ಸರ್ಕಾರಿ‌‌ ನೌಕರರ ವರ್ಗಾವಣೆಗೆ ಸಿಎಂ ಗ್ರೀನ್ ಸಿಗ್ನಲ್: ಕೊನೆಗೂ ಸಚಿವರಿಗೆ ಸಿಕ್ತು ಅಧಿಕಾರ

Published : Jul 08, 2021, 06:38 PM IST
ಸರ್ಕಾರಿ‌‌ ನೌಕರರ ವರ್ಗಾವಣೆಗೆ ಸಿಎಂ ಗ್ರೀನ್ ಸಿಗ್ನಲ್: ಕೊನೆಗೂ ಸಚಿವರಿಗೆ ಸಿಕ್ತು ಅಧಿಕಾರ

ಸಾರಾಂಶ

* ಸರ್ಕಾರಿ‌‌ ನೌಕರರ ವರ್ಗಾವಣೆಗೆ ಸಿಎಂ ಗ್ರೀನ್ ಸಿಗ್ನಲ್.. * ಈ ಬಾರಿ ಇಲಾಖಾವಾರು ಸಚಿವರಿಗೆ ವರ್ಗಾವಣೆ ಅಧಿಕಾರ * ಶೇಕಡಾ 6ಕ್ಕೆ ಮೀರದಂತೆ ಸರ್ಕಾರಿ ‌ನೌಕರರ ವರ್ಗಾವಣೆಗೆ ಅವಕಾಶ..  

ಬೆಂಗಳೂರು, (ಜುಲೈ.08): ಕೊನೆಗೂ ಸಚಿವರ ಒತ್ತಡಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಣಿದಿದ್ದಾರೆ. ಸಾರ್ವತ್ರಿಕ ವರ್ಗಾವಣೆಯನ್ನು ಆಯಾ ಇಲಾಖೆಗಳ ಸಚಿವರಿಗೆ ವಹಿಸಿದ್ದಾರೆ.

ಹೌದು..ಸರ್ಕಾರಿ‌‌ ನೌಕರರ ವರ್ಗಾವಣೆಗೆ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರು ಗ್ರೀನ್ ಸಿಗ್ನಲ್ ನೀಡಿದ್ದು, ಈ ಬಗ್ಗೆ ಇಂದು (ಗುರುವಾರ) ಅಧಿಕೃತ ಆದೇಶ ಹೊರಿಡಿಸಿದ್ದಾರೆ.

'ಹೊರಗಡೆ ಬಿಎಸ್‌ವೈ ನಮ್ಮ ನಾಯಕ ಅಂತಾರೆ..ಒಳಗಡೆ ಹೋಗಿ ಸಿಎಂ ಬದಲಾಯಿಸಿ ಅಂತಾರೆ'

ಇಲಾಖೆ ಸಚಿವರಿಗೆ ನೌಕರರ ವರ್ಗಾವಣೆ ಅಧಿಕಾರ ನೀಡಲಾಗಿದೆ. ಜುಲೈ 22 ರವರೆಗೆ ಒಂದು ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇಕಡ 6 ರಷ್ಟು ಮೀರದಂತೆ ಗ್ರೂಪ್ ಬಿ ಮತ್ತು ಸಿ ವರ್ಗದ ಅಧಿಕಾರಿಗಳು, ಸಿಬ್ಬಂದಿ ವರ್ಗಾವಣೆ ಅಧಿಕಾರವನ್ನು ಇಲಾಖೆಯ ಸಚಿವರಿಗೆ ನೀಡಲಾಗಿದೆ. 

ಸಂಪುಟ ಸಭೆಯಲ್ಲಿ ಅನೇಕ ಸಚಿವರು ವರ್ಗಾವಣೆಗೆ ಅವಕಾಶ ನೀಡುವಂತೆ ಒತ್ತಡ ಹೇರಿದ್ದರು.  ವರ್ಗಾವಣೆ ಬಗ್ಗೆ ಸಚಿವರಿಗೆ ಅಧಿಕಾರ ನೀಡಲು ಸಚಿವ ಅರವಿಂದ ಲಿಂಬಾವಳಿ ಸೇರಿದಂತೆ 10 ಸಚಿವರು ಒತ್ತಡ ಹೇರಿದ್ದರೆನ್ನಲಾಗಿದ್ದು, ಈ ಹಿನ್ನಲೆಯಲ್ಲಿ ಸಿಎಂ ವರ್ಗಾವಣೆಗೆ ಅವಕಾಶ ನೀಡಿದ್ದಾರೆ ಎಂದು ಎಂದು ತಿಳಿದುಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಾ ಜಿ ಪರಮೇಶ್ವರ ರಾಜ್ಯದ ಸಿಎಂ ಆಗಬೇಕು, ರಾಜಕೀಯದಲ್ಲಿ ಸಂಚಲನ ಮೂಡಿಸೋ ಹೇಳಿಕೆ ಕೊಟ್ಟ ಕೇಂದ್ರ ಸಚಿವ ವಿ. ಸೋಮಣ್ಣ!
ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!