
ಮೈಸೂರು(ಏ.03): ನಮ್ಮ ಸಂವಿಧಾನ ಬದಲಾವಣೆಗೆ ಮುಂದಾದರೆ ಪರಿಸ್ಥಿತಿ ನೆಟ್ಟಗಿರಲ್ಲ. ನಮ್ಮ ಸಂವಿಧಾನದ ಸ್ವರೂಪ ಬದಲಾಯಿಸಿ ದೇಶದ ದುಡಿಯುವ ವರ್ಗಗಳಿಗೆ ವಂಚಿಸಿದರೆ ದೇಶದ ಪರಿಸ್ಥಿತಿ ಬಿಗಡಾಯಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಗೆ ಎಚ್ಚರಿಸಿದರು.
ಮೈಸೂರಿನ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ನಡೆದ 45 ಹೆಚ್ಚು ಮಂದಿ ಹೋಬಳಿ ಮಟ್ಟದ ಮುಖಂಡರು ಹಾಗೂ ಮಾಜಿ ಕೇಂದ್ರ ಸಚಿವ ವಿ.ಶ್ರೀನಿವಾಸಪ್ರಸಾದ್ ಅವರ ಆತ್ಮೀಯರು ಮತ್ತು ಸಂಬಂಧಿಕರನ್ನು ಕಾಂಗ್ರೆಸ್ ಪಕ್ಷಕ್ಕೆ ಬರ ಮಾಡಿಕೊಂಡ ಬಳಿಕ ಮಾತನಾಡಿದರು.
ಬಿಜೆಪಿಯಿಂದ ಯಾವುದೇ ಅಭಿವೃದ್ಧಿ ಕೆಲಸ ಆಗಿಲ್ಲ; ಆದ್ರೂ ಜನ ಮೋದಿ ಮೋದಿ ಅಂತಾ ಕೂಗ್ತಾರೆ: ಎಚ್ಸಿ ಮಹದೇವಪ್ಪ ಕಿಡಿ
ನಾನು ಮುಖ್ಯಮಂತ್ರಿ ಆಗಿರಲು, ಮೋದಿ ಪ್ರಧಾನಿ ಆಗಿರಲು ನಮ್ಮ ಸಂವಿಧಾನ ಕಾರಣ. ಬಿಜೆಪಿ ನಮ್ಮ ಈ ಸಂವಿಧಾನ ಬದಲಾವಣೆಯ ಅಜೆಂಡಾ ಇಟ್ಟುಕೊಂಡಿದೆ. ಈ ಸಂವಿಧಾನ ಬದಲಾದರೆ ದೇಶದ ದಲಿತರು, ಶೂದ್ರರು, ಮಹಿಳೆಯರು ಮತ್ತು ಶ್ರಮಿಕ ವರ್ಗಗಳಿಗೆ ಉಳಿಗಾಲವಿಲ್ಲ. ಹೀಗಾಗಿ, ನಾವೆಲ್ಲಾ ಉಳಿಯಬೇಕಾದರೆ ಸಂವಿಧಾನ ಉಳಿಯಬೇಕು. ಸಂವಿಧಾನ ಉಳಿಯಬೇಕೆಂದರೆ ಬಿಜೆಪಿ ಸೋಲಬೇಕು ಎನ್ನುವ ಪಣ ತೊಡಿ ಎಂದರು.
ಪ್ರಸಾದ್ ಬೆಂಬಲಿಗರು ಸೇರ್ಪಡೆ:
ಇದೇ ವೇಳೆ ಸಂಸದ ವಿ.ಶ್ರೀನಿವಾಸಪ್ರಸಾದ್ ಸಹೋದರ ವಿ.ರಾಮಸ್ವಾಮಿ, ಭರತ್ ರಾಮಸ್ವಾಮಿ, ಮುಖಂಡರಾದ ಶಿವಕುಮಾರ್, ಸಂತೋಷ್, ಸಿ.ಜಿ.ಶಿವಕುಮಾರ್, ಶಾಂತರಾಮ್ ಶೆಟ್ಟಿ, ಮದನ್, ಸಿದ್ದಲಿಂಗ, ವೆಂಕಟೇಶ್, ರವಿ, ನಾಗೇಶ್, ಸುರೇಶ್ ಕುಮಾರ್, ಶ್ರೀನಿವಾಸ್ ಮೊದಲಾದವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.