ಸಚಿವ ರಾಜಣ್ಣ ಹನಿಟ್ರ್ಯಾಪ್‌ ಕೇಸ್‌ ಅಂತಿಮ ವರದಿಗೆ ಸಿಐಡಿ ಸಿದ್ದತೆ

Kannadaprabha News   | Kannada Prabha
Published : May 30, 2025, 06:03 AM IST
kn rajanna

ಸಾರಾಂಶ

ಸಾಕ್ಷ್ಯಧಾರಗಳ ಕೊರತೆ ಹಿನ್ನೆಲೆಯಲ್ಲಿ ರಾಜ್ಯ ಸಹಕಾರ ಮಂತ್ರಿ ಕೆ.ಎನ್‌.ರಾಜಣ್ಣ ಅವರ ಮೇಲಿನ ಹನಿಟ್ರ್ಯಾಪ್‌ ಯತ್ನ ಆರೋಪ ಕುರಿತ ವಿಚಾರಣೆಯನ್ನು ಮುಕ್ತಾಯಗೊಳಿಸಿ ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸಲು ಅಪರಾಧ ತನಿಖಾ ಇಲಾಖೆ (ಸಿಐಡಿ) ಸಿದ್ಧತೆ ನಡೆಸಿದೆ.

ಬೆಂಗಳೂರು (ಮೇ.30): ಸಾಕ್ಷ್ಯಧಾರಗಳ ಕೊರತೆ ಹಿನ್ನೆಲೆಯಲ್ಲಿ ರಾಜ್ಯ ಸಹಕಾರ ಮಂತ್ರಿ ಕೆ.ಎನ್‌.ರಾಜಣ್ಣ ಅವರ ಮೇಲಿನ ಹನಿಟ್ರ್ಯಾಪ್‌ ಯತ್ನ ಆರೋಪ ಕುರಿತ ವಿಚಾರಣೆಯನ್ನು ಮುಕ್ತಾಯಗೊಳಿಸಿ ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸಲು ಅಪರಾಧ ತನಿಖಾ ಇಲಾಖೆ (ಸಿಐಡಿ) ಸಿದ್ಧತೆ ನಡೆಸಿದೆ. ಈ ಸಂಬಂಧ ಸಿಐಡಿ ಡಿಜಿಪಿ ಆಗಿರುವ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಪ್ರಭಾರ) ಡಾ.ಎಂ.ಎ.ಸಲೀಂ ಅವರೊಂದಿಗೆ ವಿಚಾರಣಾ ತಂಡದ ಅಧಿಕಾರಿಗಳು ಸಮಾಲೋಚನೆ ನಡೆಸಿದ್ದಾರೆ.

ಈ ವಿಚಾರಣಾ ವರದಿ ಬಗ್ಗೆ ಸಲೀಂ ಅವರ ಪರಾಮರ್ಶೆ ಬಳಿ ಸರ್ಕಾರಕ್ಕೆ ಸಲ್ಲಿಕೆಯಾಗಲಿದೆ ಎಂದು ಮೂಲಗಳು ಹೇಳಿವೆ. ಸಹಕಾರ ಸಚಿವರಿಗೆ ಹನಿಟ್ರ್ಯಾಪ್ ಯತ್ನ ಆರೋಪ ಕುರಿತ ವಿಚಾರಣೆ ನಡೆದಿದ್ದು, ಇನ್ನು ಅಂತಿಮ ವರದಿ ಸಲ್ಲಿಕೆಯಾಗಿಲ್ಲ. ಈ ಬಗ್ಗೆ ಡಿಜಿ-ಐಜಿಪಿ ಅವರ ನಿರ್ದೇಶನ ಬಳಿಕ ಮುಂದುವರೆಯುತ್ತೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ವಿಧಾನಸಭಾ ಅಧಿವೇಶನ ವೇಳೆ ತಮಗೆ ಹನಿಟ್ರ್ಯಾಪ್‌ ಯತ್ನ ನಡೆದಿತ್ತು ಎಂದು ಸಚಿವ ರಾಜಣ್ಣ ಸ್ಫೋಟಕ ಹೇಳಿಕೆ ಕೊಟ್ಟಿದ್ದರು.

ತರುವಾಯ ಈ ಬಗ್ಗೆ ವಿಚಾರಣೆ ನಡೆಸಿ ಕಾನೂನು ಕ್ರಮ ಜರುಗಿಸುವಂತೆ ಗೃಹ ಸಚಿವರಿಗೆ ಅವರು ಮನವಿ ಪತ್ರ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಸಿಐಡಿಗೆ ಸರ್ಕಾರ ಸೂಚಿಸಿತ್ತು. ಆದರೆ ವಿಚಾರಣೆ ವೇಳೆ ಆರೋಪಕ್ಕೆ ಪೂರಕವಾದ ಪುರಾವೆಗಳು ಸಿಐಡಿಗೆ ಲಭ್ಯವಾಗದೆ ಪ್ರಕರಣ ಸವಾಲಾಗಿತ್ತು. ಅಲ್ಲದೆ, ತಮ್ಮ ಆರೋಪಕ್ಕೆ ಸಚಿವ ರಾಜಣ್ಣ ಕೂಡ ವಿಚಾರಣೆ ನಡೆಸಿದಾಗ ಸ್ಪಷ್ಟ ಮಾಹಿತಿ ನೀಡಲಿಲ್ಲ. ಹೀಗಾಗಿ ಸಾಕ್ಷ್ಯಾಧಾರ ಕೊರತೆ ಮುಂದಿಟ್ಟು ವಿಚಾರಣೆಗೆ ಶುಭಂ ಹೇಳಲು ಸಿಐಡಿ ಮುಂದಾಗಿದೆ ಎಂದು ತಿಳಿದು ಬಂದಿದೆ.

ರೈತರು ಕೃಷಿ ಪದ್ಧತಿಯಲ್ಲಿ ತಂತ್ರಜ್ಞಾನ ಅಳವಡಿಸಿಕೊಳ್ಳಿ: ರಾಜ್ಯದ ರೈತರಿಗೆ,ಕೃಷಿ ಕಾರ್ಮಿಕರಿಗೆ ಕಾಂಗ್ರೆಸ್‌ ಸರ್ಕಾರ ಕೃಷಿ ಪದ್ಧತಿಯಲ್ಲಿ ಹೊಸ ಹೊಸ ತಂತ್ರಜ್ಞಾನ ಪರಿಚಯಿಸುತ್ತಿದ್ದು, ರೈತರು ಈ ಕೃಷಿ ಪದ್ಧತಿ ಅಳವಡಿಸಿಕೊಂಡು ಜೀವನ ಮಟ್ಟ ಸುಧಾರಿಸಿಕೊಳ್ಳುವಂತೆ ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಕರೆ ನೀಡಿದರು. ಪಟ್ಟಣದ ಎಪಿಎಂಸಿ ಆವರಣದಲ್ಲಿ ಕೃಷಿ ಇಲಾಖೆಯಿಂದ ಗುಣ ನಿಯಂತ್ರಣ ಮತ್ತು ಆತ್ಮ ಯೋಜನೆಯಡಿ 2025- 26ನೇ ಸಾಲಿನ ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ರೈತರು ವ್ಯವಸಾಯದಲ್ಲಿ ಹೆಚ್ಚು ರಾಸಾಯನಿಕ ಗೊಬ್ಬರ ಬಳಸದೇ ಸಾಂಪ್ರದಾಯಿಕ ಗೊಬ್ಬರ ಬಳಸಿ ಹೆಚ್ಚು ಲಾಭದ ಬೆಳೆಗಳನ್ನು ಬೆಳೆಯಬೇಕು. ಭೂಮಿಯ ಫಲವತ್ತತೆ ಕಾಪಾಡಲು ಮಣ್ಣನ್ನು ಸಕಾಲಕ್ಕೆ ಪರೀಕ್ಷೆಗೆ ಒಳಪಡಿಸಬೇಕು. ಮಾಗಿ ಉಳುಮೆ ಹಾಗೂ ಗೋಡು ಒಡೆಯುವ ಪದ್ಧತಿ ಕಣ್ಮರೆಯಾಗಿದ್ದು, ಕೃಷಿಗೆ ಸಂಬಂಧಿಸಿದಂತೆ ಹಿರಿಯರ ಮಾರ್ಗದರ್ಶನ ಪಡೆದು ಹೆಚ್ಚು ಲಾಭದಾಯಕ ಕೃಷಿ ಬೆಳೆಗಳನ್ನು ಬೆಳೆಯಲು ರೈತರು ಮುಂದಾಗಬೇಕು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ
ನ್ಯಾಷನಲ್ ಹೆರಾಲ್ಡ್ ಪ್ರಕರಣ ರೀತಿ RSS ವಿರುದ್ಧ ಯಾಕೆ ಕೇಸ್ ಇಲ್ಲ? ಕೇಂದ್ರದ ವಿರುದ್ಧ ಪ್ರಿಯಾಂಕ್ ಪ್ರಶ್ನೆಗಳ ಸುರಿಮಳೆ!