
ಬೆಂಗಳೂರು, [ಜ. 06]: ದೋಸ್ತಿಗಳ ನಡುವೆ ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ನಿಗಮ ಮಂಡಳಿ ಅಧ್ಯಕ್ಷರ ನೇಮಕಕ್ಕೆ ಕೊನೆಗೂ ಸಿಎಂ ಅಂಕಿತ ಹಾಕಿದ್ದಾರೆ. ಆದರೂ ಕಾಂಗ್ರೆಸ್ ನಲ್ಲಿ ಅಸಮಾಧಾನ ಮುಂದುವರೆದಿದೆ.
ಏಕೆಂದರೆ ಕಾಂಗ್ರೆಸ್ ಹೈಕಮಾಂಡ್ ಶಿಫಾರಸು ಮಾಡಿದ್ದ 19 ಶಾಸಕರ ಪೈಕಿ 14 ಶಾಸಕರಿಗಷ್ಟೇ ಸಿಎಂ ಮಣೆ ಹಾಕಿದ್ದಾರೆ. ಉಳಿದ 5 ಶಾಸಕರ ಅನುಮೋದನೆಗೆ ಸಿಎಂ ಬ್ರೇಕ್ ಹಾಕಿದ್ದಾರೆ.
ಕೊನೆಗೂ ನಿಗಮ ಮಂಡಳಿಗೆ ಕುಮಾರಸ್ವಾಮಿ ಅಂಕಿತ: ಯಾರಿಗೆಲ್ಲ ಚಾನ್ಸ್?
ಈ ಮೂಲಕ ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅಲ್ಲದೇ ನಿಗಮ ಮಂಡಳಿ ಅಧ್ಯಕ್ಷರ ನೇಮಕ ವಿಚಾರದಲ್ಲಿ ದೋಸ್ತಿ ಸರ್ಕಾರದಲ್ಲಿ ಮತ್ತೆ ಫೈಟಿಂಗ್ ಶುರುವಾಗಿದೆ ಎನ್ನಲಾಗುತ್ತಿದೆ.
ಕಾಂಗ್ರೆಸ್ ಕಳುಹಿಸಿದ್ದ ಪಟ್ಟಿಯಲ್ಲಿ ಟಿ.ವೆಂಕಟರಮಣಯ್ಯ-ಅಧ್ಯಕ್ಷರು, ರಾಜ್ಯ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ, ಎಸ್.ಎನ್.ಸುಬ್ಬಾರೆಡ್ಡಿ- ಅಧ್ಯಕ್ಷರು, ರಾಜ್ಯ ರೇಷ್ಮೆ ಕೈಗಾರಿಕೆ ಮಂಡಳಿ, ಎನ್.ಎ. ಹ್ಯಾರಿಸ್- ಅಧ್ಯಕ್ಷರು, ಬಿಎಂಟಿಸಿ, ಎಸ್.ಟಿ. ಸೋಮಶೇಖರ್- ಅಧ್ಯಕ್ಷರು, ಬಿಡಿಎ, ಡಾ. ಕೆ. ಸುಧಾಕರ್- ಅಧ್ಯಕ್ಷರು, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ನೇಮಿಸಲಾಗಿತ್ತು.
ಆದ್ರ ಈ ಐದು ನಿಗಮ ಮಂಡಳಿಗೆಳಿಗೆ ಕುಮಾರಸ್ವಾಮಿ ತಡೆಹಿಡಿದ್ದಾರೆ. ಇದು ಮೇಲ್ನೋಟಕ್ಕೆ ಜೆಡಿಎಸ್ ಖಾತೆ ವ್ಯಾಪ್ತಿಯ ನಿಗಮ ನೇಮಕಕ್ಕೆ ಸಿಎಂ ಬ್ರೇಕ್ ಹಾಕಿರಬಹುದು. ಆದ್ರೆ, ಇದರ ಹಿಂದೆ ದೊಡ್ಡ ಗೌಡರು ಇದ್ದಾರೆ ಅನ್ನೋ ಮಾತು ಕೂಡ ಕೇಳಿ ಬರ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.