‘ಜಯವಾಹಿನಿ’ ಯಾತ್ರೆ ಆರಂಭ: ಕರ್ನಾಟಕದ ಹಲವೆಡೆ ಬೊಮ್ಮಾಯಿ ಅಬ್ಬರದ ರೋಡ್‌ ಶೋ

Published : Apr 24, 2023, 04:15 AM IST
‘ಜಯವಾಹಿನಿ’ ಯಾತ್ರೆ ಆರಂಭ: ಕರ್ನಾಟಕದ ಹಲವೆಡೆ ಬೊಮ್ಮಾಯಿ ಅಬ್ಬರದ ರೋಡ್‌ ಶೋ

ಸಾರಾಂಶ

ಪ್ರಸಕ್ತ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೊಮ್ಮಾಯಿ ನೇತೃತ್ವದ ‘ಜಯವಾಹಿನಿ’ ಯಾತ್ರೆ ಭಾನುವಾರದಿಂದ ಆರಂಭಗೊಂಡಿತು. ಬೆಂಗಳೂರಿನ ಹೊರವಲಯದ ಯಲಹಂಕ ವಿಧಾನಸಭಾ ಕ್ಷೇತ್ರದಿಂದ ಯಾತ್ರೆ ಆರಂಭಗೊಂಡು ದೊಡ್ಡಬಳ್ಳಾಪುರ, ನೆಲಮಂಗಲ, ತುಮಕೂರು, ತಿಪಟೂರು, ಅರಸೀಕೆರೆ, ಕಡೂರು ಮೊದಲಾದ ಕ್ಷೇತ್ರಗಳಲ್ಲಿ ಸಂಚರಿಸಿ ದಾವಣಗೆರೆ ತಲುಪಿತು. ಸಿಎಂ ರೋಡ್‌ ಶೋ ನಡೆಸಿದರು.

ಬೆಂಗಳೂರು(ಏ.24): ‘ಕಾಂಗ್ರೆಸ್‌ ಎಂದರೆ ಭ್ರಷ್ಟಾಚಾರ, ದುರಾಡಳಿತ, ಪಕ್ಷಪಾತ, ಒಡೆದಾಳುವ ನೀತಿ, ಅನ್ಯಾಯ, ಅನೀತಿ, ಅಧರ್ಮ. ಆದ್ದರಿಂದ ಕರ್ನಾಟಕದ ನೆಲದಿಂದ ಕಾಂಗ್ರೆಸ್‌ ಅನ್ನು ಶಾಶ್ವತವಾಗಿ ಕಿತ್ತೊಗೆಯಬೇಕು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದ್ದಾರೆ.

ಪ್ರಸಕ್ತ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೊಮ್ಮಾಯಿ ನೇತೃತ್ವದ ‘ಜಯವಾಹಿನಿ’ ಯಾತ್ರೆ ಭಾನುವಾರದಿಂದ ಆರಂಭಗೊಂಡಿತು. ಬೆಂಗಳೂರಿನ ಹೊರವಲಯದ ಯಲಹಂಕ ವಿಧಾನಸಭಾ ಕ್ಷೇತ್ರದಿಂದ ಯಾತ್ರೆ ಆರಂಭಗೊಂಡು ದೊಡ್ಡಬಳ್ಳಾಪುರ, ನೆಲಮಂಗಲ, ತುಮಕೂರು, ತಿಪಟೂರು, ಅರಸೀಕೆರೆ, ಕಡೂರು ಮೊದಲಾದ ಕ್ಷೇತ್ರಗಳಲ್ಲಿ ಸಂಚರಿಸಿ ದಾವಣಗೆರೆ ತಲುಪಿತು. ಸಿಎಂ ರೋಡ್‌ ಶೋ ನಡೆಸಿದರು.

ಬೀದರ್‌: ಭಾಲ್ಕಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನಿಗೆ ಚಾಕು ಇರಿತ..!

ಯಲಹಂಕದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಬೊಮ್ಮಾಯಿ, ಬಿಜೆಪಿಯ ಜಯವಾಹಿನಿ ಯಾತ್ರೆಯನ್ನು ಯಲಹಂಕದಿಂದ ಶುಭಾರಂಭ ಮಾಡಿದ್ದೇವೆ. 2013-18ರ ಅವಧಿಯಲ್ಲಿ ಸಿದ್ದರಾಮಯ್ಯ ರಾಜ್ಯದಲ್ಲಿ ಪೊಲೀಸ್‌ ನೇಮಕಾತಿ ಹಗರಣ, ಪ್ರಶ್ನೆ ಪತ್ರಿಕೆ ಬಹಿರಂಗ ಹಗರಣ, ಶಿಕ್ಷಕರ ನೇಮಕಾತಿ ಹಗರಣ ನಡೆಸಿದ್ದಾರೆ. 8 ಸಾವಿರ ಕೋಟಿ ರು. ಮೌಲ್ಯದ 843 ಎಕರೆ ರೀಡೂ ಹಗರಣ ಮಾಡಿ ಬೆಂಗಳೂರನ್ನು ಲೂಟಿ ಮಾಡಿದ್ದಾರೆ. ಇಂತಹ ಕಾಂಗ್ರೆಸ್‌ ಅನ್ನು ಕಿತ್ತೊಗೆದರೆ ಭ್ರಷ್ಟಾಚಾರ ಕಿತ್ತೊಗೆದಂತೆ. ಆದ್ದರಿಂದ ಕಾಂಗ್ರೆಸ್‌ ಮುಕ್ತ ಕರ್ನಾಟಕ ಮಾಡಿ ಎಂದು ಹೇಳಿದರು.

ಕಾಂಗ್ರೆಸ್‌ನವರು ಜಾತಿ ಜಾತಿ ನಡುವೆ ವಿಷ ಬೀಜ ಬಿತ್ತಿ ಜಾತಿ ವಿಭಜಿಸುವ ಕೆಲಸ ಮಾಡಿದ್ದಾರೆ. ಧರ್ಮ ಒಡೆಯುವ ಕೆಲಸ ಮಾಡಿದ್ದಾರೆ. ಅವರು ಕೊಟ್ಟಿರುವ ಗ್ಯಾರಂಟಿ ಕಾರ್ಡ್‌ ಜೀವ ಇಲ್ಲದ ವಿಸಿಟಿಂಗ್‌ ಕಾರ್ಡ್‌ ಇದ್ದಂತೆ. ಅದರಲ್ಲಿ ಉಪ್ಪಿನಕಾಯಿ ಹಾಕುವುದು ಬಿಟ್ಟರೆ ಬೇರೇನೂ ಮಾಡಲು ಬರುವುದಿಲ್ಲ. ಚುನಾವಣೆಯವರೆಗೂ ಅದು ಗ್ಯಾರಂಟಿ. ಚುನಾವಣೆ ನಂತರ ಅದು ಗಳಗಂಟಿ. ಆದ್ದರಿಂದ ಕಾಂಗ್ರೆಸ್‌ ಕಿತ್ತೊಗೆಯಲು ಕೆಂಪೇಗೌಡರು ಮೆಟ್ಟಿದ ಗಂಡು ಭೂಮಿಯಿಂದ ಪ್ರಚಾರ ಮಾಡುತ್ತಿದ್ದೇನೆ ಎಂದರು.

ಎಲ್ಲ ವರ್ಗಗಳನ್ನೂ ಸಮಾನವಾಗಿ ನೋಡಿಕೊಂಡಿರುವ ನಾಡಪ್ರಭು ಕೆಂಪೇಗೌಡರ ದಿಟ್ಟಆಡಳಿತ, ಕಾಯಕವೇ ಕೈಲಾಸ ಎಂದಿರುವ ಬಸವ ಪಥದ ಆಡಳಿತ, ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ದೀನ ದಲಿತರ ರಕ್ಷಣೆ ಮತ್ತು ಉದ್ಧಾರ ಮಾಡುವ ಆಡಳಿತ, ಕನಕದಾಸರ ದಾಸವಾಣಿ ಅನುಷ್ಠಾನ ಮಾಡುವ ಆಡಳಿತ ಕೊಡುವುದು ಬಿಜೆಪಿಯ ಧ್ಯೇಯವಾಗಿದೆ. ಬಿಜೆಪಿಯು ಆಂತರಿಕ ಮೀಸಲಾತಿ ನೀಡಿ ಹಿಂದುಳಿದ ವರ್ಗದ ಮೀಸಲಾತಿ ಹೆಚ್ಚಳ ಮಾಡಿದೆ. ಆದ್ದರಿಂದ ಡಬಲ್‌ ಎಂಜಿನ್‌ ಸರ್ಕಾರದ ಕೆಲಸಗಳನ್ನು ಮನೆಮನೆಗೆ ತಲುಪಿಸಬೇಕು ಎಂದು ಮನವಿ ಮಾಡಿದರು.

ದೊಡ್ಡಬಳ್ಳಾಪುರದಲ್ಲಿ ರೋಡ್‌ಶೋ:

ದೊಡ್ಡಬಳ್ಳಾಪುರದಲ್ಲಿ ರೋಡ್‌ ಶೋ ನಡೆಸಿ ಬಿಜೆಪಿ ಅಭ್ಯರ್ಥಿ ಧೀರಜ್‌ ಪರವಾಗಿ ಮತಯಾಚನೆ ಮಾಡಿ ಮಾತನಾಡಿದ ಅವರು, ಬಿಜೆಪಿ ದೊಡ್ಡ ಹೆಮ್ಮರವಾಗಿದ್ದು, ಗಿಡಗಳನ್ನು ಮಾತ್ರ ಕಾಂಗ್ರೆಸ್‌ನವರು ಸೇರ್ಪಡೆ ಮಾಡಿಕೊಂಡಿದ್ದಾರೆ. ಇದರಿಂದ ಬಿಜೆಪಿಗೇನೂ ತೊಂದರೆಯಿಲ್ಲ ಎಂದು ಸ್ಪಷ್ಟಪಡಿಸಿದರು.

ಕಾಂಗ್ರೆಸ್‌ ಕಾಲದಲ್ಲಿ ನೇಕಾರರು ಅನೇಕ ಸಮಸ್ಯೆ ಎದುರಿಸಿದ್ದರು. ನೇಕಾರ ಸಮ್ಮಾನ ಯೋಜನೆಯನ್ನು ನಮ್ಮ ನಾಯಕರಾದ ಯಡಿಯೂರಪ್ಪ ಆರಂಭಿಸಿದರು. ನೇಕಾರರಿಗೆ ನೀಡುತ್ತಿದ್ದ ಧನ ಸಹಾಯವನ್ನು 2 ಸಾವಿರದಿಂದ 5 ಸಾವಿರ ರುಪಾಯಿಗೆ ಹೆಚ್ಚಳ ಮಾಡಿದ್ದೇವೆ. 5 ಲಕ್ಷ ರು.ವರೆಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತಿದೆ. ನೇಕಾರರಿಗೆ ಆರೋಗ್ಯ, ಶಿಕ್ಷಣ ಕಲ್ಪಿಸಲು ಅಭಿವೃದ್ಧಿ ನಿಗಮ ಮಾಡಿದ್ದೇವೆ ಎಂದು ಹೇಳಿದರು.

ಹೂವು ಹಣ್ಣು ವ್ಯಾಪಾರ ಮಾಡುವ ತಿಗಳ ಸಮುದಾಯಕ್ಕೆ ನಿಗಮ ಸ್ಥಾಪಿಸಿದ್ದೇವೆ. ಗಾಣಿಗರ ಅಭಿವೃದ್ಧಿ ನಿಗಮ, ಒಕ್ಕಲಿಗರ ಅಭಿವೃದ್ಧಿ ನಿಗಮ, ವೀರಶೈವ ಅಭಿವೃದ್ಧಿ ನಿಗಮ, ಮರಾಠ ಅಭಿವೃದ್ಧಿ ನಿಗಮ ಸ್ಥಾಪಿಸಿದ್ದು, ಎಲ್ಲ ಸಮುದಾಯಗಳ ಅಭಿವೃದ್ಧಿಗೆ ನಮ್ಮ ಸರ್ಕಾರ ಶ್ರಮಿಸಿದೆ. ದೊಡ್ಡಬಳ್ಳಾಪುರದಲ್ಲಿ ಸ್ಯಾಟಲೈಟ್‌ ಟೌನ್‌ ನಿರ್ಮಿಸಲು ನಿರ್ಧರಿಸಲಾಗಿದೆ. ಬೆಂಗಳೂರಿನ ಎಲ್ಲ ಸೌಕರ್ಯ ದೊಡ್ಡಬಳ್ಳಾಪುರದಲ್ಲಿ ಸಿಗುವಂತೆ ಮಾಡುತ್ತೇವೆ ಎಂದು ಭರವಸೆ ನೀಡಿದರು.

ಜನಸಂಖ್ಯೆ ಆಧಾರದಲ್ಲಿ ಮೀಸಲಾತಿ ಇರಬೇಕು, 50% ಮೀಸಲಾತಿ ತೆಗೆದು ಹಾಕಿ: ಬಿಜೆಪಿ ವಿರುದ್ಧ ರಾಹುಲ್ ವಾಗ್ದಾಳಿ

ಶಾಸಕರನ್ನು ಮನೆಗೆ ಕಳುಹಿಸಿ:

ದೊಡ್ಡಬಳ್ಳಾಪುರದ ಹಾಲಿ ಶಾಸಕರು ಹತ್ತು ವರ್ಷ ಶಾಸಕರಾಗಿದ್ದಾರೆ. ಅವರನ್ನು ಈ ಬಾರಿ ಮನೆಗೆ ಕಳಿಸಬೇಕು. ದೊಡ್ಡಬಳ್ಳಾಪುರ ಅಭಿವೃದ್ಧಿಗೆ ಧೀರಜ್‌ಗೆ ಅವಕಾಶ ಕಲ್ಪಿಸಬೇಕು. ಮತ್ತೆ ನಮ್ಮ ಸರ್ಕಾರ ರಚನೆಯಾಗುತ್ತದೆ. ಈ ಭಾಗದಲ್ಲಿ ಕೆರೆ ಅಭಿವೃದ್ಧಿ ಮಾಡಬೇಕೆಂದು ಜನರ ಬೇಡಿಕೆ ಇದೆ. ಅದನ್ನು ಸಚಿವ ಸಂಪುಟದ ಮೊದಲ ಸಭೆಯಲ್ಲಿಯೇ ತೀರ್ಮಾನ ಮಾಡಲಾಗುವುದು. ಈ ಬಾರಿ ದೊಡ್ಡಬಳ್ಳಾಪುರದ ದೊಡ್ಡ ಜನರು ಧೀರಜ್‌ನನ್ನು ಆಯ್ಕೆ ಮಾಡಿ ಕಳುಹಿಸಿ ಎಂದು ಮನವಿ ಮಾಡಿದರು.

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

₹500 ಕೋಟಿ ಕೊಟ್ರೆ ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿ : ಸಿಧು ಪತ್ನಿ ಆರೋಪ
ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ