ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ನೀಡಿದ್ದ ಭರವಸೆ ಇನ್ನೂ ಈಡೇರಿಸಿಲ್ಲ: ಮಾಜಿ ಸಿಎಂ ರಮಣ್‌

Published : Apr 27, 2023, 05:38 AM IST
ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ನೀಡಿದ್ದ ಭರವಸೆ ಇನ್ನೂ ಈಡೇರಿಸಿಲ್ಲ: ಮಾಜಿ ಸಿಎಂ ರಮಣ್‌

ಸಾರಾಂಶ

ಈ ಹಿಂದೆ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್‌ ಪಕ್ಷವು ಛತ್ತೀಸ್‌ಗಢದಲ್ಲಿ ಗ್ಯಾರಂಟಿ ಕಾರ್ಡ್‌ ಹಾಗೂ ಭರವಸೆಗಳನ್ನು ನೀಡಿದ್ದರು. ಬಳಿಕ ಕಾಂಗ್ರೆಸ್‌ ಸರ್ಕಾರವೇ ಅಧಿಕಾರಕ್ಕೆ ಬಂದರೂ ಭರವಸೆಗಳನ್ನು ಈಡೇರಿಸಿಲ್ಲ ಎಂದು ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದ ರಮಣ್‌ ಸಿಂಗ್‌. 

ಬೊಮ್ಮನಹಳ್ಳಿ(ಏ.27): ಕಾಂಗ್ರೆಸ್‌ ಪಕ್ಷವು ಛತ್ತೀಸ್‌ಗಢದಲ್ಲಿ ಅಧಿಕಾರಕ್ಕೆ ಬಂದರೂ ಚುನಾವಣಾ ಸಮಯದಲ್ಲಿ ನೀಡಿದ್ದ ಗ್ಯಾರಂಟಿ ಕಾರ್ಡ್‌ ಹಾಗೂ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಚತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ರಮಣ್‌ ಸಿಂಗ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಎಚ್‌ಎಸ್‌ಆರ್‌ ಬಡಾವಣೆಯ ನಾಡಪ್ರಭು ಕೆಂಪೇಗೌಡ, ವೇಮನ, ಬಿಪಿನ್‌ ರಾವತ್‌ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿ, ಈ ಹಿಂದೆ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್‌ ಪಕ್ಷವು ಛತ್ತೀಸ್‌ಗಢದಲ್ಲಿ ಗ್ಯಾರಂಟಿ ಕಾರ್ಡ್‌ ಹಾಗೂ ಭರವಸೆಗಳನ್ನು ನೀಡಿದ್ದರು. ಬಳಿಕ ಕಾಂಗ್ರೆಸ್‌ ಸರ್ಕಾರವೇ ಅಧಿಕಾರಕ್ಕೆ ಬಂದರೂ ಭರವಸೆಗಳನ್ನು ಈಡೇರಿಸಿಲ್ಲ ಎಂದು ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದರು.

KARNATAKA ELECTION 2023: ನಾಯ​ಕರ ನಾಡು ಮಾನ್ವಿ ಕ್ಷೇತ್ರದಲ್ಲಿ ಅರಳದ ಕಮಲ !

ಬಳಿಕ ಎಚ್‌ಎಸ್‌ಆರ್‌ ಲೇಔಟ್‌ನ ಆಕ್ಸ್‌ಫರ್ಡ್‌ ಕಾಲೇಜಿನಲ್ಲಿ ಐಟಿ-ಬಿಟಿ ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿದರು. ಸತತ ಮೂರು ಬಾರಿ ಛತ್ತೀಸ್‌ಗಢದ ಮುಖ್ಯಮಂತ್ರಿಯಾಗಿ ಯಶಸ್ವಿಯಾಗಿ ಅಭಿವೃದ್ಧಿ ಸಾಧಿಸಿರುವ ಬಗ್ಗೆ ಹಾಗೂ ನಕ್ಸಲ್‌ ಸಮಸ್ಯೆಗಳನ್ನು ಬಗೆಹರಿಸಿದ ಬಗ್ಗೆ ವಿವರಿಸಿದರು.

ಈ ವೇಳೆ ಮಾತನಾಡಿದ ಶಾಸಕ ಎಂ.ಸತೀಶ್‌ ರೆಡ್ಡಿ, ಈಗಾಗಲೇ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿಗಳು ಜರುಗಿವೆ. ವಿದ್ಯಾವಂತರಾದ ತಾವುಗಳು ಮತದಾನದ ಬಗ್ಗೆ ಗಮನಹರಿಸಿ ಮತ್ತೊಮ್ಮೆ ಬಿಜೆಪಿಗೆ ಅಧಿಕಾರ ನೀಡಬೇಕೆಂದು ಮನವಿ ಮಾಡಿದರು. ಸಂಸದ ತೇಜಸ್ವಿ ಸೂರ್ಯ, ಬೆಂಗಳೂರು ನಗರ ಜಿಲ್ಲೆ ಬಿಜೆಪಿ ಮಹಿಳಾ ಆಧ್ಯಕ್ಷೆ ವಿಜಯಲಕ್ಷ್ಮೇ ಆನಂದ್‌, ಮಾಜಿ ಬಿಬಿಎಂಪಿ ಸದಸ್ಯ ಗುರುಮೂರ್ತಿ ರೆಡ್ಡಿ ಮತ್ತಿತರರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!
Karnataka News Live: ದೇಗುಲ ಪ್ರವೇಶಿಸುವುದಿಲ್ಲ ಎಂದ ಕ್ರಿಶ್ಚಿಯನ್ ಮಿಲಿಟರಿ ಅಧಿಕಾರಿಯ ಅಮಾನತು ಎತ್ತಿ ಹಿಡಿದ ಸುಪ್ರೀಂಕೋರ್ಟ್‌ ಹೇಳಿದ್ದೇನು?