ನಾನು ನಾನೇ, ದೇವರಾಜ ಅರಸು ಆಗಲು ಅಸಾಧ್ಯ: ಸಿಎಂ ಸಿದ್ದರಾಮಯ್ಯ

Published : Sep 18, 2023, 04:23 AM IST
ನಾನು ನಾನೇ, ದೇವರಾಜ ಅರಸು ಆಗಲು ಅಸಾಧ್ಯ: ಸಿಎಂ ಸಿದ್ದರಾಮಯ್ಯ

ಸಾರಾಂಶ

‘ನನ್ನನ್ನು ಎಲ್ಲರೂ ಎರಡನೇ ದೇವರಾಜ ಅರಸು ಅಂತಾರೆ. ಆದರೆ, ದೇವರಾಜ ಅರಸು ದೇವರಾಜ ಅರಸುನೇ ಸಿದ್ದರಾಮಯ್ಯ ಸಿದ್ದರಾಮಯ್ಯನೇ. ನಾನು ದೇವರಾಜ ಅರಸು ಆಗಲು ಸಾಧ್ಯವಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 

ಬೆಂಗಳೂರು (ಸೆ.18): ‘ನನ್ನನ್ನು ಎಲ್ಲರೂ ಎರಡನೇ ದೇವರಾಜ ಅರಸು ಅಂತಾರೆ. ಆದರೆ, ದೇವರಾಜ ಅರಸು ದೇವರಾಜ ಅರಸುನೇ ಸಿದ್ದರಾಮಯ್ಯ ಸಿದ್ದರಾಮಯ್ಯನೇ. ನಾನು ದೇವರಾಜ ಅರಸು ಆಗಲು ಸಾಧ್ಯವಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇತ್ತೀಚೆಗೆ ಪಕ್ಷದ ಹಿರಿಯ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರು ಪರೋಕ್ಷವಾಗಿ ದೇವರಾಜ ಅರಸು ಅವರನ್ನು ಪ್ರಸ್ತಾಪಿಸಿ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದರು. ಈ ಹಿನ್ನೆಲೆಯಲ್ಲಿ ಸಿದ್ದು ಹೇಳಿಕೆಗೆ ಮಹತ್ವ ಬಂದಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ರವೀಂದ್ರ ಕಲಾಕ್ಷೇತ್ರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ವಿಶ್ವಕರ್ಮ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ‘ನಾನು ಅರಸು ಆಗಲು ಸಾಧ್ಯವಿಲ್ಲ. ಅರಸು, ಇಂದಿರಾಗಾಂಧಿ, ನೆಹರೂ ಎಲ್ಲರೂ ಭಿನ್ನವಾಗಿದ್ದರು. ಆದರೆ ಇವರೆಲ್ಲರ ಸಾಮಾಜಿಕ ಕೊಡುಗೆಗಳು ಅಪಾರ. ಯಾರ ಕೊಡುಗೆಗಳನ್ನೂ ಅಲ್ಲಗಳೆಯಲಾಗದು. ಒಬ್ಬರು ಇನ್ನೊಬ್ಬರಾಗಲು ಸಾಧ್ಯವಿಲ್ಲ. ಹಾಗೆಯೇ ನಾನು ದೇವರಾಜ ಅರಸು ಆಗಲು ಸಾಧ್ಯವಿಲ್ಲ’ ಎಂದರು.

ಆರ್‌ಎಸ್‌ಎಸ್‌ ತತ್ವ ನಂಬಿ ಉದ್ಧಾರ ಆಗಿರುವವರ ತೋರಿಸಿ: ಸಚಿವ ಪ್ರಿಯಾಂಕ್ ಖರ್ಗೆ

‘ನಾವು ರೂಪಿಸುವ ಕಾಳಜಿ ಮತ್ತು ಕಾರ್ಯಕ್ರಮಗಳಲ್ಲಿ ಸಾಮಾಜಿಕ ನ್ಯಾಯ ಇರುತ್ತದೆ. ಎಲ್ಲಾ ಹಿಂದುಳಿದ ಜಾತಿ, ಸಮುದಾಯಗಳು ಸಮಾನ ಅವಕಾಶಗಳನ್ನು ಪಡೆದುಕೊಂಡು ಮುಂದುವರೆದಾಗ ಮಾತ್ರ ಇಡೀ ಸಮಾಜ ಮುಂದುವರೆಯುತ್ತದೆ. ಕೆಲವೇ ಜಾತಿ-ಸಮುದಾಯಗಳು ಅವಕಾಶಗಳನ್ನು ಪಡೆದುಕೊಂಡು ಉಳಿದವುಗಳು ಅವಕಾಶ ವಂಚಿತರಾಗುತ್ತಿದ್ದರೆ ಅದನ್ನು ಪ್ರಗತಿ ಪಥದಲ್ಲಿರುವ ಸಮಾಜ ಎಂದು ಕರೆಯಲು ಸಾಧ್ಯವಿಲ್ಲ’ ಎಂದು ಅಭಿಪ್ರಾಯಪಟ್ಟರು.

ಆಚಾರ್‌ ದುಡುಕಿದರು: ‘ಬಿಂಬಾರಾಯ್ಕರ್, ರಘು ಆಚಾರ್ ಸೇರಿ ವಿಶ್ವಕರ್ಮ ಸಮುದಾಯದ ಹಲವರಿಗೆ ಕಾಂಗ್ರೆಸ್‌ ರಾಜಕೀಯ ಪ್ರಾತಿನಿಧ್ಯ ಮತ್ತು ಅಧಿಕಾರವನ್ನು ಒದಗಿಸಿಕೊಟ್ಟಿತ್ತು. ಆದರೆ, ರಘು ಆಚಾರ್‌ ದುಡುಕಿ ಕಾಂಗ್ರೆಸ್ ತೊರೆದರು. ನಾನು ಎಷ್ಟು ಹೇಳಿದರೂ ಕೇಳಲಿಲ್ಲ’ ಎಂದರು. ‘ಕಾಂಗ್ರೆಸ್ ಪ್ರತಿಯೊಂದು ಜಾತಿ, ಸಮುದಾಯಗಳಿಗೂ ಅವಕಾಶ ಮತ್ತು ಅಧಿಕಾರವನ್ನು ನಿರಂತರವಾಗಿ ಒದಗಿಸುತ್ತಲೇ ಬಂದಿದೆ. ಆ ಮೂಲಕ ಹಿಂದುಳಿದ ಸಮುದಾಯಗಳಿಗೆ, ದಲಿತ ಸಮುದಾಯಗಳಿಗೂ ಶಕ್ತಿ ತುಂಬುತ್ತಿದೆ. ಒಂದು ಕೋಟಿ ರೂಪಾಯಿವರೆಗಿನ ಕಾಂಟ್ರಾಕ್ಟ್ ಕೆಲಸಗಳಿಗೆ ಮೀಸಲಾತಿ ಒದಗಿಸಿದ್ದು ನಾವೆ ತಾನೇ ಎಂದ ಮುಖ್ಯಮಂತ್ರಿಗಳು ನನಗೆ ಅಧಿಕಾರ ಎನ್ನುವುದು ಸಾಮಾಜಿಕ ನ್ಯಾಯವನ್ನು ಆಚರಿಸುವ, ಪಾಲಿಸುವ ಒಂದು ಸಾಧನ’ ಎಂದು ವಿವರಿಸಿದರು.

‘ವಿಶ್ವಕರ್ಮ ಸಮುದಾಯದ ಮಕ್ಕಳಿಗೆ ಶಾಲೆ, ಹಾಸ್ಟೆಲ್ ಗಳನ್ನು ನಿರ್ಮಿಸುವ ಕಾರಣಕ್ಕೆ ಸರ್ಕಾರದಿಂದ ಜಾಗ ಕೇಳಿದ್ದೀರಿ. ಎಲ್ಲಾ ಸಮುದಾಯಗಳೂ ಜಾಗ ಪಡೆದುಕೊಂಡಿವೆ. ನೀವೂ ಪಡೆದುಕೊಳ್ಳಿ. ನಮ್ಮ ಸರ್ಕಾರ ನಿಮಗೂ ಜಾಗ ಒದಗಿಸುತ್ತದೆ ಮಕ್ಕಳನ್ನು ಹೆಚ್ಚೆಚ್ಚು ಶಿಕ್ಷಿತರನ್ನಾಗಿ ಮಾಡಿ’ ಎಂದು ಹಾರೈಸಿದರು. ‘ವಿಶ್ವಕರ್ಮ ನಿಗಮಕ್ಕೆ ಮೊದಲಿನಿಂದಲೂ ಹೆಚ್ಚು ಅನುದಾನ ಕೊಡುತ್ತಾ ಬಂದಿರುವವರು ನಾವೇ. ಈಗ ಇನ್ನಷ್ಟು ಹೆಚ್ಚಿಸಬೇಕು ಎನ್ನುವ ಬೇಡಿಕೆ ಇದೆ. ಆ ಬಗ್ಗೆ ಪರಿಶೀಲಿಸಲಾಗುವುದು. ಚುನಾವಣೆ ಬಂದಾಗ ಭಾಷಣಗಳಲ್ಲಿ ಕಾಳಜಿಗಳು ಕೇಳಿಸುತ್ತವೆ. ಆದರೆ, ಯಾರಿಗೆ-ಯಾವ ಪಕ್ಷಕ್ಕೆ ನಿಜವಾದ ಬದ್ಧತೆ ಇದೆ ಎನ್ನುವುದನ್ನು ಗುರುತಿಸಿ ತೀರ್ಮಾನ ತೆಗೆದುಕೊಳ್ಳಿ.

ರೈತರನ್ನು ಬಲಿ ಕೊಟ್ಟು ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ: ಕಾಂಗ್ರೆಸ್ ವಿರುದ್ಧ ರವಿಕುಮಾರ್ ವಾಗ್ದಾಳಿ

ಕಾಳಜಿ, ಬದ್ಧತೆ ಇಲ್ಲದವರ ಕೈಗೆ ಅಧಿಕಾರ ಕೊಟ್ಟು ಸಮಾಜಕ್ಕೆ ಒಳ್ಳೆಯದು ಆಗಬೇಕು ಎಂದು ತಲೆ ಚಚ್ಚಿಕೊಂಡರೆ ಸಾಧ್ಯವಿಲ್ಲದ ಮಾತು. ಆದ್ದರಿಂದ ಸಾಮಾಜಿಕ ನ್ಯಾಯವನ್ನು ಯಾರು, ಯಾವ ಪಕ್ಷದವರು ಪಾಲಿಸುತ್ತಿದ್ದಾರೆ ಎನ್ನುವುದನ್ನು ಪ್ರಾಮಾಣಿಕವಾಗಿ ಗ್ರಹಿಸಿ’ ಎಂದು ಕರೆ ನೀಡಿದರು. ಮಧುಗಿರಿ ನಿಟ್ಟರಹಳ್ಳಿಯ ವಿಶ್ವಕರ್ಮ ಸಂಪನ್ಮೂಲ ಮಠದ ಡಾ.ನೀಲಕಂಠಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಮಾತನಾಡಿದರು. ಸಮುದಾಯದ ಮುಖಂಡರು ಮತ್ತು ಇಲಾಖೆಯ ಅಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ
ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ