ಜಾತ್ಯಾತೀತ ಹೆಸರಿಟ್ಟುಕೊಂಡು ಕೋಮುವಾದಿಗಳೊಂದಿಗೆ ಸೇರಿಕೊಂಡ ಜೆಡಿಎಸ್‌: ಸಿಎಂ ಸಿದ್ದರಾಮಯ್ಯ

Published : Sep 09, 2023, 01:35 PM ISTUpdated : Sep 09, 2023, 02:30 PM IST
ಜಾತ್ಯಾತೀತ ಹೆಸರಿಟ್ಟುಕೊಂಡು ಕೋಮುವಾದಿಗಳೊಂದಿಗೆ ಸೇರಿಕೊಂಡ ಜೆಡಿಎಸ್‌: ಸಿಎಂ ಸಿದ್ದರಾಮಯ್ಯ

ಸಾರಾಂಶ

ನಾನು ಜೆಡಿಸ್‌ ಅನ್ನು ಬಿಜೆಪಿಯ ಬಿ ಟೀಮ್ ಅಂತಿದ್ದೆ ಅದಕ್ಕೆ ಅವರು ಕೋಪಿಸಿಕೊಳ್ತಿದ್ರು. ಜ್ಯಾತ್ಯಾತೀತ ಹೆಸರಿಟ್ಟುಕೊಂಡು ಕೋಮುವಾದಿಗಳೊಂದಿಗೆ ಸೇರಿಕೊಂಡರು. ದೇವೇಗೌಡರು ಯಾರೊಂದಿಗೂ ಸೇರಿಕೊಳ್ಳಲ್ಲ ಅಂತ ಪಕ್ಷದ ಉಳಿವಿಗಾಗಿ ಸೇರಿಕೊಂಡಿದ್ದೇವೆ ಅಂತಾರೆ ಅಧಿಕಾರಕ್ಕಾಗಿ ಏನೆಲ್ಲಾ ಮಾಡ್ತಾರೆ ಎಂಬುದು ಇದರಲ್ಲೇ ಗೊತ್ತಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. 

ಹುಬ್ಬಳ್ಳಿ (ಸೆ.09): ನಾನು ಜೆಡಿಸ್‌ ಅನ್ನು ಬಿಜೆಪಿಯ ಬಿ ಟೀಮ್ ಅಂತಿದ್ದೆ ಅದಕ್ಕೆ ಅವರು ಕೋಪಿಸಿಕೊಳ್ತಿದ್ರು. ಜ್ಯಾತ್ಯಾತೀತ ಹೆಸರಿಟ್ಟುಕೊಂಡು ಕೋಮುವಾದಿಗಳೊಂದಿಗೆ ಸೇರಿಕೊಂಡರು. ದೇವೇಗೌಡರು ಯಾರೊಂದಿಗೂ ಸೇರಿಕೊಳ್ಳಲ್ಲ ಅಂತ ಪಕ್ಷದ ಉಳಿವಿಗಾಗಿ ಸೇರಿಕೊಂಡಿದ್ದೇವೆ ಅಂತಾರೆ ಅಧಿಕಾರಕ್ಕಾಗಿ ಏನೆಲ್ಲಾ ಮಾಡ್ತಾರೆ ಎಂಬುದು ಇದರಲ್ಲೇ ಗೊತ್ತಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. 

ವಿದ್ಯುತ್ ಸಮಸ್ಯೆ ಕುರಿತು ಉತ್ತರಿಸಿದ ಅವರು, ಆಗಸ್ಟ್ ತಿಂಗಳಲ್ಲಿ ಮಳೆ ಆಗಿಲ್ಲ. ವಿದ್ಯುತ್‌ಗಾಗಿ ರೈತರಿಗೆ ಸ್ವಲ್ಪ ತೊಂದರೆ ಆಗಿದೆ ಎಂದರು. ಜಿ20 ಶೃಂಗ ಸಭೆಗೆ ವಿರೋಧ ಪಕ್ಷ ನಾಯಕನನ್ನು ಆಹ್ವಾನಿಸದ ವಿಚಾರವಾಗಿ, ಅಧಿಕೃತವಾಗಿ ವಿರೋಧ ಪಕ್ಷದ ನಾಯಕರನ್ನು ಆಹ್ವಾನಿಸಬೇಕಿತ್ತು, ಆಹ್ವಾನಿಸಿಲ್ಲ. ಇದು ಖಂಡನಾರ್ಹ ಎಂದು ತಿಳಿಸಿದರು. 

ಮಹದಾಯಿ ಕಾಮಗಾರಿ ವಿಚಾರಕ್ಕೆ ಉತ್ತರಿಸಿದ ಸಿಎಂ, ಮೊದಲು ಫಾರೆಸ್ಟ್ ಕ್ಲಿಯರೆನ್ಸ್ ಕೊಡ್ಲಿ, ನಾವು ಮಾಡ್ತೇವೆ. ಪ್ರಧಾನಿಗೆ ಪತ್ರ ಬರೆದಿದ್ವಿ ಇದುವರೆಗೂ ಸ್ಪಂದನೆ ಬಂದಿಲ್ಲ. ನಾವು ಬರಗಾಲ ಘೋಷಣೆ ಮಾಡೇ ಮಾಡ್ತೀವಿ. ಕೇಂದ್ರ ಸರ್ಕಾರದ ನೆರವು ಕೂಡ ಬರ್ಬೇಕಲ್ಲ? ಜಿ20 ಸಭೆಗೆ ಕರ್ದಿಲ್ಲ, ಕರ್ದಿದ್ರೆ ಹೋಗ್ತಿದ್ದೆ. ಕೇವಲ ಊಟಕ್ಕೆ ಕರೆದಿದ್ದು ಅಷ್ಟೆ ಎಂದರು. 

ಬಿಜೆಪಿ ಕೋಮುವಾದಿ, ಮತೀಯವಾದಿ ಪಕ್ಷ: ಸಂಸದ ಬಚ್ಚೇಗೌಡ ಆರೋಪ

ರಾಷ್ಟ್ರ ರಾಜಕಾರಣಕ್ಕೆ ಹೋಗುವ ವಿಚಾರವಾಗಿ ಪ್ರಜಾಪ್ರಭುತ್ವದಲ್ಲಿ ಯಾರು ಏನಬೇಕಾದ್ರೂ ಆಗಬಹುದು. ನೇರವಾಗಿ ಗುಜರಾತ್ ಸಿಎಂ ಆಗಿ, ಪ್ರಧಾನ ಮಂತ್ರಿ ಆದ್ರೂ ಮೋದಿ. ರಾಷ್ಟ ರಾಜಕಾರಣಕ್ಕೆ ನಾನು ಹೋಗಲ್ಲ. ನಾನು ಸಮಸ್ಯೆ ಬಗ್ಗೆ ಮಾತಾಡ್ತಾನೆ. ಸುಮ್ನೆ ಟೀಕೆ ಮಾಡಲ್ಲ ಎಂದು ಸಿದ್ದರಾಮಯ್ಯ ಹೇಳಿದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!
ವಿಧಾನಸಭೆಯಲ್ಲಿ ಸಿಎಂ ಕುರ್ಚಿಯದ್ದೇ ಗುದ್ದಾಟ: ಬೈರತಿ 'ಕಿಂಗ್ ಅಲೈವ್' ಅಂದಿದ್ದು ಯಾಕೆ? ಆರ್ ಅಶೋಕ್, ಬೈರತಿ ವಾಕ್ಸಮರ!