
ಬೆಂಗಳೂರು (ಸೆ.02): ‘ನಾನೇನಾದರೂ ನಿಮ್ಮ ವಿಷಯ ಹೊರಗಡೆ ತಂದರೆ ನಿಮಗೆ ನಿದ್ದೆ ಬರುವುದಿಲ್ಲ’ ಎಂದು ವಿಧಾನಪರಿಷತ್ತಿನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರಿಗೆ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕಾನೂನು ಬಿಟ್ಟು ಆಚೆ ಈಚೆ ಹೋಗುವವನಲ್ಲ. ನೀವಿನ್ನು ಒಂದು ವರ್ಷ ಹುಡುಕಿದರೂ ನನ್ನ ಒಂದೇ ಒಂದು ತಪ್ಪು ತೋರುವುದಕ್ಕೆ ಆಗುವುದಿಲ್ಲ ಎಂದು ಹೇಳಿದರು.
ಎಲ್ಲರಂತೆ ನಾನು ವೇರ್ಹೌಸ್, ಇನ್ನೇನೋ ಉದ್ದೇಶದಿಂದ ನಿವೇಶನ ಪಡೆದಿದ್ದೇನೆ. ನಾವು ಬಡತನದಲ್ಲಿ ಬಂದವರು. ನಮ್ಮಲ್ಲಿ ಹಣ ಇರಲಿಲ್ಲ. ಅದಾದ ನಂತರ ಕಂತು ಕಟ್ಟಲು ಕಷ್ಟವಾದುದೂ ನಿಜ. ನಿಮ್ಮಲ್ಲಿ ನಾನು ಹಣ ಕೊಡಿ, ವಿನಾಯಿತಿ ಕೊಡಿ ಎಂದು ಕೇಳಿದ್ದೇನಾ? ಪರಿಶಿಷ್ಟ ಜಾತಿಯವ, ನನಗ್ಯಾರೂ ಕೇಳೋರು ಇಲ್ಲವೆಂದು ಲಜ್ಜೆಗೆಟ್ಟವ ಎಂದಿದ್ದೀರಲ್ಲವೇ? ನೀವು ಹರಿಶ್ಚಂದ್ರರೇ? ಈ ಪ್ರಪಂಚದಲ್ಲಿ ಯಾರೂ ಹರಿಶ್ಚಂದ್ರರಲ್ಲ ಎಂದು ಹರಿಹಾಯ್ದರು.
ದಸರಾ ಗಜಪಡೆಗೆ ಭಾರ ಹೊರಿಸುವ ತಾಲೀಮು ಆರಂಭ: ಮೊದಲ ದಿನ ಅಭಿಮನ್ಯು ಮೈಮೇಲೆ 520 ಕೆ.ಜಿ ಭಾರ
ವಿರೋಧ ಪಕ್ಷದ ನಾಯಕನಾಗಿ ನನ್ನ ಸ್ಥಾನದ ಗೌರವ ಉಳಿಸುವ ಕೆಲಸ ಮಾಡುತ್ತೇನೆ. ನೀವು ನಿಮ್ಮ ಸಚಿವ ಸ್ಥಾನಕ್ಕೆ ಅನುಗುಣವಾಗಿ ಮಾತನಾಡಬೇಕಿತ್ತು. ನೀವು ನನ್ನ ಬಡತನವನ್ನು ಇಷ್ಟು ಹೀಯಾಳಿಸಿ ಬಿಟ್ಟಿರಲ್ಲವೇ ಎಂದು ಕೇಳಿದರು. ಲಜ್ಜೆಗೆಟ್ಟ ವ್ಯಕ್ತಿ ಎಂದಿರಲ್ಲವೇ? ನಾನು ಯಾವುದರಲ್ಲಿ ಲಜ್ಜೆಗೆಟ್ಟವ ಎಂದು ಖಾರವಾಗಿ ಪ್ರಶ್ನಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.