‘ಮೋದಿಯ ಹನುಮಾನ್‌’ ಚಿರಾಗ್‌ ಮೋಡಿ : 29 ರಲ್ಲಿ 20 ಸ್ಥಾನ ಜಯ

Kannadaprabha News   | Kannada Prabha
Published : Nov 15, 2025, 04:47 AM IST
Bihar poll

ಸಾರಾಂಶ

ಈ ಬಾರಿಯ ಬಿಹಾರ ಚುನಾವಣೆಯಲ್ಲಿ ಎನ್‌ಡಿಎದ ಅತಿದೊಡ್ಡ ಗೆಲುವಿನಲ್ಲಿ ಮೈತ್ರಿಕೂಟದ ಭಾಗವಾಗಿರುವ ಚಿರಾಗ್‌ ಪಾಸ್ವಾನ್‌ ಕೂಡಾ ಪ್ರಮುಖ ಪಾತ್ರ ವಹಿಸಿದ್ದಾರೆ. ಚಿರಾಗ್‌ ನೇತೃತ್ವದ ಲೋಕ ಜನಶಕ್ತಿ ಪಾರ್ಟಿ (ರಾಮ್‌ ವಿಲಾಸ್‌) ಕಣಕ್ಕಿಳಿದ 29ರ ಪೈಕಿ 19 ಸ್ಥಾನಗಳಲ್ಲಿ ಗೆದ್ದು ಎಲ್ಲರ ಹುಬ್ಬೇರುವಂತೆ ಮಾಡಿದೆ.

ಪಟನಾ: ಈ ಬಾರಿಯ ಬಿಹಾರ ಚುನಾವಣೆಯಲ್ಲಿ ಎನ್‌ಡಿಎದ ಅತಿದೊಡ್ಡ ಗೆಲುವಿನಲ್ಲಿ ಮೈತ್ರಿಕೂಟದ ಭಾಗವಾಗಿರುವ ಚಿರಾಗ್‌ ಪಾಸ್ವಾನ್‌ ಕೂಡಾ ಪ್ರಮುಖ ಪಾತ್ರ ವಹಿಸಿದ್ದಾರೆ. ಚಿರಾತ್‌ ನೇತೃತ್ವದ ಲೋಕ ಜನಶಕ್ತಿ ಪಾರ್ಟಿ (ರಾಮ್‌ ವಿಲಾಸ್‌) ಕಣಕ್ಕಿಳಿದ 29ರ ಪೈಕಿ 19 ಸ್ಥಾನಗಳಲ್ಲಿ ಗೆದ್ದು ಎಲ್ಲರ ಹುಬ್ಬೇರುವಂತೆ ಮಾಡಿದೆ.

ಎಲ್‌ಜೆಪಿ 19 ಸ್ಥಾನಗಳನ್ನು ಗೆಲ್ಲುವ ಮೂಲಕ ಅಚ್ಚರಿ ಮೂಡಿಸಿದೆ

243 ಕ್ಷೇತ್ರಗಳ ಪೈಕಿ ಬಿಜೆಪಿ ಮತ್ತು ಜೆಡಿಯು 101 ಕ್ಷೇತ್ರ ಹಂಚಿಕೊಂಡವು. ಆದರೆ ಚಿರಾಗ್‌ ಪಾಸ್ವಾನ್‌ ಪ್ರಯಾಸಪಟ್ಟು 29 ಕ್ಷೇತ್ರ ಪಡೆದಿದ್ದರು. ಕಳೆದ ಚುನಾವಣೆಯಲ್ಲಿ ಕೇವಲ 1 ಸ್ಥಾನ ಪಡೆದಿದ್ದ ಪಕ್ಷಕ್ಕೆ ಇಷ್ಟೊಂದು ಕ್ಷೇತ್ರ ನೀಡಿದ್ದಕ್ಕೆ ಅಪಸ್ವರ ಕೇಳಿಬಂದಿತ್ತು. ಆದರೆ ಇದೀಗ ಎಲ್‌ಜೆಪಿ 19 ಸ್ಥಾನಗಳನ್ನು ಗೆಲ್ಲುವ ಮೂಲಕ ಅಚ್ಚರಿ ಮೂಡಿಸಿದೆ.

2020ರಲ್ಲಿ ನಿತೀಶ್‌ ಕುಮಾರ್‌ ಜೊತೆಗಿನ ಭಿನ್ನಾಭಿಪ್ರಾಯ

2020ರಲ್ಲಿ ನಿತೀಶ್‌ ಕುಮಾರ್‌ ಜೊತೆಗಿನ ಭಿನ್ನಾಭಿಪ್ರಾಯದಿಂದಾಗಿ ಎಲ್‌ಜೆಪಿಯು ಸ್ವತಂತ್ರವಾಗಿ ಸ್ಪರ್ಧಿಸಿತ್ತು. ಸ್ಪರ್ಧಿಸಿದ್ದ 130ರಲ್ಲಿ ಕೇವಲ ಒಂದು ಕ್ಷೇತ್ರದಲ್ಲಿ ಗೆಲುವು ಸಾಧಿಸಿತ್ತು. ಕೆಲವೆಡೆ ಜೆಡಿಯುವಿನ ಮತ ಕಸಿಯುವಲ್ಲಿಯೂ ಯಶಸ್ವಿಯಾಗಿತ್ತು. ಆದರೆ 2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಎಲ್ಲಾ 5 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು.

ಇದು ‘ಯುವ ಬಿಹಾರಿ’ ಎಂದೇ ತಮ್ಮನ್ನು ಕರೆದುಕೊಳ್ಳುವ 43 ವರ್ಷದ ಚಿರಾಗ್‌ರ ಆತ್ಮವಿಶ್ವಾಸ ಹೆಚ್ಚಿಸಿತ್ತು. ಹೀಗಾಗಿ ಈ ಬಾರಿ ಕಷ್ಟಪಟ್ಟು 29 ಕ್ಷೇತ್ರಗಳನ್ನು ಪಡೆದುಕೊಂಡಿದ್ದರು. ಜೊತೆಗೆ, ತಾವು ಉಪಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಎಂದು ಬಿಂಬಿಸಿಕೊಂಡಿದ್ದರು. ತಾನು ‘ಮೋದಿಯವರ ಹನುಮಾನ್‌’ ಎನ್ನುತ್ತಾ ಭರ್ಜರಿ ಪ್ರಚಾರ ನಡೆಸಿದ್ದರು. ಹೀಗಾಗಿ 19 ಸ್ಥಾನಗಳನ್ನು ಗೆದ್ದು ಹೊಸ ಭರವಸೆ ಮೂಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬಂಗಾರಪ್ಪ ಅವರ ಹೆಸರಿಗೆ ತಕ್ಕ ರೀತಿ ಮಧು ಮಾತನಾಡಲಿ: ಆರಗ ಜ್ಞಾನೇಂದ್ರ ತಿರುಗೇಟು
ಸಮಸ್ಯೆಗಳ ನಿವಾರಣೆ, ಸವಾಲುಗಳಿಗೆ ಧಾರ್ಮಿಕ ಗುರುಗಳಿಂದ ಪರಿಹಾರ: ಬಿ.ವೈ.ವಿಜಯೇಂದ್ರ