
ಬೆಂಗಳೂರು, (ಸೆ.2): ಕೊರೋನಾ, ಪ್ರವಾಹದಿಂದ ಸದಾ ಒತ್ತಡದಲ್ಲಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಬಹಳ ದಿನಗಳ ನಂತರ ಸಚಿವರ ಮತ್ತು ಶಾಸಕರ ಜೊತೆ ಲಂಚ್ ಮೀಟಿಂಗ್ ಮಾಡಿದ್ದಾರೆ.
ಕೊರೋನಾ ಸೋಂಕಿನಿಂದ ಗುಣಮುಖರಾದ ಬಳಿಕ ಇದೇ ಮೊದಲ ಬಾರಿಗೆ ಇಂದು (ಬುಧವಾರ) ಯಡಿಯೂರಪ್ಪ ಅವರು ನಗರದ ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ಆಪ್ತರ ಜೊತೆ ಭೋಜನ ಸೇವಿಸಿದರು.
ಹಳ್ಳಿಯಲ್ಲಿ ಪಕ್ಷ ಸಂಘಟೆ ಮಾಡಿದ ಬಿಜೆಪಿ ನಾಯಕ ಈಗ ದಿಲ್ಲಿ ಪ್ರತಿನಿಧಿ...!
ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ್, ಸಿಎಂ ರಾಜಕೀಯ ಕಾರ್ಯದರ್ಶಿಗಳಾದ ಎಸ್ ಆರ್ ವಿಶ್ವನಾಥ್, ಎಂ ಪಿ ರೇಣುಕಾಚಾರ್ಯ, ಕರ್ನಾಟಕ ಜಲಭವನ ಮಂಡಳಿ ಅಧ್ಯಕ್ಷ ರಾಜುಗೌಡ, ಶಂಕರ್ ಪಾಟೀಲ್ ಮುನೇನಕೊಪ್ಪ ಸಿಎಂ ಜೊತೆ ಭೋಜನ ಕೂಟದಲ್ಲಿ ಭಾಗಿಯಾದ್ದರು.
ಈ ವೇಳೆ ಹಲವು ರಾಜ್ಯ ರಾಜಕೀಯದ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಕೊರೋನಾದಿಂದ ಗುಣಮುಖರಾದ ನಂತರ ಹೊರಗೆಲ್ಲೂ ತೆರಳದೇ ನಿವಾಸದಲ್ಲೇ ಇದ್ದರು. ಆಪ್ತರ ಜೊತೆ ಖಾಸಗಿಯಾಗಿ ಕಾಲ ಕಳೆದಿರಲಿಲ್ಲ. ಹಾಗಾಗಿ, ಇಂದು ಆಪ್ತರ ಜೊತೆ ಭೋಜನ ಕೂಟದ ನೆಪದಲ್ಲಿ ಸಿಎಂ ಕೆಲಕಾಲ ಮಾತುಕತೆ ನಡೆಸಿದರು ಎಂದು ತಿಳಿದುಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.