
ಚಿಕ್ಕಮಗಳೂರು (ಆ.25): ಕಾಂಗ್ರೆಸ್ನವರ ಫ್ಯೂಸ್ ಅನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿತ್ತುಹಾಕುವ ಅಗತ್ಯವಿಲ್ಲ. ಅಲ್ಲಿರುವ ನಾಲ್ಕೈದು ನಾಯಕರ ಪೈಕಿ ಒಬ್ಬೊಬ್ಬ ನಾಯಕರ ಫ್ಯೂಸ್ ಅನ್ನು ಇನ್ನೊಬ್ಬ ನಾಯಕರೇ ಕಿತ್ತು ಹಾಕುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.
ಕಾಂಗ್ರೆಸ್ ನಾಯಕರ ಫ್ಯೂಸ್ ಅನ್ನು ನಾನೇ ಕಿತ್ತುಹಾಕಿದ್ದೇನೆ ಎಂಬ ಎಚ್.ಡಿ.ಕುಮಾರಸ್ವಾಮಿ ನೀಡಿರುವ ಹೇಳಿಕೆಗೆ ಸಂಬಂಧಿಸಿ ಮಂಗಳವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಾನು ಯಾರ ಹೆಸರೂ ಹೇಳಲಿಚ್ಛಿಸುವುದಿಲ್ಲ, ಕಾಂಗ್ರೆಸ್ನಲ್ಲಿ ನೇರ ಗುಂಪುಗಾರಿಕೆ ಇದೆ.
2023 ನನ್ನ ಜೀವನದ ಕೊನೆಯ ಹೋರಾಟ: ಕುಮಾರಸ್ವಾಮಿ ಶಾಕಿಂಗ್ ಹೇಳಿಕೆ
ವಲಸಿಗರು, ಹೊರ, ಒಳ ಕಾಂಗ್ರೆಸ್ಸಿಗರೆಂದು ಗುಂಪುಗಾರಿಗೆ ಬಹಿರಂಗವೂ ಆಗಿದೆ. ಸದ್ಯ ತಲೆ ಮೇಲೆ ತಟ್ಟಿಗುಂಪುಗಾರಿಕೆಯನ್ನು ನಿಲ್ಲಿಸಿದ್ದಾರೆ. ಆದರೆ ಅದು ಯಾವಾಗ ಪ್ರಜ್ವಲಿಸಿ ಸ್ಛೋಟಗೊಳ್ಳುತ್ತದೋ ಕಾಂಗ್ರೆಸ್ಸಿಗೇ ಗೊತ್ತಿಲ್ಲ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.