
ಬೆಂಗಳೂರು (ಆ.08): ಮಂಡ್ಯ ಜಿಲ್ಲೆಯ ಕೃಷಿ ಇಲಾಖೆ ಅಧಿಕಾರಿಗಳು ಕೃಷಿ ಸಚಿವ ಚಲುವರಾಯಸ್ವಾಮಿ ಅವರ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ ಎಂಬರ್ಥದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪತ್ರ ನಕಲಿ ಎಂದು ಸಾಬೀತಾಗಿದೆ. ಆದರೂ ಈ ಸಂಬಂಧ ಅಗತ್ಯವೆನಿಸಿದರೆ ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಮಂಡ್ಯ ಜಿಲ್ಲೆಯ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎಂಬರ್ಥದಲ್ಲಿ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪತ್ರ ನಕಲಿಯಾದುದು ಎಂಬುದು ಬಯಲಾಗಿದೆ. ಅಂತಹ ಅಧಿಕಾರಿಗಳು ಯಾರೂ ಜಿಲ್ಲೆಯಲ್ಲಿ ಇಲ್ಲ ಎಂದು ಮಂಡ್ಯದ ಕೃಷಿ ಇಲಾಖೆ ಜಂಟಿ ನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ. ಹೀಗಿದ್ದರೂ ಈ ಸಂಬಂಧ ಪರಿಶೀಲನೆ ನಡೆಸಿ, ಅಗತ್ಯ ಕಂಡುಬಂದಲ್ಲಿ ತನಿಖೆ ನಡೆಸುತ್ತೇವೆ ಎಂದು ಹೇಳಿದ್ದಾರೆ.
ಬಿಜೆಪಿ ತಡೆದ ಯೋಜನೆಗೆ ಮತ್ತೆ ಚಾಲನೆ ನೀಡುವೆ: ಸಚಿವ ಮಲ್ಲಿಕಾರ್ಜುನ
ಸಚಿವರಿಗೆ ಕರೆ ಮಾಡಿ ಮಾಹಿತಿ ಪಡೆದ ಸಿಎಂ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಜಿಲ್ಲೆಯ ಸಹಾಯಕ ಕೃಷಿ ನಿರ್ದೇಶಕರ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆಂಬ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖುದ್ದು ಸಚಿವರಿಗೆ ಕರೆ ಮಾಡಿ ಮಾಹಿತಿ ಸಂಗ್ರಹಿಸಿದ್ದಾರೆ.
ಈ ಬಗ್ಗೆ ಖಚಿತಪಡಿಸಿರುವ ಸಚಿವ ಎನ್.ಚಲುವರಾಯಸ್ವಾಮಿ ಅವರು, ನಿಮ್ಮ ವಿರುದ್ಧ ಈ ರೀತಿಯ ಗಂಭೀರ ಆರೋಪ ಕೇಳಿ ಬಂದಿದೆ ಎಂದು ಕೇಳಿದರು. ಎಲ್ಲ ರೀತಿಯಿಂದಲೂ ತನಿಖೆ ನಡೆಸುವಂತೆ ಸ್ವತಃ ನಾನೇ ಹೇಳಿದ್ದೇನೆ. ಈ ಪತ್ರದ ಬಗ್ಗೆ ತನಿಖೆ ನಡೆಯಲಿ. ಸತ್ಯಾಸತ್ಯತೆ ಹೊರಬರಲಿ. ಅಧಿಕಾರಿಗಳಿಂದಲೂ ಮಾಹಿತಿ ಪಡೆದಿದ್ದೇನೆ. ಮಂಡ್ಯ ಎಸ್ಪಿ, ಜಂಟಿ ಕೃಷಿ ನಿರ್ದೇಶಕರಿಂದಲೂ ಮಾಹಿತಿ ಪಡೆದಿದ್ದೇನೆ ಎಂದರು.
ಮೋದಿ ಬಂದ ಮೇಲೆ ರೈಲ್ವೆ ಇಲಾಖೆ ಚಿತ್ರಣ ಬದಲು: ಪ್ರಲ್ಹಾದ್ ಜೋಶಿ
ಜಂಟಿ ಕೃಷಿ ನಿರ್ದೇಶಕರು ಸಹಾಯಕ ಕೃಷಿ ನಿರ್ದೇಶಕರೊಂದಿಗೆ ಈಗಾಗಲೇ ಜೂಮ್ ಮೀಟಿಂಗ್ ಮಾಡಿದ್ದಾರೆ. ಅವರೂ ಸಹ ನಾವು ಪತ್ರ ಬರೆದಿಲ್ಲ ಎಂದಿದ್ದಾರಂತೆ. ಮಂಡ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೂ ಈ ಬಗ್ಗೆ ತನಿಖೆ ನಡೆಸುವಂತೆ ಸೂಚಿಸಿದ್ದೇನೆ. ಅವರ ಪ್ರಾಥಮಿಕ ತನಿಖೆಯಿಂದ ಫೇಕ್ ಅನ್ನೋದು ಸಾಬೀತಾಗಿದೆಯಂತೆ ಎಂದರು. ಈ ಹಿಂದೆ ಕಂಡಕ್ಟರ್ ಆತ್ಮಹತ್ಯೆ ಯತ್ನ ವಿಚಾರದಲ್ಲೂ ನನ್ನ ವಿರುದ್ಧ ಆರೋಪ ಮಾಡಿದ್ದರು. ಈಗಲೂ ಅವರೇ ಇದನ್ನೂ ಮಾಡಿರಬೇಕು. ಇದು ಫೇಕ್ ಲೆಟರ್ ಅಂತ ನಾನು ಹೇಳೋದಿಲ್ಲ. ತನಿಖೆಯಿಂದ ಎಲ್ಲವೂ ಗೊತ್ತಾಗಲಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.