ಸಂಪುಟ ವಿಸ್ತರಣೆ: ಹೋಟೆಲ್‌ನಲ್ಲಿ ದೋಸೆ ಸವಿಯುತ್ತಾ ಸಿಎಂ ಮಹತ್ವದ ಚರ್ಚೆ

Published : Jan 12, 2021, 10:45 PM IST
ಸಂಪುಟ ವಿಸ್ತರಣೆ: ಹೋಟೆಲ್‌ನಲ್ಲಿ ದೋಸೆ ಸವಿಯುತ್ತಾ ಸಿಎಂ ಮಹತ್ವದ ಚರ್ಚೆ

ಸಾರಾಂಶ

ಸಂಪುಟ ವಿಸ್ತರಣೆಯ ಕಸರತ್ತಿನಲ್ಲಿರುವ ಸಿಎಂ ಬಿಎಸ್​ ಯಡಿಯೂರಪ್ಪ, ಹೋಟೆಲ್​​ನಲ್ಲಿ ದೋಸೆ ಸವಿಯುತ್ತಾ ಆತ್ಮೀಯರೊಂದಿಗೆ ಚರ್ಚಿಸಿದರು.

ಬೆಂಗಳೂರು, (ಜ.12) : ಬಹುದಿನಗಳ ಬಳಿಕ ನಾಳೆ ಅಂದ್ರೆ ಜನವರಿ 13ರಂದು  7 ರಿಂದ 8 ಜನ ಶಾಸಕರು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.

ನಾಳೆ (ಬುಧವಾರ) ಮಧ್ಯಾಹ್ನ 3.50ಕ್ಕೆ ರಾಜಭವನದಲ್ಲಿ ಸಚಿವರ ಪ್ರಮಾಣವಚನ ಸ್ವೀಕಾರ ಕಾರ್ಯ ನಡೆಯಲಿದ್ದು, ಈ ಹಿನ್ನಲೆ ನೂತನ ಸಚಿವರಾಗಲಿರುವ ಶಾಸಕರಿಗೆ ಮುಖ್ಯಮಂತ್ರಿಗಳೇ ಕರೆ ಮಾಡಿ ಆಹ್ವಾನ ನೀಡುತ್ತಿದ್ದಾರೆ.

ಸಿಎಂ ಬಿಎಸ್‌ವೈ ಮತ್ತೊಂದು ಲಂಚ್ ಮೀಟಿಂಗ್: ಈ ಬಾರಿ ಕಾಂಗ್ರೆಸ್ ಶಾಸಕರು ಭಾಗಿ..!

ಮತ್ತೊಂದೆಡೆ ಸಚಿವಾಕಾಂಕ್ಷಿಗಳು ಕೊನೆ ಕ್ಷಣದವರೆಗೂ ಮಂತ್ರಿಗಿರಿಗಾಗಿ ಕಾವೇರಿ ನಿವಾಸಕ್ಕೆ ಭೇಟಿ ನೀಡಿ ಸಿಎಂ ಬಿಎಸ್ ಯಡಿಯೂರಪ್ಪಗೆ ದುಂಬಾಲು ಬಿದ್ದಿದ್ದಾರೆ.

ಸಂಪುಟ ವಿಸ್ತರಣೆಯ ಕಸರತ್ತಿನಲ್ಲಿರುವ ಸಿಎಂ ಬಿಎಸ್​ ಯಡಿಯೂರಪ್ಪ ಇಂದು (ಮಂಗಳವಾರ) ಬೆಂಗಳೂರಿನ ಶಿವಾನಂದ ಸರ್ಕಲ್ ಬಳಿಯಿರುವ ಜನಾರ್ದನ ಹೋಟೆಲ್​​ನಲ್ಲಿ ದೋಸೆ ಸವಿದು ಆತ್ಮೀಯರೊಂದಿಗೆ ಚರ್ಚಿಸಿದರು. 

ಸಿಎಂ ಜೊತೆ ಸಚಿವ ಆರ್ ಅಶೋಕ್ ಹಾಗೂ ಶಾಸಕರಾದ ಎಸ್ ಆರ್ ವಿಶ್ವನಾಥ್, ಎಂ ಕೃಷ್ಣಪ್ಪ ಸಾಥ್ ಕೊಟ್ಟರು. ಈ ವೇಳೆ ಸಂಪುಟ ವಿಸ್ತರಣೆ ಸಂಬಂಧಿಸಿದಂತೆ ಚರ್ಚೆಗಳು ಸಹ ನಡೆದಿವೆ ಎಂದು ತಿಳಿದುಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಎಂ ಸಿದ್ದರಾಮಯ್ಯರಿಂದ ರಾಜ್ಯದ ದಲಿತರ ಸರ್ವನಾಶ: ಮಾಜಿ ಸಂಸದ ಪ್ರತಾಪ್ ಸಿಂಹ
ಸಿಎಂ ಸಿದ್ದರಾಮಯ್ಯಗೆ ಪ್ರಧಾನಿ ಮೋದಿ ಜನಪ್ರಿಯತೆ ಸಹಿಸಲು ಸಂಕಷ್ಟ: ಬಿ.ವೈ.ವಿಜಯೇಂದ್ರ