
ಬೆಂಗಳೂರು (ಡಿ.16): ಕಾಂಗ್ರೆಸ್ ಗೆ ಮುಸ್ಲೀಮರು ಇನ್ನೆಷ್ಟು ವರ್ಷ ಮತ ಹಾಕ್ತಾ ಇರಬೇಕು...? ನಾವು ಮುಂದೆ ಬಂದು ನಿಮಗೆ ಮತ ಹಾಕೋದು - ಮತ ಹಾಕಿ ಹಿಂದೆ ಹೋಗೋದಾ ಎಂದು ವಿಧಾನ ಪರಿಷತ್ ಸದಸ್ಯ ಸಿಎಂ ಇಬ್ರಾಹಿಂ ಹೇಳಿದ್ದಾರೆ.
ಒಬ್ಬನೆ ಒಬ್ಬ ಮುಸ್ಲಿಂನಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ಟಿಲ್ಲ. ಶೇಕಡಾ 16 ರಷ್ಟು ಇರೋ ಮುಸ್ಲೀಮರು ನಿಮಗೆ ಓಟ್ ಮಾತ್ರ ಹಾಕಬೇಕಾ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಸಿಎಂ ಇಬ್ರಾಹಿಂ ವಾಗ್ದಾಳಿ ನಡೆಸಿದ್ದಾರೆ.
ಸೋತಿರುವವನಿಗೆ ಪರಿಷತ್ ಸ್ಥಾನ ಕೊಟ್ಟಿದ್ದೀರಿ ಅನ್ನೋದು ಸರಿಯಲ್ಲ. ಡಾ.ಜಿ.ಪರಮೇಶ್ವರ್ ಚುನಾವಣೆಯಲ್ಲಿ ಸೋತಿರಲಿಲ್ಲವೇ..? ಪರಮೇಶ್ವರ್ ಅವರಿಗೆ ಸಚಿವ ಸ್ಥಾನ ಕೊಟ್ಟಿರಲಿಲ್ಲವೇ ಎಂದರು.
ಕಾಂಗ್ರೆಸ್ ತೊರೆಯದಂತೆ ಹಿರಿಯ ನಾಯಕನ ಮನೆಗೆ ಹೋಗಿ ಮನವಿ ಮಾಡಿದ ಡಿಕೆಶಿ ...
ಕಾಂಗ್ರೆಸ್ ನಲ್ಲಿ ಇರದೇ ಇರೋದು ಜೆಡಿಎಸ್ ನಲ್ಲಿ ಏನಿದೆ ಎನ್ನುವ ಬಗ್ಗೆ ಮಾತನಾಡಲು ಬಹಳಷ್ಟು ಇದೆ. ನನ್ನ ರಾಜಕೀಯ ನಡೆಯ ಬಗ್ಗೆ ಯಾವುದೇ ಅನುಮಾನ ಬೇಡ. ರಾಜ್ಯಾದ್ಯಂತ ಪ್ರವಾಸ ಮಾಡಿದ ಬಳಿಕ ನನ್ನ ನಿಲುವು ತಿಳಿಸುತ್ತೇನೆ. ನನ್ನನ್ನು ಭೇಟಿಯಾದ ಡಿ.ಕೆ.ಶಿವಕುಮಾರ್ ಗೆ ಈ ಬಗ್ಗೆ ತಿಳಿಸಿದ್ದೇನೆ ಎಂದು ಇಬ್ರಾಹಿಂ ಹೇಳಿದರು.
ಮುಸ್ಲಿಂ ನಾಯಕತ್ವದ ಸಂಘರ್ಷದ ಭಾಗವಾಗಿ ನನ್ನ ನಡೆ ಅನುಮಾನ ಮೂಡಿಸಿದೆ ಅನ್ನೋದು ಸರಿಯಲ್ಲ. ಆದರೆ ಸಮಾಜಕ್ಕೆ ಏನು ನ್ಯಾಯ ಸಿಗಬೇಕೋ ಅದನ್ನು ಹೇಳುತ್ತಿದ್ದೇನೆ ಎಂದು ಸುವರ್ಣ ನ್ಯೂಸ್ ಡಾಟ್ ಕಾಂಗೆ ಸಿ.ಎಂ.ಇಬ್ರಾಹಿಂ ಪ್ರತಿಕ್ರಿಯಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.