ಕೊಟ್ಟ ಮಾತಿನಂತೆ ಶಾಸಕ ಸ್ಥಾನಕ್ಕೆ ಪ್ರದೀಶ್ ಈಶ್ವರ್ ರಾಜೀನಾಮೆ; ವೈರಲ್ ಪತ್ರದ ಅಸಲಿಯತ್ತೇನು?

Published : Jun 05, 2024, 05:22 PM ISTUpdated : Jun 05, 2024, 05:23 PM IST
ಕೊಟ್ಟ ಮಾತಿನಂತೆ ಶಾಸಕ ಸ್ಥಾನಕ್ಕೆ ಪ್ರದೀಶ್ ಈಶ್ವರ್ ರಾಜೀನಾಮೆ; ವೈರಲ್ ಪತ್ರದ ಅಸಲಿಯತ್ತೇನು?

ಸಾರಾಂಶ

ಚಿಕ್ಕಬಳ್ಳಾಪುರದಲ್ಲಿ ಡಾ.ಕೆ. ಸುಧಾಕರ್ ಗೆದ್ದರೆ ರಾಜೀನಾಮೆ ಕೊಡುವುದಾಗಿ ಹೇಳಿದ್ದ ಶಾಸಕ ಪ್ರದೀಪ್ ಈಶ್ವರ್ ಅವರ ರಾಜೀನಾಮೆ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಚಿಕ್ಕಬಳ್ಳಾಪುರ (ಜೂ.05): ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಕ್ಷೇತ್ರಗಳಲ್ಲಿ ಒಂದಾದ ಚಿಕ್ಕಬಳ್ಳಾಪುರದಲ್ಲಿ ಸಚಿವರಾಗಿದ್ದ ಡಾ.ಕೆ. ಸುಧಾಕರ್ ಅವರನ್ನು ಸೋಲಿಸಿದ್ದ ಪ್ರದೀಪ್ ಈಶ್ವರ್ ಎಲ್ಲರ ಅಚ್ಚರಿಗೆ ಕಾರಣವಾಗಿದ್ದರು. ಇನ್ನು ಲೋಕಸಭಾ ಚುನಾವಣೆಯಲ್ಲಿ ಡಾ.ಕೆ. ಸುಧಾಕರ್ ಗೆದ್ದರೆ ರಾಜೀನಾಮೆ ಕೊಡುವುದಾಗಿ ಹೇಳಿದ್ದರು. ಈಗ ಸುಧಾಕರ್ ಗೆಲುವಿನ ಬೆನ್ನಲ್ಲಿಯೇ ಪ್ರದೀಪ್ ಈಶ್ವರ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಪತ್ರ ವೈರಲ್ ಆಗುತ್ತಿದೆ.

ಲೋಕಸಭಾ ಚುನಾವಣೆಯಲ್ಲಿ ಡಾ.ಕೆ. ಸುಧಾಕರ್ ಅವರು ಸೋಲುತ್ತಾರೆ. ಅವರೇನಾದರೂ ಚಿಕ್ಕಬಳ್ಳಾಪುರದಲ್ಲಿ ಒಂದೇ ಒಂದು ಮತ ಲೀಡ್ ತೆಗೆದುಕೊಂಡರೆ ತಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದರು. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ತಾನು ಭೋಗ ನಂದೀಶ್ವರ ದೇವಸ್ಥಾನದಲ್ಲಿ ಪ್ರಮಾಣ ಮಾಡುವುದಾಗಿ ಸವಾಲು ಹಾಕಿದ್ದರು. ನನ್ನ ಸವಾಲನ್ನು ಸ್ವೀಕರಿಸುವ ಒಪ್ಪಿದರೆ ಸುಧಾಕರ್ ಬಂದು ಪ್ರಮಾಣ ಮಾಡಲಿ ಎಂದು ಹೇಳಿದ್ದರು. ಆದರೆ, ಈಗ ಲೋಕಸಭಾ ಫಲಿತಾಂಶದಲ್ಲಿ ಡಾ.ಕೆ. ಸುಧಾಕರ್ ಗೆಲುವು ಖಚಿತವಾಗುತ್ತಿದ್ದಂತೆಯೇ ಈ ಹಿಂದೆ ಪ್ರದೀಪ್ ಈಶ್ವರ್ ಹೇಳಿದ್ದ ವಿಡಿಯೋ ವೈರಲ್ ಆಗಿತ್ತು. ಈ ಬಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಕೆಲವೇ ಕ್ಷಣಗಳಲ್ಲಿ ಪ್ರದೀಪ್ ಈಶ್ವರ್ ರಾಜೀನಾಮೆ ಕೊಡಲಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದರ ಬೆನ್ನಲ್ಲಿಯೇ ಈಗ ಪ್ರದೀಪ್ ಈಶ್ವರ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆಂಬ ಪತ್ರ ವೈರಲ್ ಆಗುತ್ತಿದೆ.

ಇನ್ಫೋಸಿಸ್ ಸುಧಾಮೂರ್ತಿ ಹರಕೆಯಿಂದಲೇ ಗೆದ್ದುಬಂದ ಹೃದಯವಂತ ಡಾ. ಸಿ.ಎನ್. ಮಂಜುನಾಥ್!

ಆದರೆ, ಈ ಬಗ್ಗೆ ಸ್ಪಷ್ಟೀಕರಣ ಕೊಟ್ಟಿರುವ ಶಾಸಕ ಪ್ರದೀಪ್ ಈಶ್ವರ್ ಅವರು, ಇದೆಲ್ಲ ಯಾರೂ ಕಿಡಿಗೇಡಿಗಳು ಮಾಡಿರುವ ಫೇಕ್ ಲೆಟರ್. ಆ ರೀತಿ ಯಾವುದೇ ರಾಜೀನಾಮೆ ಪತ್ರವನ್ನು ನಾನು ನೀಡಿಲ್ಲ. ಸುವರ್ಣ ನ್ಯೂಸ್ ಗೆ ಶಾಸಕ ಪ್ರದೀಪ್ ಈಶ್ವರ್ ಸ್ಪಷ್ಟನೆ ನೀಡಿದ್ದಾರೆ. ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ನನಗೆ ಬೆದರಿಕೆ ಕರೆಗಳು ಬರುತ್ತಿವೆ. ನಿನ್ನೆ ಸಂಜೆಯಿಂದ ಬೆದರಿಕೆ ಕರೆಗಳು ಬರಲು ಶುರುವಾಗಿದೆ. ಇದನ್ನೆಲ್ಲಾ ನಾನು ಪೋಲೀಸರ ಗಮನಕ್ಕೆ ತಂದಿದ್ದೇನೆ ಎಂದು ಮಾಹಿತಿ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ