
ಬೆಂಗಳೂರು, (ಡಿ.20): ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಥವಾ ವಿಲೀನವಾಗುತ್ತಾ ಎನ್ನುವ ಚರ್ಚೆಗಳು ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆ ಹುಟ್ಟುಹಾಕಿದೆ.
ಇನ್ನು ಈ ಬಗ್ಗೆ ಬಿಜೆಪಿ ಉಪಾಧ್ಯಕ್ಷ ಅರವಿಂದ್ ಲಿಂಬಾವಳಿ ಸಹ ಸುಳಿವು ಕೊಟ್ಟಿದ್ದಾರೆ. ಆದ್ರೆ, ಇದೀಗ ಇದಕ್ಕೆ ಸ್ವತಃ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡುವ ಮೂಲಕ ಸ್ಪಷ್ಟನೆ ಕೊಟ್ಟಿದ್ದಾರೆ.
BJP ಜೊತೆಗೆ ಜೆಡಿಎಸ್ ವಿಲೀನವಾಗುತ್ತಾ? ಬಿಜೆಪಿ ಉಪಾಧ್ಯಕ್ಷ ಸ್ಫೋಟಕ ಸುಳಿವು
ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಸಿಎಂ ಬಿಎಸ್ ವೈ, ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರು ವಿಧಾನ ಪರಿಷತ್ ಸಭಾಪತಿಗಳ ವಿಚಾರದಲ್ಲಿ ನಮ್ಮ ಪಕ್ಷಕ್ಕೆ ಬೆಂಬಲ ನೀಡಿದ್ದರಷ್ಟೇ. ಆದರೆ ಯಾವುದೇ ಜೆಡಿಎಸ್ ಶಾಸಕರು ಭಾರತೀಯ ಜನತಾ ಪಕ್ಷಕ್ಕೆ ಬರುವುದಾಗಲೀ ಅಥವಾ ಜೆಡಿಎಸ್ ಪಕ್ಷವನ್ನು ಭಾರತೀಯ ಜನತಾ ಪಕ್ಷದಲ್ಲಿ ವಿಲೀನಗೊಳಿಸುವಂತಹ ಗೊಂದಲಗಳ ವರದಿಗಳು ಶುದ್ಧ ಸುಳ್ಳು. ಅಂತಹ ಯಾವುದೇ ಸಂದರ್ಭ ಇಲ್ಲ ಎಂದು ಹೇಳುವ ಮೂಲಕ ಗೊಂದಲಗಳಿಗೆ ತೆರೆ ಎಳೆದರು.
ಪರಿಷತ್ ಸಭಾಪತಿ ವಿಚಾರದಲ್ಲಿ ಮಾತ್ರ ಕುಮಾರಸ್ವಾಮಿಯವರು ನಮಗೆ ಸಹಕಾರ ನೀಡುತ್ತಿದ್ದಾರೆಯೇ ವಿನಃ ಮತ್ತೇನೂ ಇಲ್ಲ. ಗೋಹತ್ಯೆ ನಿಷೇಧದ ಬಗ್ಗೆ ನಮ್ಮ ಬೆಂಬಲವಿಲ್ಲ ಎಂದು ಸಹ ಕುಮಾರಸ್ವಾಮಿ ಸ್ಪಷ್ಠವಾಗಿ ಹೇಳಿದ್ದಾರೆ. ವಿಧಾನಸಭೆಗೆ ಚುನಾವಣೆ ಇನ್ನೂ ಎರಡೂವರೆ ವರ್ಷ ಇದೆ. ವಿಲೀನದ ಬಗೆಗಿನ ಸುದ್ದಿಗಳು ಸತ್ಯಕ್ಕೆ ದೂರವಾಗಿವೆ ಎಂದು ಸಿಎಂ ಬಿಎಸ್ ವೈ ಹೇಳಿದ್ದಾರೆ.
ಗೋಹತ್ಯೆ ನಿಷೇಧದ ಬಗ್ಗೆ ನಮ್ಮ ಬೆಂಬಲವಿಲ್ಲ ಎಂದು ಸಹ ಕುಮಾರಸ್ವಾಮಿ ಸ್ಪಷ್ಠವಾಗಿ ಹೇಳಿದ್ದರಿಂದ ನಾವು ಸುಗ್ರೀವಾಜ್ಞೆ ಮೂಲಕ ಗೋಹತ್ಯೆ ನಿಷೇಧ ಜಾರಿಗೆ ತರುತ್ತಿದ್ದೇವೆ. ವಿಧಾನಸಭೆಗೆ ಚುನಾವಣೆ ಇನ್ನೂ ಎರಡೂವರೆ ವರ್ಷ ಇದೆ. ಈಗ ಕೇಳಿಬರುತ್ತಿರುವ ಸುದ್ದಿಗಳು ಸತ್ಯಕ್ಕೆ ದೂರವಾಗಿವೆ ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.