ಆಸ್ಪತ್ರೆಗೆ ಕುಮಾರಸ್ವಾಮಿ ಭೇಟಿ, 25 ನಿಮಿಷ ಆನಂದ್ ಸಿಂಗ್ ಜತೆ ಮಾತು

Published : Jan 26, 2019, 09:23 PM ISTUpdated : Jan 26, 2019, 09:32 PM IST
ಆಸ್ಪತ್ರೆಗೆ ಕುಮಾರಸ್ವಾಮಿ ಭೇಟಿ, 25 ನಿಮಿಷ ಆನಂದ್ ಸಿಂಗ್ ಜತೆ ಮಾತು

ಸಾರಾಂಶ

ಆನಂದ್ ಸಿಂಗ್ ಆರೋಗ್ಯ ವಿಚಾರಿಸಿದ ಸಿಎಂ ಎಚ್.ಡಿ.ಕುಮಾರಸ್ವಾಮಿ ! ಸತತ 25 ನಿಮಿಷಗಳ ಕಾಲ ಆನಂದ್ ಸಿಂಗ್ ಜತೆ ಮಾತುಕತೆ ನಡೆಸಿ ಘಟನೆಯ ಮಾಹಿತಿ ಪಡೆದುಕೊಂಡ ಸಿಎಂ!

ಬೆಂಗಳೂರು, [ಜ.26]: ಬಿಡದಿ ಬಳಿ ಇರುವ ಈಗಲ್​​ಟನ್​ ರೆಸಾರ್ಟ್​​​​​ನಲ್ಲಿ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಮೇಲೆ ಕಂಪ್ಲಿ ಶಾಸಕ ಜೆ ಎನ್​​ ಗಣೇಶ್​​ ಹಲ್ಲೆ ಮಾಡಿ ವಾರ ಕಳೆದಿದ್ದು, ಆನಂದ್ ಇನ್ನೂ ಚೇತರಿಸಿಕೊಂಡಿಲ್ಲ. 

 ಬೆಂಗಳೂರಿನ ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆನಂದ್ ಸಿಂಗ್ ಅವರನ್ನು ಇಂದು [ಶನಿವಾರ] ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು.

ಆಸ್ಪತ್ರೆಗೆ ಬಂದ DKS ಜತೆ ಗಲಾಟೆ ಬಗ್ಗೆ ಅರ್ಧ ಗಂಟೆ ಮಾತನಾಡಿದ ಆನಂದ್ ಸಿಂಗ್

ಮುಂಬೈನಲ್ಲಿ ರಾಮನಗರ ಪೋಲಿಸರಿಗೆ ಚೆಳ್ಳೆ ಹಣ್ಣು ತಿನ್ನಿಸಿದ ಕಂಪ್ಲಿ ಶಾಸಕ ಗಣೇಶ್

25 ನಿಮಿಷಗಳ ಕಾಲ ಆನಂದ್ ಸಿಂಗ್​​​​​​ ಅವರೊಡನೆ ಮಾತುಕತೆ ನಡೆಸಿದ ಕುಮಾರಸ್ವಾಮಿ, ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡರು. ಬಳಿಕ ಆಸ್ಪತ್ರೆಯಿಂದ ಹೊರಬಂದ ಕುಮಾರಸ್ವಾಮಿ ಅವರು ಮಾಧ್ಯಮಗಳಿಗೆ ಯಾವುದೇ ರೀತಿ ಪ್ರತಿಕ್ರಿಯೆ ನೀಡದೆ ಹೊರಟರು.

ಈ ಘಟನೆ ಬಗ್ಗೆ ಗಣೇಶ್ ವಿರುದ್ಧ ದೂರು ದಾಖಲಾಗಿದ್ದು, ಅವರನ್ನು ಬಂಧಿಸಲು ನಾಲ್ಕು ತಂಡಗಳನ್ನು ರಚಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗ್ರೇಟರ್‌ ಬೆಂಗಳೂರು.. ವೈಜ್ಞಾನಿಕವಾಗಿ ಕಸ ಸಂಸ್ಕರಣೆ, ಆತಂಕ ಬೇಡ: ಡಿ.ಕೆ.ಶಿವಕುಮಾರ್‌
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ ಪ್ರಕರಣ: ಎಸ್ಐಟಿ ತನಿಖೆಗೆ ಸಿ.ಟಿ.ರವಿ ಆಗ್ರಹ