; ಚಕ್ರವರ್ತಿ ಸೂಲಿಬೆಲೆ ವಿಚಾರಣೆ

ಮಲೆನಾಡಿನಲ್ಲಿ ರಾಜಕೀಯವಾಗಿ ಬಿಜೆಪಿಯಾಗಲಿ, ಜೆಡಿಎಸ್ ಆಗಲಿ, ಕಾಂಗ್ರೆಸ್ ಆಗಲಿ ನಾವೆಲ್ಲರೂ ಪಕ್ಷಾತೀತವಾಗಿ ಕೆಲಸ ಮಾಡುತ್ತಿದ್ದೇವೆ. ಬಿಜೆಪಿ ಸೇರಿದಂತೆ ಎಲ್ಲಾ ಪಕ್ಷಗಳು ಹೆಣ್ಣಿನ ಬಗ್ಗೆ ಗೌರವ ಇಟ್ಟುಕೊಂಡಿವೆ. ಆದರೆ, ಸೂಲಿಬೆಲೆ ಎಂಬ ವ್ಯಕ್ತಿ ಹೆಣ್ಣಿಗೆ ಗೌರವ ಕೊಟ್ಟಿಲ್ಲ. ಅವಮಾನ ಮಾಡಿದ ಮಹಿಳೆಗೆ ವಿಷಾದ ಹೇಳಿ ಕ್ಷಮೆ ಕೋರಬೇಕು ಒಂದು ಆಗ್ರಹಿಸಿದರು.

ಸೂಲಿಬೆಲೆ ವಿರುದ್ಧ ದೂರು ಕೊಟ್ಟ ಕೆಪಿಸಿಸಿ ಸಾಮಾಜಿಕ ಜಾಲತಾಣ(Social media)ದ ರಾಜ್ಯ ಉಪಾಧ್ಯಕ್ಷೆ ಸೌಗಂಧಿಕ ರಘುನಾಥ್ (Saugandhika Raghunath)ಮಾತನಾಡಿ, ಒಂದು ಹೆಣ್ಣಿನ ಬಗ್ಗೆ ಅಗೌರವ ಕೊಡುವವರು ಯಾರೇ ಆಗಲಿ ಅವರನ್ನು ಉನ್ನತ ಮನುಷ್ಯ ಎಂದು ಹೇಳುವುದಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಉತ್ತರ ನೀಡಿದ್ದಕ್ಕೆ ಅವರ ಹೆಸರಿನ ಖಾತೆಯಿಂದ ನನ್ನನ್ನು ತೀರಾ ಕೆಳಮಟ್ಟದಲ್ಲಿ ಮತ್ತು ಅಶ್ಲೀಲವಾಗಿ ಕಾಮೆಂಟ್ಸ್ ಹಾಕಲಾಗಿದೆ. ಹೀಗಿದ್ದರೂ ಕೂಡ ಇದು ತಪ್ಪು ಎಂದು ಅವರು ಒಪ್ಪಿಕೊಳ್ಳಲಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಬೇಕಾದಷ್ಟು ಅನಗತ್ಯ ಪೋಸ್ಟ್ ಬರುತ್ತವೆ ನಿಜ. ಆದರೆ, ಒಂದು ಹೆಣ್ಣಿನ ಇಡೀ ಕುಟುಂಬವನ್ನು ಹೀಯಾಳಿಸಲಾಗಿದೆ. ಆದ್ದರಿಂದಲೇ ದೂರು ಕೊಟ್ಟಿದ್ದೇನೆ. ಸೂಲಿಬೆಲೆ ಅವರು ಒಂದು ವಿಷಾದ ವ್ಯಕ್ತಪಡಿಸಿದ್ದರೆ ಅದು ಮುಗಿದುಹೋಗುತ್ತಿತ್ತು ಎಂದರು. 

ಸರ್ಕಾರವನ್ನು ಟೀಕಿಸಿದರೆ ಕೇಸ್‌ ಹಾಕುತ್ತಿದ್ದಾರೆ: ಸೂಲಿಬೆಲೆ ಟೀಕೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನಮ್ಮ ಹಣ ನಮಗೆ ಬೇಕಾದವರಿಗೆ ನೀಡುತ್ತೇವೆ: ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ಸಮನ್ಸ್‌ಗೆ ಡಿಕೆಶಿ ಆಕ್ರೋಶ
ಕರ್ನಾಟಕ ಗದ್ದುಗೆ ಫೈಟ್‌ ಬಗ್ಗೆ ಹೈಕಮಾಂಡ್‌ ನಾಯಕರ ಚರ್ಚೆ