ಉಪಚುನಾವಣೆ ಪ್ರಚಾರ ಅಖಾಡಕ್ಕೆ ಇಂದು ಸಿಎಂ

Kannadaprabha News   | Kannada Prabha
Published : Mar 30, 2026, 05:58 AM IST
CM Siddaramaiah

ಸಾರಾಂಶ

ವಿಧಾನಸಭೆ ಉಪ ಚುನಾವಣೆ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹಾಗೂ ಮಂಗಳವಾರ ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ವಿವಿಧೆಡೆ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಮುಖ್ಯಮಂತ್ರಿಗಳು ಪ್ರಚಾರ ಕಣಕ್ಕೆ ಇಳಿಯುತ್ತಿರುವುದರಿಂದ ಕಣ ರಂಗೇರುವುದು ನಿಶ್ಚಿತವಾಗಿದೆ.

ಬೆಂಗಳೂರು : ವಿಧಾನಸಭೆ ಉಪ ಚುನಾವಣೆ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹಾಗೂ ಮಂಗಳವಾರ ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ವಿವಿಧೆಡೆ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಮುಖ್ಯಮಂತ್ರಿಗಳು ಪ್ರಚಾರ ಕಣಕ್ಕೆ ಇಳಿಯುತ್ತಿರುವುದರಿಂದ ಕಣ ರಂಗೇರುವುದು ನಿಶ್ಚಿತವಾಗಿದೆ.

ವಿಶೇಷ ವಿಮಾನ ಮೂಲಕ ಬಳ್ಳಾರಿಗೆ ತೆರಳಲಿರುವ ಸಿದ್ದರಾಮಯ್ಯ

ಸೋಮವಾರ ಬೆಳಗ್ಗೆ ಬೆಂಗಳೂರಿನಿಂದ ವಿಶೇಷ ವಿಮಾನ ಮೂಲಕ ಬಳ್ಳಾರಿಗೆ ತೆರಳಲಿರುವ ಸಿದ್ದರಾಮಯ್ಯ ಅವರು, ಅಲ್ಲಿಂದ ಹೆಲಿಕಾಪ್ಟರ್‌ ಮೂಲಕ ಆಲಮಟ್ಟಿಗೆ ತೆರಳಲಿದ್ದಾರೆ.

 ಚುನಾವಣಾ ಪ್ರಚಾರ ಸಭೆಯಲ್ಲಿ ಉಮೇಶ್ ಮೇಟಿ ಪರ ಮತಯಾಚನೆ

ಬೆಳಗ್ಗೆ 11 ಗಂಟೆಗೆ ಸುತಗುಂಡಾರ ಗ್ರಾಮದಲ್ಲಿ ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್‌ನಿಂದ ಆಯೋಜಿಸಿರುವ ಚುನಾವಣಾ ಪ್ರಚಾರ ಸಭೆಯಲ್ಲಿ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿ ಪರ ಮತಯಾಚನೆ ಮಾಡಲಿದ್ದಾರೆ. ಬಳಿಕ ನಾಯನೇಗಲಿ, ರಾಂಪುರ, ಬೇವೂರು ಗ್ರಾಮಗಳಲ್ಲಿ ಪ್ರಚಾರ ನಡೆಸಿ ಆಲಮಟ್ಟಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಬಳಿಕ ಮಂಗಳವಾರ ಬೆಳಗ್ಗೆ 10.50ಕ್ಕೆ ಬಾಗಲಕೋಟೆಯ ಮುಗೊಳ್ಳಿಯಲ್ಲಿ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ನೀಲಾನಗರ ಗ್ರಾಮ, ಸಂಜೆ 4 ಗಂಟೆಗೆ ಐಹೊಳೆ, 6 ಗಂಟೆಗೆ ಅಮೀನಗಡ ಗ್ರಾಮಗಳಲ್ಲಿ ಪ್ರಚಾರ ನಡೆಸಿ ಮಂಗಳವಾರ ರಾತ್ರಿ ಬಾಗಲಕೋಟೆಯಲ್ಲೇ ವಾಸ್ತವ್ಯ ಹೂಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಗೃಹಲಕ್ಷ್ಮೀ ರೀತಿ ಅಸ್ಸಾಂನಲ್ಲೂ ಕಾಂಗ್ರೆಸ್‌ ಪಂಚ ಗ್ಯಾರಂಟಿ
ಡಿಎಂಕೆ ಗೆದ್ರೆ ಮಹಿಳೆಯರಿಗೆ ಮಾಸಿಕ ₹2000!