
ಬೆಂಗಳೂರು,[ಫೆ.11]: ಆಪರೇಷನ್ ಆಡಿಯೋ ಪ್ರಕರಣ ವಿಧಾನಸಭೆಯಲ್ಲಿ ಮಾತ್ರವಲ್ಲದೇ ಲೋಕಸಭೆಯಲ್ಲೂ ಕೋಲಾಹಲ ಎಬ್ಬಿಸಿದ್ದು, ಈ ಪ್ರಕರಣವನ್ನು ಸ್ಪೀಕರ್ ರಮೇಶ್ ಕುಮಾರ್ ಅವರು ತನಿಖೆಗೆ ಆದೇಶಿಸಿದ್ದಾರೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಆಪರೇಷನ್ ಆಡಿಯೋ ಪ್ರಕರಣದಲ್ಲಿ ಸ್ವತಃ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಭಾಗಿಯಾಗಿದ್ದಾರೆ. ಇಡೀ ಪ್ರಕರಣ ಅವರ ಪ್ರಚೋದನೆಯಿಂದಲೇ ನಡೆದಿದೆ ಎಂದು ಗಂಭೀರ ಆರೋಪ ಮಾಡಿದರು.
ಆಡಿಯೋದಲ್ಲಿ ಸ್ಪೀಕರ್ ಹೆಸ್ರು: ತನಿಖೆಯಾಗ್ಬೇಕು ಎಂದ ಸಿದ್ದರಾಮಯ್ಯ
ಕುಟುಕು ಕಾರ್ಯಾಚರಣೆ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ಆದೇಶ ಸ್ಪಷ್ಟವಾಗಿದೆ. ಕುಟುಕು ಕಾರ್ಯಾಚರಣೆಯನ್ನ ಯಾರು ಪ್ರಚೋದಿಸುತ್ತಾರೋ ಅವರೂ ತಪ್ಪಿತಸ್ಥರಾಗುತ್ತಾರೆ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಹಾಗಾಗಿ ಪ್ರಕರಣದಲ್ಲಿ ಸಿಎಂ ಕುಮಾರಸ್ವಾಮಿ ಅವರೂ ಸಹ ಆಪಾದಿತರೇ ಎಂದು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಸ್ಪೀಕರ್ ರೂಲಿಂಗ್ ಪ್ರಕಾರ ಸಿಎಂ ಕುಮಾರಸ್ವಾಮಿ ಅವರು SIT ತನಿಖೆಗೆ ಆದೇಶಿಸುವುದು ಸರಿಯಲ್ಲ. ಏಕೆಂದ್ರೆ ಯಾವುದೇ ತನಿಖಾ ಸಂಸ್ಥೆಯೇ ಆದರೂ ಅದು ಸಿಎಂ ಕುಮಾರಸ್ವಾಮಿ ಅವರ ಅಂಡರ್ ಬರುತ್ತದೆ.
ಹಾಗಾಗಿ ನಿಷ್ಪಕ್ಷಪಾತದಿಂದ ತನಿಖೆ ನಡೆಯಬೇಕು ಅಂದ್ರೆ ಅದು ಸದನ ಸಮಿತಿಯಿಂದ ಆಗಬೇಕು ಅಥವಾ ನ್ಯಾಯಾಂಗ ತನಿಖೆಯಿಂದ ನಡೆಯಬೇಕು ಎಂಬುದು ನಮ್ಮ ಪಕ್ಷದ ಸ್ಪಷ್ಟ ನಿಲುವಾಗಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.