ಕೇಂದ್ರ ಸಂಪುಟ ವಿಸ್ತರಣೆ: ಕುಟುಂಬ ಸಮೇತ ದಿಲ್ಲಿಗೆ ಹೊರಟ ಕರ್ನಾಟಕದ ಸಂಸದ

Published : Jul 06, 2021, 04:07 PM IST
ಕೇಂದ್ರ ಸಂಪುಟ ವಿಸ್ತರಣೆ: ಕುಟುಂಬ ಸಮೇತ ದಿಲ್ಲಿಗೆ ಹೊರಟ ಕರ್ನಾಟಕದ ಸಂಸದ

ಸಾರಾಂಶ

* ಕೇಂದ್ರ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ * ಕುಟುಂಬ ಸಮೇತ ದಿಲ್ಲಿಗೆ ಹೊರಟ ಕರ್ನಾಟಕದ ಸಂಸದ * ಕುತೂಹಲ ಮೂಡಿದ ಸಂಸದನ ದೆಹಲಿ ಪ್ರಯಾಣ

ಬೆಂಗಳೂರು/ನವದೆಹಲಿ, (ಜುಲೈ. 06): ಗುರುವಾರ ಅಂದ್ರೆ ಜುಲೈ 8ರಂದು  ಬಹು ನಿರೀಕ್ಷಿತ ಕೇಂದ್ರ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ ಆಗಿದೆ.

 ಈ ಹಿನ್ನೆಲೆ ರಾಜ್ಯದಿಂದ ಯಾರಿಗೆಲ್ಲಾ ಕೇಂದ್ರದಲ್ಲಿ ಸ್ಥಾನಮಾನ ಸಿಗಬಹುದು? ಸೆಂಟ್ರಲ್‌ ಕ್ಯಾಬಿನೆಟ್‌ಗೆ ಯಾರೆಲ್ಲಾ ಸೇರ್ಪಡೆಯಾಗ್ತಾರೆ ಅನ್ನೋ ಚರ್ಚೆಗಳು ನಡೆಯುತ್ತಿವೆ. ಇದರ ಮಧ್ಯೆ ಚಿತ್ರದುರ್ಗ ಸಂಸದ ಕುಟುಂಬ ಸಮೇತ ದೆಹಲಿಯತ್ತ ಹೊರಟಿದ್ದು, ಕುತೂಹಲ ಮೂಡಿಸಿದೆ.

ಕೇಂದ್ರ ಸಂಪುಟ ವಿಸ್ತರಣೆ? ಹೊಸಮುಖ, ಟೆಕ್ನೋಕ್ರಾಟ್‌ಗಳಿಗೆ ಸ್ಥಾನ?

ಕೇಂದ್ರ ಸಚಿವ ಸಂಪುಟದಲ್ಲಿ ನಾರಾಯಣಸ್ವಾಮಿಗೂ ಸ್ಥಾನ ಸಿಗುವ ಸಾಧ್ಯತೆ ಹಿನ್ನೆಲೆಯಲ್ಲಿ ದೆಹಲಿಯತ್ತ ದೌಡಾಯಿಸಿದ್ದಾರೆ ಎನ್ನಲಾಗುತ್ತಿದೆ. ಮೋದಿ ಸಂಪುಟದಲ್ಲಿ ನಾರಾಯಣಸ್ವಾಮಿಗೆ ಸಚಿವ ಸ್ಥಾನ ಸಿಗುವುದು ಖಚಿತ ಎಂದು ಬಿಜೆಪಿಯ ಮೂಲಗಳು ತಿಳಿಸಿವೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಎ. ನಾರಾಯಣಸ್ವಾಮಿ, ರಾಜ್ಯದಿಂದ ಯಾರು ಸಚಿವರಾಗುತ್ತಿದ್ದಾರೆ ಎಂದು ನನಗೆ ಗೊತ್ತಿಲ್ಲ. ನನಗೆ ಕೇಂದ್ರ ಸಂಪುಟದಲ್ಲಿ ಸ್ಥಾನ ನೀಡಿದರೆ ಯಶಸ್ವಿಯಾಗಿ ನಿರ್ವಹಿಸುತ್ತೇನೆ ಎಂದು ಹೇಳಿದರು.

ನನಗೆ ಸಚಿವ ಸ್ಥಾನ ನೀಡುವ ಬಗ್ಗೆ ಮಾಹಿತಿ ಇಲ್ಲ, ಕರೆಯೂ ಬಂದಿಲ್ಲ. ಪಕ್ಷದ ಸೂಚನೆಯನ್ನು ಪಾಲಿಸುತ್ತೇನೆ. ಶಾಸಕ, ಸಚಿವ, ಸಂಸದನಾಗಿಯೂ ಕಾರ್ಯನಿರ್ವಹಿಸಿದ್ದೇನೆ. ಯಾವ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ. ಸಂಪುಟ ಪುನಾರಚನೆಯನ್ನು ಕಣ್ತುಂಬಿಕೊಳ್ಳುತ್ತೇನೆ. ಕುಟುಂಬದವರಿಗೆ ಹಿಮಾಲಯ ತೋರಿಸಲು ಕರೆದುಕೊಂಡು ಹೋಗುತ್ತಿದ್ದೇನೆ ಅಷ್ಟೇ ಎಂದರು.

ನಮ್ಮನ್ನು ಎಲ್ಲಿಗೂ ಕರೆದುಕೊಂಡು ಹೋಗಿಲ್ಲ ಎಂದು ಹೇಳುತ್ತಿದ್ದರು. ಹಾಗಾಗಿ ಕುಟುಂಬಸ್ಥರನ್ನು ಹಿಮಾಲಯಕ್ಕೆ ಕರೆದುಕೊಂಡು ಹೋಗುತ್ತಿದ್ದೇನೆ ಎಂದು ಹೇಳುವ ಮೂಲಕ ಯಾವುದೇ ಗುಟ್ಟು ಬಿಟ್ಟುಕೊಡಲಿಲ್ಲ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ