ಯಾದಗಿರಿ: ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ, ಕಲ್ಲು ತೂರಾಟ, ಉದ್ವಿಗ್ನ ವಾತಾವರಣ

Published : Apr 06, 2023, 08:45 PM IST
ಯಾದಗಿರಿ: ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ, ಕಲ್ಲು ತೂರಾಟ, ಉದ್ವಿಗ್ನ ವಾತಾವರಣ

ಸಾರಾಂಶ

ಸುರಪುರದ ಹಾಲಿ ಶಾಸಕ ರಾಜೂಗೌಡ ಹಾಗೂ ಮಾಜಿ ಶಾಸಕ, ಕಾಂಗ್ರೆಸ್‌ನ ರಾಜಾ ವೆಂಕಟಪ್ಪ ನಾಯಕರ ನಡುವಿನ ಬಣಗಳ ಜಂಗೀಕುಸ್ತಿಗೆ ಇದು ಸಾಕ್ಷಿಯಾದಂತಾಗಿದೆ. ಕಲ್ಲು ತೂರಾಟದಲ್ಲಿ ಹದಿನೈದಕ್ಕೂ ಹೆಚ್ಚು ವಾಹನಗಳು ಜಖಂಗೊಂಡಿವೆ. 

ಯಾದಗಿರಿ(ಏ.06):  ಚುನಾವಣೆ ಘೋಷಣೆಯಾಗುತ್ತಿದ್ದಂತೆಯೇ ಜಿಲ್ಲೆಯ ಸುರಪುರದಲ್ಲಿ ನಾಯಕರ ನಡುವಿನ ರಾಜಕೀಯ ಕಲಹ ಮತ್ತಷ್ಟು ಕಾವೇರುತ್ತಿರುತ್ತಿದೆ. ಹುಣಸಗಿ ತಾಲೂಕಿನ ಕೊಡೇಕಲ್ ಗ್ರಾಮದಲ್ಲಿ ಇಂದು(ಗುರುವಾರ) ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವಿನ ವಾಗ್ವಾದ ಕಲ್ಲು ತೂರಾಟದ ಘಟನೆಗೆ ಸಾಕ್ಷಿಯಾಗಿದೆ. ಇದು ಕಾಲಜ್ಞಾನಿ ಬಸವಣ್ಣನ ನಾಡು ಕೊಡೇಕಲ್ ಗ್ರಾಮದಲ್ಲಿ ಉದ್ವಿಗ್ನಕ್ಕೆ ಕಾರಣವಾಗಿದೆ. 

ಸುರಪುರದ ಹಾಲಿ ಶಾಸಕ ರಾಜೂಗೌಡ ಹಾಗೂ ಮಾಜಿ ಶಾಸಕ, ಕಾಂಗ್ರೆಸ್‌ನ ರಾಜಾ ವೆಂಕಟಪ್ಪ ನಾಯಕರ ನಡುವಿನ ಬಣಗಳ ಜಂಗೀಕುಸ್ತಿಗೆ ಇದು ಸಾಕ್ಷಿಯಾದಂತಾಗಿದೆ. ಕಲ್ಲು ತೂರಾಟದಲ್ಲಿ ಹದಿನೈದಕ್ಕೂ ಹೆಚ್ಚು ವಾಹನಗಳು ಜಖಂಗೊಂಡಿವೆ. ಚುನಾವಣಾ ಪ್ರಚಾರಕ್ಕೆಂದು  ನಾರಾಯಣಪುರಕ್ಕೆ ಹೊರಟಿದ್ದ ವೇಳೆ, ಕೊಡೇಕಲ್ ಪಟ್ಟಣದಲ್ಲಿ ಇಂತಹ ಘಟನೆ ನಡೆದಿದೆ. ಕಾಲಜ್ಞಾನಿ ಜಾತ್ರೆಯ ವೇಳೆ ಜನಸಂದಣಿ ಇತ್ತು. ಈ ವೇಳೆ ವಾಹನಗಳ ಹಾರ್ನ್ ಹಾಕಿದ್ದು ಘರ್ಷಣೆಗೆ ಕಾರಣ ಎನ್ನಲಾಗುತ್ತಿದೆ. 

ಗುರುಮಠಕಲ್‌: ಕಾಂಗ್ರೆಸ್‌, ಜೆಡಿಎಸ್‌ ಕಾರ್ಯಕರ್ತರ ಮಧ್ಯೆ ಘರ್ಷಣೆ, ಚಿಂಚನಸೂರು ಮೇಲೆ ಹಲ್ಲೆ ಯತ್ನ

ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ್, ಸುರಪುರದ ಸಂಸ್ಥಾನದ ರಾಜಾ ಕೃಷ್ಣಪ್ಪ ನಾಯಕ್ ಹಾಗೂ ಶಾಂತಗೌಡ ಚೆನ್ನಪಟ್ಟಣ ಮುಂತಾದವರು ಉಪಸ್ಥಿತರಿದ್ದರು. ಸಿನಿಮೀಯ ರೀತಿ ನಡೆದ ಕಲ್ಲು ತೂರಾಟದಲ್ಲಿ ಜನ ಎಲ್ಲೆಂದರಲ್ಲಿ ಸುರಕ್ಷಿತ ತಾಣಗಳಲ್ಲಿ ದೌಡಾಯಿಸಿದರೆ, ಇದನ್ನು ನಿಯಂತ್ರಿಸಬೇಕಿದ್ದ ಪೊಲೀಸರೇ ಕ್ಷಣಕಾಲ ಗೊಂದಲಕ್ಕೀಡಾಗಿ, ಏನಾಗುತ್ತಿದೆ ಎಂದು ನೋಡುವಷ್ಟರಲ್ಲಿ ಕಲ್ಲುಗಳ ತೂರಾಟ ಜಾಸ್ತಿಯಾಗಿದೆ. ೨೦ಕ್ಕೂ ಹೆಚ್ಚು ವಾಹನಗಳು ಈ ಗಲಾಟೆಯಲ್ಲಿ ಜಖಂಗೊಂಡಿವೆ. 

ಕೊಡೇಕಲ್ ಗ್ರಾಮದಲ್ಲಿ ಕಾಲಜ್ಞಾನಿ ಬಸವಣ್ಣ ಪಲ್ಲಕ್ಕಿ ಉತ್ಸವ ನಡೆದಿತ್ತು. ಇದರಿಂದ ಭಾರೀ ಪ್ರಮಾಣದಲ್ಲಿ ಭಕ್ತರು ಸೇರಿದ್ದರು. ಇದರಿಂದ ವಾಹನಗಳು ಹೋಗಲು ದಾರಿಗಾಗಿ ಹಾರ್ನ್ ಹೊಡೆದಿದ್ದಾರೆ. ಇದೇ ಗಲಾಟೆಗೆ ಪ್ರಮುಖ ಕಾರಣ ಎನ್ನಲಾಗುತ್ತಿದೆ. ಇದೇ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಕಾರಿಗೆ ಅಡ್ಡವಾಗಿ ಕಾರೊಂದನ್ನು ನಿಲ್ಲಿಸಿದ್ದಾರೆ. ಇಲ್ಲಿ ವಾಗ್ವಾದ ನಡೆದಿದೆ. ನೋಡ ನೋಡುತ್ತಿದ್ದಂತೆಯೇ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ಕಲ್ಲು ತೂರಾಟ ನಡೆದಿದೆ.

ಗಲಾಟೆಯ ಚಿತ್ರೀಕರಣವನ್ನು ಮಾಡುತ್ತಿದ್ದ ಸಾರ್ವಜನಿಕರ ಕೆಲವು ಮೊಬೈಲ್‌ಗಳನ್ನು ಕಸಿದ ಕೆಲವರು, ಆ ಮೊಬೈಲ್‌ಗಳನ್ನು ಕಲ್ಲಿನಿಂದ ಜಜ್ಜಿ ಹಾಕಿದ್ದಾರೆಂಬ ಮಾತುಗಳಿವೆ. ಹೀಗಾಗಿ, ಪೊಲೀಸರೂ ಸಹ ಘಟನೆಯ ಚಿತ್ರೀಕರಣವನ್ನು ಮಾಡದಂತೆ ಸೂಚಿಸಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಸದ್ಯ, ಕೊಡೇಕಲ್ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ
ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ