ಕರ್ನಾಟಕದ ಮಾಜಿ ಶಾಸಕ ಕೊರೋನಾಗೆ ಬಲಿ

Published : May 10, 2021, 04:07 PM ISTUpdated : May 10, 2021, 04:22 PM IST
ಕರ್ನಾಟಕದ ಮಾಜಿ ಶಾಸಕ ಕೊರೋನಾಗೆ ಬಲಿ

ಸಾರಾಂಶ

* ಕೊರೋನಾ ಮಹಾಮಾರಿಗೆ ಮತ್ತೋರ್ವ ಕರ್ನಾಟಕದ ಹಿರಿಯ ರಾಜಕಾರಣಿ ಸಾವು * ಚಿಕ್ಕೋಡಿಯ ಮಾಜಿ ಶಾಸಕ ಕೊರೋನಾಗೆ ಬಲಿ * ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ

ಬೆಳಗಾವಿ, (ಮೇ.10): ಚಿಕ್ಕೋಡಿಯ ಮಾಜಿ ಶಾಸಕ ಮನೋಹರ ಕಟ್ಟಿಮನಿ (65) ಸೋಮವಾರ ಕೊರೋನಾ ಮಹಾಮಾರಿಯಿಂದ ಸಾವನ್ನಪ್ಪಿದ್ದಾರೆ. 

ಕಳೆದ ಕೆಲ ದಿನಗಳ ಹಿಂದೆ ಕೋವಿಡ್ ಸೋಂಕಿಗೆ ತುತ್ತಾಗಿದ್ದ ಅವರು ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು (ಸೋಮವಾರ) ಮೃತಪಟ್ಟಿದ್ದಾರೆ.

ಕರ್ನಾಟಕದ ಮಾಜಿ ಸಚಿವ ಕೊರೋನಾಗೆ ಬಲಿ, ಬಿಎಸ್‌ವೈ ಸಂತಾಪ

1990 ರ ಚುನಾವಣೆಯಲ್ಲಿ ಮನೋಹರ ಕಟ್ಟೀಮನಿ ಅವರು ಜನತಾದಳ (ಸಂಯುಕ್ತ) ದಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದರು. ಮೃತರಿಗೆ ಪತ್ನಿ, ಓರ್ವ ಪುತ್ರಿ ಹಾಗೂ ಪುತ್ರಿ ಇದ್ದಾರೆ.

ಇದೇ ಕಿಲ್ಲರ್ ಕೊರೋನಾ ಮಾಜಿ ಸಚಿವ ಕೆ.ಶಾಣಪ್ಪ ಅವರನ್ನ ಸಹ ಭಾನುವಾರ) ಬಲಿಪಡೆದಿದ್ದನ್ನು ಇಲ್ಲಿ ಸ್ಮರಿಸಬಹುದು. ಇನ್ನು ಸ್ಯಾಂಡಲ್‌ವುಡ್, ನಟ, ನಿರ್ಮಾಪಕರು ಸಹ ಕೊರೋನಾ ಮಹಾಮಾರಿಗೆ ಬಲಿಯಾಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾಂಗ್ರೆಸ್ ಸರ್ಕಾರ ಬದುಕಿದೆಯೋ ಸತ್ತಿದೆಯೋ ಗೊತ್ತಿಲ್ಲ: ಬಿ.ವೈ.ವಿಜಯೇಂದ್ರ ವಾಗ್ದಾಳಿ
ದುಡಿಯುವ ಮಹಿಳೆಗೆ ಪತಿ ಜೀವನಾಂಶ ಕೊಡಬೇಕಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು