ಸಿಎಂ ರಾಜೀನಾಮೆ ಕೊಡಲ್ಲ, ಬೆಂಬಲಕ್ಕೆ ನಾವಿದ್ದೇವೆ: ಸಚಿವ ಪರಮೇಶ್ವರ್‌

Published : Aug 08, 2024, 04:29 AM ISTUpdated : Aug 08, 2024, 09:13 AM IST
ಸಿಎಂ ರಾಜೀನಾಮೆ ಕೊಡಲ್ಲ, ಬೆಂಬಲಕ್ಕೆ ನಾವಿದ್ದೇವೆ: ಸಚಿವ ಪರಮೇಶ್ವರ್‌

ಸಾರಾಂಶ

ನಮ್ಮ ನಾಯಕರಾದ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ನಮಗೆ ನಿರ್ದೇಶನ ನೀಡಿರುವುದು ನಿಜ. ನಮ್ಮ ನಾಯಕ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಎಲ್ಲರೂ ನಿಲ್ಲಬೇಕು ಎಂದು ಹೇಳಿದ್ದಾರೆ. ನಾವು ಸಹ ಅವರಿಗೆ ಬೆಂಬಲವಾಗಿದ್ದೇವೆ. ಸುರ್ಜೇವಾಲಾ ಹೇಳಿದ್ದರಲ್ಲಿ ತಪ್ಪೇನೂ ಇಲ್ಲ ಎಂದ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ 

ಕೊಪ್ಪಳ/ಹೊಸಪೇಟೆ(ಆ.08): ರಾಜ್ಯಪಾಲರು ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ, ಆಗ ನಾವು ಕಾನೂನು ಹೋರಾಟ ಮಾಡುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದರು. 

ಸೋಮನಾಳ ಗ್ರಾಮದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮ ನಾಯಕರಾದ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ನಮಗೆ ನಿರ್ದೇಶನ ನೀಡಿರುವುದು ನಿಜ. ನಮ್ಮ ನಾಯಕ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಎಲ್ಲರೂ ನಿಲ್ಲಬೇಕು ಎಂದು ಹೇಳಿದ್ದಾರೆ. ನಾವು ಸಹ ಅವರಿಗೆ ಬೆಂಬಲವಾಗಿದ್ದೇವೆ. ಸುರ್ಜೇವಾಲಾ ಹೇಳಿದ್ದರಲ್ಲಿ ತಪ್ಪೇನೂ ಇಲ್ಲ ಎಂದರು.

ಪಿಎಸ್ಐ ಪರಶುರಾಮ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ; ಗೃಹ ಸಚಿವ ಪರಮೇಶ್ವರ

ರಾಜ್ಯಪಾಲರು ಖಾಸಗಿ ವ್ಯಕ್ತಿ ನೀಡಿದ ದೂರಿನ ಆಧಾರದ ಮೇಲೆ ನೋಟಿಸ್ ಜಾರಿ ಮಾಡಿದ್ದರಿಂದ ಮುಖ್ಯಮಂತ್ರಿ ಅವರನ್ನು ಹೊರಗಿಟ್ಟು ಸಂಪುಟ ಸಭೆ ಮಾಡಿದ್ದೇವೆ.ರಾಜ್ಯಪಾಲರು ನೀಡಿದ್ದ ನೋಟಿಸ್ ನಿಯಮಾನುಸಾರ ಇಲ್ಲ ಎಂದು ಹೇಳಿದ್ದೇವೆ. ಈಗ ಅವರು ಏನು ಮಾಡುತ್ತಾರೆ ಎನ್ನುವುದನ್ನು ಕಾದು ನೋಡುತ್ತೇವೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!