ಉಪಚುನಾವಣೆ: ಅಭ್ಯರ್ಥಿ ಆಯ್ಕೆ ಬಗ್ಗೆ ಮಹತ್ವದ ಹೇಳಿಕೆ ಕೊಟ್ಟ ಸಿಎಂ

Published : Mar 21, 2021, 03:21 PM IST
ಉಪಚುನಾವಣೆ: ಅಭ್ಯರ್ಥಿ ಆಯ್ಕೆ ಬಗ್ಗೆ ಮಹತ್ವದ ಹೇಳಿಕೆ ಕೊಟ್ಟ ಸಿಎಂ

ಸಾರಾಂಶ

ಬಸವಕಲ್ಯಾಣ ವಿಧಾನಸಭಾ ಉಪಚುನಾವಣೆಯಲ್ಲಿ ಬಿ.ವೈ. ವಿಜಯೇಂದ್ರ ಅವರು ಸ್ಪರ್ಧಿಸಲಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಇನ್ನು ಇದಕ್ಕೆ ಸ್ವತಃ ಸಿಎಂ ಸ್ಪಷ್ಟನೆ ಕೊಟ್ಟಿದ್ದಾರೆ.

ರಾಯಚೂರು, (ಮಾ.21): ಈ ಬಾರಿಯ ಉಪ ಚುನಾವಣೆಯಲ್ಲಿ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ವಿಜಯೇಂದ್ರ ಅಭ್ಯರ್ಥಿಯಾಗಲಿದ್ದಾರೆ ಎಂಬುದು ನೂರಕ್ಕೆ ನೂರು ಸುಳ್ಳು ಎಂದಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದರು.

ಸಿಂಧನೂರಿನಲ್ಲಿ ಇಂದು (ಭಾನುವಾರ) ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಅವರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರು ಮೈಸೂರಿಗೆ ಹೋಗಿ ಅಲ್ಲಿರುತ್ತಾರೆ. ಅಲ್ಲಿಯೇ ಮನೆ ಮಾಡಲಿದ್ದು, ಇದರಿಂದ ಐದಾರು ಜಿಲ್ಲೆಗಳಲ್ಲಿ ಪಕ್ಷಕ್ಕೆ ಅನುಕೂಲವಾಗಲಿದೆ. ಮುಂದಿನ ಬಾರಿ ವರುಣಾ ಕ್ಷೇತ್ರಕ್ಕೆ ಯಾರು ಸ್ಪರ್ಧಿಸುತ್ತಾರೆಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಉಪಚುನಾವಣೆಯಲ್ಲಿ ವಿಜಯೇಂದ್ರ ಸ್ಪರ್ಧೆ: ಸಿಎಂ ಬಿಎಸ್‌ವೈ ಪ್ರತಿಕ್ರಿಯೆ

ಮಸ್ಕಿಯಲ್ಲಿ ಪ್ರತಾಪಗೌಡ ಪ್ರಚಾರಕ್ಕೆ ಹೋದಾಗ ಭವ್ಯ ಸ್ವಾಗತ ಸಿಕ್ಕಿದೆ. ಪ್ರತಾಪಗೌಡ ಪಾಟೀಲ 20 ಸಾವಿರ ಮತಗಳ ಅಂತರದಲ್ಲಿ ಗೆಲ್ಲುತ್ತಾರೆ. ಕ್ಷೇತ್ರದಲ್ಲಿ ಮತ್ತೊಮ್ಮೆ ಬಂದು ಪ್ರಚಾರ ಮಾಡುತ್ತೇನೆ. ಬಸವಕಲ್ಯಾಣ ದಲ್ಲಿ ನಾವು ಗೆದ್ದಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬೆಳಗಾವಿಯಲ್ಲಿ ನಾವು ಗೆಲ್ಲಲಿದ್ದೇವೆ. ಅಭ್ಯರ್ಥಿಗಳ ಪಟ್ಟಿ ಮಾಡಿ ದೆಹಲಿಗೆ ಕಳುಹಿಸಿದ್ದೇವೆ. ಇಂದು, ನಾಳೆಯೊಳಗೆ ಅಭ್ಯರ್ಥಿ ಪಟ್ಟಿ ಬರುತ್ತದೆ ಎಂದರು‌.

5ಎ ಕಾಲುವೆ ಬದಲು ವಟಗಲ್ ಬಸವೇಶ್ವರ ಏತ ನೀರಾವರಿ ಮಾಡಲಾಗುವುದು. ಅವಶ್ಯವಿರುವ ನೀರಾವರಿ ಯೋಜನೆಗೆ ಆದ್ಯತೆ ನೀಡಲಾಗುವುದು. ತುಂಗಭದ್ರಾ ಎಡದಂಡೆ ಕಾಲುವೆಗೆ ಏಪ್ರಿಲ್ 10 ತನಕ ನೀರು ಹರಿಸುವುದಕ್ಕೆ ಸಂಬಂಧಿಸಿ ರೈತರಿಗೆ ಅನುಕೂಲಕರವಾಗುವ ನಿರ್ಧಾರ ಕೈಗೊಳ್ಳಲಾಗುವುದು. ಇತಿಹಾಸದಲ್ಲೇ ಮೊದಲ ಬಾರಿಗೆ ತೆರಿಗೆ ಹೊರೆ ಇಲ್ಲದ ಐತಿಹಾಸಿಕ ಬಜೆಟ್ ಮಂಡಿಸಲಾಗಿದೆ. ಮುಂದಿನ ಚುನಾವಣೆಯಲ್ಲೂ ಬಿಜೆಪಿ 130 ಸೀಟುಗಳನ್ನು ಗೆಲ್ಲಲಿದೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!