
ಬೆಂಗಳೂರು, (ಅ.09): ರಾಜ್ಯ ರಾಜಧಾನಿ ಬೆಂಗಳೂರು (Bengaluru) ನಗರ ಜಿಲ್ಲೆ ಉಸ್ತುವಾರಿಯ ಬಗ್ಗೆ ವಸತಿ ಸಚಿವ ವಿ.ಸೋಮಣ್ಣ (V Somanna) ಹಾಗೂ ಕಂದಾಯ ಸಚಿವ ಆರ್ ಅಶೋಕ್ (R Ashok) ನಡುವೆ ಬಹಿರಂಗ ವಾಕ್ಸಮರ ಶುರುವಾಗಿದೆ.
ಬೆಂಗಳೂರು ನಗರ ಉಸ್ತುವಾರಿಯನ್ನು (Bengaluru In-charge ) ತಮಗೆ ನೀಡುವಂತೆ ಸೋಮಣ್ಣ ಸಿಎಂಗೆ ಮನವಿ ಮಾಡಿದ್ರೆ, ಅತ್ತ ಅಶೋಕ್ ಸಹ ಸದ್ದಿಲ್ಲದೇ ಬೆಂಗಳೂರು ಉಸ್ತುವಾರಿ ಸ್ಥಾನಕ್ಕೆ ಕಸರತ್ತು ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಬ್ಬರ ನಡುವೆ ಪೈಪೋಟಿ ಜೋರಾಗಿದೆ.
ಅತ್ತ ಸಿಎಂ ನಡ್ಡಾ ಭೇಟಿ, ಇತ್ತ ಬೆಂಗಳೂರು ಉಸ್ತುವಾರಿಗಾಗಿ ಸಚಿವರ ಗುದ್ದಾಟ
ನವದೆಹಲಿಯಿಂದ (New Delhi) ಬೆಂಗಳೂರಿಗೆ ವಾಪಸ್ ಆಗುತ್ತಿದ್ದಂತೆಯೇ ನಗರ ಉಸ್ತುವಾರಿಗಾಗಿ ಫೈಟ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai), ಯಾರಿಗೆ ಯಾವ ಜಿಲ್ಲೆಯ ಉಸ್ತುವಾರಿ ಕೊಡಬೇಕು ಎಂಬುದರ ಬಗ್ಗೆ ತೀರ್ಮಾನ ಮಾಡ್ತೇವೆ. ಸಂಪುಟ ಸಚಿವರ ಜೊತೆ ಸೌಹಾರ್ದಯುತವಾಗಿ ಚರ್ಚೆ ಮಾಡಿ ತೀರ್ಮಾನ ಮಾಡ್ತೇನೆ ಎಂದು ಸ್ಪಷ್ಟಪಡಿಸಿದರು.
ಎಲ್ಲರೂ ನಮ್ಮವರೇ ಇದ್ದಾರೆ. ಯಾವುದೇ ರೀತಿಯ ತೊಂದರೆ ಆಗದ ರೀತಿ ನಿರ್ಧಾರ ಮಾಡುತ್ತೇನೆ. ಬೆಂಗಳೂರು ಬಹಳ ಮಹತ್ವದ್ದು. ಇದರ ಬಗ್ಗೆ ಎಲ್ಲರ ಜೊತೆ ಚರ್ಚಿಸಿ, ಸೌಹಾರ್ದಯುತವಾಗಿ ಸಮಸ್ಯೆ ಬಗೆಹರಿಸುತ್ತೇನೆ ಎಂದರು.
ಅಶೋಕ್ಗೆ ಬೆಂಗಳೂರು (Bangaluru) ಉಸ್ತುವಾರಿ ಕೊಟ್ಟರೆ ನನ್ನದೇನೂ ಅಭ್ಯಂತರವಿಲ್ಲ. ಆದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನಾನೊಂದು ಮನವಿ ಮಾಡಿದ್ದೇನೆ. ಬೆಂಗಳೂರು ಉಸ್ತುವಾರಿ ಕೊಡುವಾಗ ನನ್ನನ್ನು ಪರಿಗಣಿಸುವಂತೆ ಮನವಿ ಮಾಡಿರುವುದಾಗಿ ಸೋಮಣ್ಣ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.