ಕ್ರಿಕೆಟ್‌ ನೋಡಿದ್ದಕ್ಕೆ ಟೀಕೆ: ಏನು ಮಾಡಬೇಕು, ಮಾಡಬಾರದು ಎಂದು ಸಿಎಂಗೆ ಗೊತ್ತಿದೆ, ಪರಂ

Published : Oct 25, 2023, 10:54 AM IST
ಕ್ರಿಕೆಟ್‌ ನೋಡಿದ್ದಕ್ಕೆ ಟೀಕೆ: ಏನು ಮಾಡಬೇಕು, ಮಾಡಬಾರದು ಎಂದು ಸಿಎಂಗೆ ಗೊತ್ತಿದೆ, ಪರಂ

ಸಾರಾಂಶ

ಟೀಕೆ ಮಾಡೋದು ವಿರೋಧ ಪಕ್ಷಗಳ ಹಕ್ಕು. ಆದರೆ, ಯಾವ ವಿಚಾರಕ್ಕೆ ಟೀಕೆ ಮಾಡಬೇಕು, ಯಾವ ವಿಚಾರಕ್ಕೆ ಸಲಹೆ ಕೊಡಬೇಕು ಅನ್ನೋದು ತಿಳಿದಿರಬೇಕು. ಮುಖ್ಯಮಂತ್ರಿ ಆದವರು ಕ್ರೀಡೆಗೆ ಪ್ರೊತ್ಸಾಹ ನೀಡಬಾರದೆ? ಒಬ್ಬ ಮುಖ್ಯಮಂತ್ರಿಗಳು ಕ್ರಿಕೆಟ್ ನೋಡುತ್ತಾರೆ ಅಂದರೆ ಎಷ್ಟು ಕ್ರೀಡಾಪಟುಗಳಿಗೆ ಉತ್ತೇಜನ ನೀಡಿದಂತಾಗುತ್ತದೆ. ಆಡಳಿತ ವ್ಯವಸ್ಥೆಯಲ್ಲಿ ಕ್ರೀಡೆ ಕೂಡ ಒಂದು ಭಾಗ. ಕುಮಾರಸ್ವಾಮಿ ಅವರಿಂದ ಹೇಳಿಸಿಕೊಳ್ಳಬೇಕಾಗಿಲ್ಲ: ಗೃಹ ಸಚಿವ ಡಾ.ಜಿ.ಪರಮೇಶ್ವರ್  

ಬೆಂಗಳೂರು(ಅ.25):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಏನು ಮಾಡಬೇಕು, ಏನು ಮಾಡಬಾರದು ಎಂಬುದು ಚೆನ್ನಾಗಿ ಗೊತ್ತಿದೆ. ಅರ್ಧ ಗಂಟೆ ಕ್ರಿಕೆಟ್‌ ನೋಡಿದ್ದಕ್ಕೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ವೈಯಕ್ತಿಕ ಟೀಕೆ ಮಾಡುವುದು ಸರಿಯಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಟೀಕೆ ಮಾಡೋದು ವಿರೋಧ ಪಕ್ಷಗಳ ಹಕ್ಕು. ಆದರೆ, ಯಾವ ವಿಚಾರಕ್ಕೆ ಟೀಕೆ ಮಾಡಬೇಕು, ಯಾವ ವಿಚಾರಕ್ಕೆ ಸಲಹೆ ಕೊಡಬೇಕು ಅನ್ನೋದು ತಿಳಿದಿರಬೇಕು. ಮುಖ್ಯಮಂತ್ರಿ ಆದವರು ಕ್ರೀಡೆಗೆ ಪ್ರೊತ್ಸಾಹ ನೀಡಬಾರದೆ? ಒಬ್ಬ ಮುಖ್ಯಮಂತ್ರಿಗಳು ಕ್ರಿಕೆಟ್ ನೋಡುತ್ತಾರೆ ಅಂದರೆ ಎಷ್ಟು ಕ್ರೀಡಾಪಟುಗಳಿಗೆ ಉತ್ತೇಜನ ನೀಡಿದಂತಾಗುತ್ತದೆ. ಆಡಳಿತ ವ್ಯವಸ್ಥೆಯಲ್ಲಿ ಕ್ರೀಡೆ ಕೂಡ ಒಂದು ಭಾಗ. ಕುಮಾರಸ್ವಾಮಿ ಅವರಿಂದ ಹೇಳಿಸಿಕೊಳ್ಳಬೇಕಾಗಿಲ್ಲ ಎಂದರು.

100% ಜೆಡಿಎಸ್ ಅಪ್ಪ-ಮಕ್ಕಳ ಪಕ್ಷ ಅಂತಾ ಪ್ರೂವ್ ಆಗೋಯ್ತು; ದೇವೇಗೌಡರ ವಿರುದ್ಧ ಇಬ್ರಾಹಿಂ ಕಿಡಿ

ಕ್ರಿಕೆಟ್ ಅಸೋಸಿಯೇಷನ್‌ ನವರು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಅವರಿಗೆ ಆಹ್ವಾನ ನೀಡುತ್ತಿರುತ್ತಾರೆ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಅವರಿಗೂ ಆಹ್ವಾನ ನೀಡಿದ್ದರು. ನಾನು ಉಪಮುಖ್ಯಮಂತ್ರಿ ಆಗಿದ್ದಾಗ ನನಗೂ ಕರೆದಿದ್ದರು. ಎಲ್ಲಾ ಕೆಲಸ ಬಿಟ್ಟು ಬರೀ ಕ್ರಿಕೆಟ್ ನೋಡುತ್ತಿದ್ದರೆ ನೀವು ಹೇಳೋದು ಸರಿ ಅನ್ನೋಣ ಎಂದು ಎಂದು ಅಭಿಪ್ರಾಯಪಟ್ಟರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಉತ್ತರ ಕರ್ನಾಟಕಕ್ಕೆ ಕೊಟ್ಟ ಭರವಸೆ ಈಡೇರಿಕೆ ಬಗ್ಗೆ ಶ್ವೇತಪತ್ರ ಹೊರಡಿಸಿ: ಆರ್‌.ಅಶೋಕ್‌
ಧರ್ಮಸ್ಥಳ ಬುರುಡೆ ಕೇಸ್‌ ಹಿಂದೆ ಅರ್ಬನ್‌ ನಕ್ಸಲ್‌: ಬಿಜೆಪಿ ನಾಯಕರ ತೀವ್ರ ಆರೋಪ