ಬಿಎಸ್‌ವೈ ಸಂಪುಟದ ಹೊಸ ಸಚಿವರಿಗೆ ಸಿಕ್ತು ಖಾತೆ, ಇಲ್ಲಿದೆ ಫೈನಲ್ ಲಿಸ್ಟ್

Published : Feb 10, 2020, 03:47 PM ISTUpdated : Feb 10, 2020, 05:51 PM IST
ಬಿಎಸ್‌ವೈ ಸಂಪುಟದ ಹೊಸ ಸಚಿವರಿಗೆ ಸಿಕ್ತು ಖಾತೆ, ಇಲ್ಲಿದೆ ಫೈನಲ್ ಲಿಸ್ಟ್

ಸಾರಾಂಶ

ಯಡಿಯೂರಪ್ಪ ಸರ್ಕಾರದ ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ| ನೂತನ ಸಚಿವರಿಗೆ ಸಿಕ್ತು ಖಾತೆ| ಯಾರಿಗೆ ಯಾವ ಖಾತೆ? ಇಲ್ಲಿದೆ ಫೈನಲ್ ಲಿಸ್ಟ್

ಬೆಂಗಳೂರು[ಫೆ.10]: ಅಂತೂ ಇಂತೂ ಯಡಿಯೂರಪ್ಪ ಸರ್ಕಾರದ ನೂತನ ಸಚಿವರಿಗೆ ಖಾತೆ ಹಂಚಿಕೆಯಾಗಿದ್ದು, ಫೈನಲ್ ಪಟ್ಟಿ ರೆಡಿಯಾಗಿದೆ. ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ಸಿದ್ಧಪಡಿಸಿರುವ ಈ ಪಟ್ಟಿಗೆ ರಾಜ್ಯಪಾಲ ವಜುಭಾಯಿ ವಾಲಾ ಅಂಕಿತ ಹಾಕಿದ್ದಾರೆ. ನಿರೀಕ್ಷೆಯಂತೆ ರಮೇಶ್ ಜಾರಕಿಹೊಳಿ ಹಾಗೂ ಎಸ್. ಟಿ. ಸೋಮಶೇಖರ್ ತಮಗೆ ಬೇಕಾದ ಖಾತೆ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಬಿ. ಎಸ್. ವೈ ಅಳೆದು ತೂಗಿ ಈ ಪಟ್ಟಿಯನ್ನು ಸಿದ್ಧಗೊಳಿಸಿದ್ದಾರೆ.

ಪ್ರಮಾಣ ವಚನ ಸ್ವೀಕಾರಕ್ಕೆ ನನಗೆ ಮನಸ್ಸಿರಲಿಲ್ಲ: ರಮೇಶ್‌ ಜಾರಕಿಹೊಳಿ

ಯಾರಿಗೆ ಯಾವ ಖಾತೆ?

* ರಮೇಶ್ ಜಾರಕಿಹೊಳಿ- ಜಲಸಂಪನ್ಮೂಲ ಖಾತೆ| ಬೇಡಿಕೆಯಂತೆ ಮೈತ್ರಿ ಸರ್ಕಾರದ ಅವಧಿಯಲ್ಲಿ ಡಿ. ಕೆ. ಶಿವಕುಮಾರ್ ನಿಭಾಯಿಸುತ್ತಿದ್ದ ಖಾತೆ ಗಿಟ್ಟಿಸಿಕೊಳ್ಳುವಲ್ಲಿ ರಮೇಶ್ ಜಾರಕಿಹೊಳಿ ಯಶಸ್ವಿಯಾಗಿದ್ದಾರೆ. ಬಿಎಸ್‌ವೈ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸಿಎಂ ಇದನ್ನು ತಮ್ಮಲ್ಲೇ ಉಳಿಸಿಕೊಂಡಿದ್ದರು.

* ಆನಂದ್ ಸಿಂಗ್ - ಆಹಾರ ಮತ್ತು ನಾಗರಿಕರ ಪೂರೈಕೆ ಖಾತೆ| ಈ ಹಿಂದೆ ಈ ಖಾತೆಯನ್ನು ಶಶಿಕಲಾ ಜೊಲ್ಲೆ ನಿಭಾಯಿಸುತ್ತಿದ್ದರು.

* ಶ್ರೀಮಂತ್ ಪಾಟೀಲ್ - ಜವಳಿ ಖಾತೆ

* ಕೆ. ಗೋಪಾಲಯ್ಯ- ಸಣ್ಣ ಕೈಗಾರಿಕೆ, ಸಕ್ಕರೆ ಖಾತೆ

* ಎಸ್.ಟಿ. ಸೋಮಶೇಖರ್- ಸಹಕಾರ ಖಾತೆ

* ಬಿ. ಸಿ. ಪಾಟೀಲ್- ಅರಣ್ಯ ಖಾತೆ

* ಡಾ. ಕೆ. ಸುಧಾಕರ್- ವೈದ್ಯಕೀಯ ಶಿಕ್ಷಣ ಸಚಿವ| ಈ ಹಿಂದೆ ಡಿಸಿಎಂ ಅಶ್ವತ್ಥ ನಾರಾಯಣ ಈ ಖಾತೆಯನ್ನು ನಿಭಾಯಿಸುತ್ತಿದ್ದರು.

* ಭೈರತಿ ಬಸವರಾಜ್-  ನಗರಾಭಿವೃದ್ಧಿ ಖಾತೆ (ಬೆಂಗಳೂರು ನಗರ ಹೊರತುಪಡಿಸಿ)

* ನಾರಾಯಣಗೌಡ- ಪೌರಾಡಳಿತ ಖಾತೆ| ಈ ಹಿಂದೆ ಈ ಖಾತೆ ಕಂದಾಯ ಸಚಿವರಾಗಿರುವ ಆರ್. ಅಶೋಕ್ ಹೆಚ್ಚುವರಿ ಖಾತೆಯಾಗಿ ನಿಭಾಯಿಸುತ್ತಿದ್ದರು.

* ಶಿವರಾಮ್ ಹೆಬ್ಬಾರ್- ಕಾರ್ಮಿಕ ಖಾತೆ

ಡಿಕೆಶಿ ಬಳಿಯಿದ್ದ ಖಾತೆಯೇ ಬೇಕೆಂದು ಪಟ್ಟು: ಜಲಸಂಪನ್ಮೂಲ ಖಾತೆ ಜಾರಕಿಹೊಳಿಗೆ?
 

ಫೆಬ್ರವರಿ 10ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?