ಕರ್ನಾಟಕ ಚುನಾವಣಾ ಘೋಷಣೆ ಹಿನ್ನೆಲೆ: ಸರ್ಕಾರಿ ಆಡಳಿತ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ

Published : Mar 29, 2023, 09:04 AM ISTUpdated : Mar 29, 2023, 09:17 AM IST
ಕರ್ನಾಟಕ ಚುನಾವಣಾ ಘೋಷಣೆ ಹಿನ್ನೆಲೆ: ಸರ್ಕಾರಿ ಆಡಳಿತ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ

ಸಾರಾಂಶ

ಸರ್ಕಾರದ ಸೌಲಭ್ಯ ಬಳಸದಂತೆ ಬ್ರೇಕ್ ಬೀಳಲಿದ್ದು, ಸಚಿವರು ಸರ್ಕಾರಿ ವಾಹನ ಬಳಸುವಂತಿಲ್ಲ, ಸರ್ಕಾರಿ ಆದೇಶ ಹೊರಡಿಸಲು ಸಚಿವರಿಗಿಲ್ಲ ಅಧಿಕಾರವಿರುವುದಿಲ್ಲ. ಸಿಎಂ ಆಗಲಿ ಸಚಿವರಾಗಲಿ ಪ್ರಮುಖ ಘೋಷಣೆ, ಯಾವುದೇ ಭರವಗಳನ್ನ ನೀಡುವಂತಿಲ್ಲ. ಐಬಿ ಸೇರಿದಂತೆ ಸರ್ಕಾರಿ ಕಟ್ಟಡಗಳ ಬಳಕೆಗೂ ಕೂಡ ಬ್ರೇಕ್ ಬೀಳಲಿದೆ. 

ಬೆಂಗಳೂರು(ಮಾ.29): ಕರ್ನಾಟಕ ವಿಧಾನಸಭೆ ಚುನಾವಣೆಯ ದಿನಾಂಕವನ್ನ ಚುನಾವಣಾ ಆಯೋಗ ಇಂದು(ಬುಧವಾರ) ಬೆಳಿಗ್ಗೆ 11.30 ಕ್ಕೆ ಪ್ರಕಟಿಸಲಿದೆ. ಹೀಗಾಗಿ 11.30 ರ ಬಳಿಕ ಸರ್ಕಾರಿ ಆಡಳಿತ ವ್ಯವಸ್ಥೆಯಲ್ಲಿ ಬದಲಾವಣೆಯಾಗಲಿದೆ. 

ಸರ್ಕಾರದ ಸೌಲಭ್ಯ ಬಳಸದಂತೆ ಬ್ರೇಕ್ ಬೀಳಲಿದ್ದು, ಸಚಿವರು ಸರ್ಕಾರಿ ವಾಹನ ಬಳಸುವಂತಿಲ್ಲ, ಸರ್ಕಾರಿ ಆದೇಶ ಹೊರಡಿಸಲು ಸಚಿವರಿಗಿಲ್ಲ ಅಧಿಕಾರವಿರುವುದಿಲ್ಲ. ಸಿಎಂ ಆಗಲಿ ಸಚಿವರಾಗಲಿ ಪ್ರಮುಖ ಘೋಷಣೆ, ಯಾವುದೇ ಭರವಗಳನ್ನ ನೀಡುವಂತಿಲ್ಲ. ಐಬಿ ಸೇರಿದಂತೆ ಸರ್ಕಾರಿ ಕಟ್ಟಡಗಳ ಬಳಕೆಗೂ ಕೂಡ ಬ್ರೇಕ್ ಬೀಳಲಿದೆ. ಸಚಿವಾಲಯ ಸಿಬ್ಬಂದಿ ಸೇವೆ ಬಳಕೆ ಮಾಡುವಂತಿಲ್ಲ. ಭದ್ರತಾ ಸಿಬ್ಬಂದಿಗಳ ಬಳಕೆಗೆ ಮಾತ್ರ ಅವಕಾಶ ಇರಲಿದೆ. ಸಚಿವರು ವಿಧಾನಸೌಧ ಅಥವಾ ವಿಕಾಸಸೌಧದಲ್ಲಿ ಸಭೆ ಸಮಾರಂಭಗಳನ್ನ ನಡೆಸಲು ಸಚಿವರಿಗೆ ಬ್ರೇಕ್ ಬೀಳಲಿದೆ. 

ಪದ್ಮನಾಭನಗರದಲ್ಲಿ ‘ಹ್ಯಾಟ್ರಿಕ್‌ ಹೀರೋ’ ಆರ್‌. ಅಶೋಕ್‌ರನ್ನು ಮಣಿಸೋರು ಯಾರು?

ರಾಜ್ಯ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಏಪ್ರಿಲ್‌ ಮೊದಲ ವಾರದಲ್ಲಿ ದಿನಾಂಕ ಪ್ರಕಟ ಆಗಲಿದೆ ಎಂದು ಹೇಳಲಾಗಿತ್ತು. ಆದರೆ, ಇಂದೇ ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟ ಆಗಲಿದೆ. ಚುನಾವಣಾ ಆಯೋಗ ಇಂದು ಸುದ್ದಿಗೋಷ್ಠಿ ನಡೆಸಲಿದ್ದು, ಚುನಾವಣೆಯ ದಿನಾಂಕವನ್ನು ಘೋಷಣೆ ಮಾಡಲಿದೆ.

ಹೌದು, ಚುನಾವಣಾ ಆಯೋಗ ಇಂದು ಬೆಳಗ್ಗೆ 11. 30ಕ್ಕೆ ಸುದ್ದಿಗೋಷ್ಠಿ ನಡೆಸಲಿದ್ದು, ರಾಜ್ಯ ವಿಧಾನಸಭೆ ಚುನಾವಣೆಯ ದಿನಾಂಕ ಪ್ರಕಟ ಮಾಡಲಿದೆ. ಇಂದು ವಿಧಾನಸಭೆ ಚುನಾವಣೆಯ ಡೇಟ್‌ ಫಿಕ್ಸ್‌ ಆಗುತ್ತೆ ಅಂದ್ರೆ ನೀತಿ ಸಂಹಿತೆ ಸಹ ಇಂದಿನಿಂದಲೇ ಆರಂಭವಾಗಲಿದೆ ಎಂದು ತಿಳಿದುಬಂದಿದೆ. 

ಕೇಂದ್ರ ಚುನಾವಣಾ ಆಯೋಗ ರಾಷ್ಟ್ರ ರಾಜಧಾನಿ ದೆಹಲಿಯ ವಿಗ್ಯಾನ್‌ ಭವನದಲ್ಲಿ ಬೆಳಗ್ಗೆ 11.30 ಕ್ಕೆ ಮಹತ್ವದ ಸುದ್ದಿಗೋಷ್ಠಿ ನಡೆಸಲಿದೆ. ರಾಜ್ಯ ವಿಧಾನಸಭೆ ಚುನಾವಣೆ ಒಂದೇ ಹಂತದಲ್ಲಿ ನಡೆಯುತ್ತದೋ ಅಥವಾ ಎರಡು ಹಂತದಲ್ಲಿ ನಡೆಯುತ್ತದೋ ಎಂಬುದು ಸಹ ಇಂದೇ ನಿರ್ಧಾರವಾಗಲಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌