
ಬೆಂಗಳೂರು [ಡಿ.04]: ಚಿಕ್ಕಬಳ್ಳಾಪುರ ಕಾಂಗ್ರೆಸ್ ಮುಖಂಡರ ನಿಯೋಗ ಮಂಗಳವಾರ ನಗರದಲ್ಲಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಉಪ ಚುನಾವಣೆಯ ಗೆಲುವಿಗೆ ಕೊನೆಯ ಕ್ಷಣದ ತಂತ್ರಗಾರಿಕೆಗಳ ಕುರಿತು ಚರ್ಚೆ ನಡೆಸಿತು.
ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಉಸ್ತುವಾರಿ ಮಾಜಿ ಸಚಿವ ಶಿವಶಂಕರರೆಡ್ಡಿ, ಶಿಡ್ಲಘಟ್ಟಶಾಸಕ ವಿ.ಮುನಿಯಪ್ಪ ಮತ್ತಿತರ ನಾಯಕರ ನಿಯೋಗ ಸದಾಶಿವನಗರದ ನಿವಾಸದಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿತು.
ಡಿಕೆ ಸಹೋದರರ ವಿರುದ್ಧ ಗಂಭೀರ ಆರೋಪ...
ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿರುವ ಹಿನ್ನೆಲೆಯಲ್ಲಿ ಇಂದಿನಿಂದ ಮನೆ ಮನೆಯ ಪ್ರಚಾರ ನಡೆಸಬೇಕಾಗಿದೆ. ಕಾಂಗ್ರೆಸ್ ಭದ್ರಕೋಟೆಯಾಗಿರುವ ಚಿಕ್ಕಬಳ್ಳಾಪುರ ಕ್ಷೇತ್ರ ಯಾವುದೇ ಕಾರಣಕ್ಕೂ ಕೈತಪ್ಪದಂತೆ ನೋಡಿಕೊಳ್ಳಲು ದೊಡ್ಡ ಮಟ್ಟದಲ್ಲಿ ಬಹಿರಂಗ ಪ್ರಚಾರ ಸೇರಿದಂತೆ ಸಾಕಷ್ಟುಕಾರ್ಯಕ್ರಮಗಳನ್ನು ಇದುವರೆಗೂ ಮಾಡಲಾಗಿದೆ.
ಮತದಾನಕ್ಕೆ ಇನ್ನೊಂದು ದಿನವಷ್ಟೇ ಬಾಕಿ ಇದ್ದು, ಪಕ್ಷದ ಅಭ್ಯರ್ಥಿ ಎಂ.ಆಂಜಿನಪ್ಪ ಅವರ ಗೆಲುವಿಗೆ ಕೊನೆಯ ಕ್ಷಣದ ತಂತ್ರಗಾರಿಕೆಗಳು ಹೇಗಿರಬೇಕು ಎಂಬ ಕುರಿತು ಚರ್ಚೆ ನಡೆಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.