ಹಿಂದೂಗಳಿಗೆ ಡಿಕೆಶಿ ಅಪಮಾನ, ಹೇಳಿಕೆ ಹಿಂಪಡೆಯಲಿ: ಬಿ.ವೈ.ವಿಜಯೇಂದ್ರ

Published : Aug 29, 2025, 01:31 AM IST
BY Vijayendra

ಸಾರಾಂಶ

ಶಿವಕುಮಾರ್ ಅವರು ಯಾರನ್ನೋ ಸಂತಸಪಡಿಸಲು ಹಾಗೂ ಗಾಂಧಿ ಕುಟುಂಬವನ್ನು ಖುಷಿಪಡಿಸಲು ಈ ರೀತಿ ಹಿಂದೂಗಳಿಗೆ ಅಪಮಾನ ಮಾಡಿರುವುದನ್ನು ಹಿಂದೂ ಸಮಾಜ ಒಪ್ಪಲು ಸಾಧ್ಯವಿಲ್ಲ ಎಂದು ವಿಜಯೇಂದ್ರ ಎಚ್ಚರಿಸಿದರು.

ಬೆಂಗಳೂರು (ಆ.29): ‘ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ’ ಎನ್ನುವ ಮೂಲಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹಿಂದೂಗಳಿಗೆ ಅಪಮಾನ ಮಾಡಿದ್ದಾರೆ. ಹೀಗಾಗಿ ಶಿವಕುಮಾರ್ ತಮ್ಮ ಹೇಳಿಕೆಯನ್ನು ತಕ್ಷಣ ಹಿಂಪಡೆಯಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಶಿವಕುಮಾರ್ ಅವರು ಯಾರನ್ನೋ ಸಂತಸಪಡಿಸಲು ಹಾಗೂ ಗಾಂಧಿ ಕುಟುಂಬವನ್ನು ಖುಷಿಪಡಿಸಲು ಈ ರೀತಿ ಹಿಂದೂಗಳಿಗೆ ಅಪಮಾನ ಮಾಡಿರುವುದನ್ನು ಹಿಂದೂ ಸಮಾಜ ಒಪ್ಪಲು ಸಾಧ್ಯವಿಲ್ಲ ಎಂದು ಎಚ್ಚರಿಸಿದರು.

ದಸರಾ ಉತ್ಸವ, ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮೀಯರೂ ಭೇಟಿ ಕೊಡುತ್ತಾರೆ ಎಂಬುದು ನಮಗೂ ಗೊತ್ತಿದೆ. ಆದರೆ, ಇವು ಹಿಂದೂಗಳಿಗೆ ಸಂಬಂಧಿಸಿದ್ದಲ್ಲ ಎಂಬ ಹೇಳಿಕೆ ಹಿಂದೂಗಳಿಗೆ ಮಾಡಿದ ಅಪಮಾನ; ಇದು ಅಕ್ಷಮ್ಯ ಎಂದರು. ಕಾಂಗ್ರೆಸ್ ಹೈಕಮಾಂಡಿನದು ಒಡೆದಾಳುವ ನೀತಿಯ ಸಂಸ್ಕೃತಿ. ಹಾಗಾಗಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಪದೇ ಪದೇ ಹಿಂದುಗಳಿಗೆ ಅಪಮಾನ, ಹಿಂದು ಕಾರ್ಯಕರ್ತರಿಗೆ ಅವಮಾನ ಆಗುತ್ತದೆ. ಅವರು ನಮ್ಮ ಪರಂಪರೆಗೆ ಧಕ್ಕೆ ಬರುವಂತೆ ನಡೆದುಕೊಳ್ಳುತ್ತಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳದ ವಿಷಯದಲ್ಲಿ ಅಷ್ಟೆಲ್ಲ ಅಪಪ್ರಚಾರ ನಡೆಯುತ್ತಿದ್ದರೂ ಬಾಯ್ಮುಚ್ಚಿಸುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡಲಿಲ್ಲ ಎಂದು ಆಕ್ಷೇಪಿಸಿದರು.

ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುವ ಕನಸು ಕಾಣುತ್ತಿದ್ದು, ಆ ಕನಸು ನನಸಾಗಲಿ ಎಂಬ ದೃಷ್ಟಿಯಿಂದ ಗಾಂಧಿ ಕುಟುಂಬವನ್ನು ಖುಷಿಪಡಿಸಲು ಇಂಥ ಹೇಳಿಕೆ ನೀಡುತ್ತಿದ್ದಾರೆ. ಇದೇ ಶಿವಕುಮಾರ್ ಅವರು ಗಾಂಧಿ ಕುಟುಂಬವನ್ನು ಖುಷಿಪಡಿಸಲು ರಾಮನಗರದಲ್ಲಿ ಏಸುಕ್ರಿಸ್ತನ 115 ಅಡಿ ಪ್ರತಿಮೆ ಸ್ಥಾಪಿಸಲು ಮುಂದಾಗಿದ್ದರು. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಏನು ಬೇಕಾದರೂ ಹೇಳುತ್ತೇವೆ; ಏನು ಬೇಕಾದರೂ ಮಾತನಾಡುತ್ತೇವೆ ಎಂಬ ನಿಮ್ಮ ಧೋರಣೆ ಸರಿಯಲ್ಲ. ಭಗವಂತನೂ ಖಂಡಿತವಾಗಿ ನಿಮ್ಮನ್ನು ಕ್ಷಮಿಸುವುದಿಲ್ಲ ಎಂದು ವಿಜಯೇಂದ್ರ ತೀಕ್ಷ್ಣವಾಗಿ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!
'ನಿಮಗೆ ಧಮ್ ಇದ್ರೆ..; ದ್ವೇಷ ಭಾಷಣ ಮಸೂದೆ ಜಾರಿಗೆ ಮುಂದಾಗಿರೋ ಕಾಂಗ್ರೆಸ್ ಸರ್ಕಾರಕ್ಕೆ ಸಿಟಿ ರವಿ ನೇರ ಸವಾಲು!