ದಲಿತ ಸಮುದಾಯಕ್ಕೆ ಸಿಎಂ ಸಿದ್ದರಾಮಯ್ಯ ದ್ರೋಹ: ವಿಜಯೇಂದ್ರ ಆಕ್ರೋಶ

Published : Aug 07, 2024, 10:16 AM ISTUpdated : Aug 07, 2024, 10:20 AM IST
ದಲಿತ ಸಮುದಾಯಕ್ಕೆ ಸಿಎಂ ಸಿದ್ದರಾಮಯ್ಯ ದ್ರೋಹ: ವಿಜಯೇಂದ್ರ ಆಕ್ರೋಶ

ಸಾರಾಂಶ

ರಾಜ್ಯದ ಆರೂವರೆ ಕೋಟಿ ಜನರಿಗೆ ಕರ್ನಾಟಕದಲ್ಲಿ ಚುನಾಯಿತ ಸರ್ಕಾರ ಇದೆ ಎಂದೇ ಆನಿಸುತ್ತಿಲ್ಲ. ಕಾಂಗ್ರೆಸ್‌ನವರು ಅನೇಕ ಭರವಸೆಯೊಂದಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿ ದ್ದಾರೆ. ಆದರೆ ಕಳೆದ 14 ತಿಂಗಳಿನಲ್ಲಿ ವಿದ್ಯುತ್ ದರ, ಹಾಲಿನ ದರ ಹೆಚ್ಚಿಸಿದರೂ ಅದರ ಪ್ರಯೋಜನ ರೈತರು, ಹೈನುಗಾರರಿಗೆ ಲಭಿಸಿಲ್ಲ ಎಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ 

ಮದ್ದೂರು(ಆ.07):  ಕೇವಲ ಮುಡಾ ಅಥವಾ ವಾಲ್ಮೀಕಿ ಅಭಿವೃದ್ಧಿ ನಿಗಮ ಮಾತ್ರವಲ್ಲ ರಾಜ್ಯದ ಎಲ್ಲೆಡೆ ಕಾಂಗ್ರೆಸ್ ಪಕ್ಷದ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು.

ತಾಲೂಕಿನ ಸೋಮನಹಳ್ಳಿ ಮತ್ತು ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿ ಮಂಗಳವಾರ ನಾಲ್ಕನೇ ದಿನದ ಮೈಸೂರು ಚಲೋ ಪಾದಯಾತ್ರೆಯ ಬಹಿರಂಗ ಸಭೆಯಲ್ಲಿ ಮಾತನಾಡಿ, ರಾಜ್ಯದ ಆರೂವರೆ ಕೋಟಿ ಜನರಿಗೆ ಕರ್ನಾಟಕದಲ್ಲಿ ಚುನಾಯಿತ ಸರ್ಕಾರ ಇದೆ ಎಂದೇ ಆನಿಸುತ್ತಿಲ್ಲ. ಕಾಂಗ್ರೆಸ್‌ನವರು ಅನೇಕ ಭರವಸೆಯೊಂದಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿ ದ್ದಾರೆ. ಆದರೆ ಕಳೆದ 14 ತಿಂಗಳಿನಲ್ಲಿ ವಿದ್ಯುತ್ ದರ, ಹಾಲಿನ ದರ ಹೆಚ್ಚಿಸಿದರೂ ಅದರ ಪ್ರಯೋಜನ ರೈತರು, ಹೈನುಗಾರರಿಗೆ ಲಭಿಸಿಲ್ಲ ಎಂದರು.

ಸಂಸತ್ ಅಧಿವೇಶನದ ಬಳಿಕ ಸಿದ್ದು ಪ್ರಾಸಿಕ್ಯೂಷನ್ ಭವಿಷ್ಯ ನಿರ್ಧಾರ?

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ದಲಿತ ಸಮುದಾಯದ ಅಭಿವೃದ್ವಿಗೆ ಮೀಸಲಿಟ್ಟ ಹಣ ಲೂಟಿ ಮಾಡಿ ಆ ಸಮುದಾಯಕ್ಕೆ ದ್ರೋಹ ಮಾಡಿದೆ. ನಿಗಮದ ಹಗರಣದ ಆರೋಪಿಗಳ ಹೆಸರನ್ನು ಎಸ್‌ಐಟಿ ತನಿಖೆಯ ಚಾರ್ಜ್‌ ಶೀಟ್‌ನಲ್ಲಿ ಕೈ ಬಿಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಗರಣದ ಪ್ರಮುಖ ಆರೋಪಿಯಾಗಿದ್ದಾರೆ ಎಂದು ದೂರಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಹಾಲು ಉತ್ಪಾದಕರಿಗೆ 5 ರು. ಪ್ರೋತ್ಸಾಹ ಧನ ಕೊಡುತ್ತಿತ್ತು. ಆದರೆ, ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರ ಬಗ್ಗೆ ಮೊಸಳೆಕಣ್ಣೀರು ಹಾಕುತ್ತಿದ್ದು, ಹಾಲು ಉತ್ಪಾದಕರಿಗೆ 1200 ಕೋಟಿ ರು. ಪ್ರೋತ್ಸಾಹಧನ ಬಾಕಿ ಉಳಿಸಿ ಕೊಂಡಿದ್ದಾರೆ ಎಂದು ಕಿಡಿಕಾರಿದರು. ರಾಜ್ಯ ಸರ್ಕಾರ ಎಲ್ಲಾ ನೋಂದಣಿ ಶುಲ್ಕಗಳನ್ನು ಹೆಚ್ಚಳ ಮಾಡಿದೆ. ಜನರಿಗೆ ಅಕ್ಕಿ, ದವಸ ಧಾನ್ಯವೂ ದುಬಾರಿಯಾಗಿದೆ. ಅಧಿಕಾರಕ್ಕೆ ಬಂದ 14 ತಿಂಗಳಲ್ಲೇ ಸಿದ್ದರಾಮಯ್ಯ ಸರ್ಕಾರ ಭಾರೀ ಸಾಲ ಮಾಡಿದೆ ಎಂದು ದೂರಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಡಿಕೆಗೆ ದಿಲ್ಲಿ ಪೊಲೀಸ್‌ ನೋಟಿಸ್‌
Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!