ವೈರಲ್ ಆಯ್ತು ಸಿಎಂ BSY‌ ಭಾಷಣದ ತುಣುಕು : ಅದರಲ್ಲೇನಿತ್ತು..?

Kannadaprabha News   | Asianet News
Published : Nov 13, 2020, 07:01 AM IST
ವೈರಲ್ ಆಯ್ತು  ಸಿಎಂ BSY‌  ಭಾಷಣದ ತುಣುಕು : ಅದರಲ್ಲೇನಿತ್ತು..?

ಸಾರಾಂಶ

ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವು ಮಾಡಿದ ಭಾಷಣ ಒಂದು ಇದೀಗ ವೈರಲ್ ಆಗಿದೆ. ಹಾಗಾದ್ರೆ ಅದರಲ್ಲೇನಿತ್ತು..?

ತುಮಕೂರು  (ನ.13): ತುಮಕೂರಿನಲ್ಲಿ ವಿಧಾನ ಪರಿಷತ್‌ ಅಭ್ಯರ್ಥಿಯಾಗಿದ್ದ ಚಿದಾನಂದಗೌಡ ಪರ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮಾಡಿದ್ದ ಭಾಷಣ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್‌ ಆಗಿದೆ.

ಅಕ್ಟೋಬರ್‌ 24 ರಂದು ತುಮಕೂರಿನ ಸಿದ್ಧಿವಿನಾಯಕ ಕಲ್ಯಾಣ ಮಂಟಪದಲ್ಲಿ ನಡೆದ ಪರಿಷತ್‌ ಚುನಾವಣೆ ಪ್ರಚಾರ ಸಭೆಯಲ್ಲಿ ಇನ್ನು ಮುಂದೆ ನಿಮಗೆ ಯಾವುದೇ ಚುನಾವಣೆ ಗೆಲ್ಲಲು ಬಿಡುವುದಿಲ್ಲ ಎಂದು ಸಿದ್ದರಾಮಯ್ಯನವರಿಗೆ ಯಡಿಯೂರಪ್ಪ ಸವಾಲು ಹಾಕಿದ್ದು ವೈರಲ್‌ ಆಗಿದೆ.

ಆ ವೇಳೆ ಯಡಿಯೂರಪ್ಪನವರು ಉಪಚುನಾವಣೆಯ ಎರಡೂ ಸ್ಥಾನ ನಾವೇ ಗೆಲ್ಲುತ್ತೇವೆ. ಆರ್‌.ಆರ್‌. ನಗರದಲ್ಲಿ ಮುನಿರತ್ನ ಕನಿಷ್ಠ 50 ಸಾವಿರ ಮತಗಳ ಅಂತರಿಂದ ಗೆಲ್ಲುತ್ತಾರೆ ಎಂದಿದ್ದರು. ಅಷ್ಟೆಅಲ್ಲದೇ ಪರಿಷತ್‌ ಚುನಾವಣೆಯ ನಾಲ್ಕಕ್ಕೆ ನಾಲ್ಕೂ ಸ್ಥಾನ ನಾವು ಗೆಲ್ಲುವುದಾಗಿ ಹೇಳಿದ್ದರು.

ಲೋಕಸಭಾ ಚುನಾವಣೆಯಲ್ಲಿ ನಾವು 23 ಕ್ಷೇತ್ರಗಳನ್ನು ಗೆಲ್ಲುವುದಾಗಿ ಹೇಳಿದ್ದೆ. ಆಗ ಪ್ರತಿಪಕ್ಷಗಳು ನನ್ನ ಮಾತನ್ನು ಗೇಲಿ ಮಾಡಿದ್ದವು. ಆದರೆ ಕಳೆದ ಲೋಕಸಭೆಯಲ್ಲಿ ನಾವು 26 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆವು ಎಂದಿದ್ದರು. ಈಗ ಅದೇ ರೀತಿ ಫಲಿತಾಂಶ ಬಂದ ಹಿನ್ನೆಲೆಯಲ್ಲಿ ಆ ವಿಡಿಯೋ ವೈರಲ್‌ ಆಗುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಾನು ಹತ್ತು ಲಕ್ಷದ ವಾಚಾದ್ರೂ ಕಟ್ಟುತ್ತೇನೆ, ಅದು ನನ್ನ ಆಸ್ತಿ: ಬಿಜೆಪಿಗೆ ತಿರುಗೇಟು ಕೊಟ್ಟ ಡಿಕೆಶಿ
ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!