ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕಾವೇರಿ ನಿವಾಸವನ್ನು ತೆರವುಗೊಳಿಸಿದ ಹಿನ್ನೆಲೆಯಲ್ಲಿ ಸೋಮವಾರ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರೊಂದಿಗೆ ಕಾವೇರಿ ನಿವಾಸಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು(ಜೂ.13): ಮುಖ್ಯಮಂತ್ರಿಗಳ ಅದೃಷ್ಟದ ನಿವಾಸ ಎಂದೇ ಕರೆಯಲ್ಪಡುವ ‘ಕಾವೇರಿ’ಗೆ ಆದಷ್ಟು ಬೇಗ ತಮ್ಮ ವಾಸ್ತವ್ಯ ಬದಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಮನಹರಿಸಿದ್ದು ಈ ನಿಟ್ಟಿನಲ್ಲಿ ಕಾವೇರಿ ನಿವಾಸದ ನವೀಕರಣದ ಮಾಹಿತಿ ಪಡೆದಿದ್ದಾರೆ.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕಾವೇರಿ ನಿವಾಸವನ್ನು ತೆರವುಗೊಳಿಸಿದ ಹಿನ್ನೆಲೆಯಲ್ಲಿ ಸೋಮವಾರ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರೊಂದಿಗೆ ಕಾವೇರಿ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಅವರು ಪರಿಶೀಲನೆ ನಡೆಸಿದರು. ಈ ವೇಳೆ ಸಚಿವರು ಹಾಗೂ ಅಧಿಕಾರಿಗಳು ನವೀಕರಣದ ಕುರಿತು ಮಾಹಿತಿ ನೀಡಿದರು. ಸಿದ್ದರಾಮಯ್ಯ ಅವರು ತಮ್ಮ ಆಸಕ್ತಿಗೆ ತಕ್ಕಂತೆ ನವೀಕರಣಕ್ಕೆ ಕೆಲ ಸಲಹೆ-ಸೂಚನೆಗಳನ್ನು ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಸರ್ಕಾರಿ ವಕೀಲರ ನೇಮಕಾತಿ ಅಕ್ರಮವನ್ನು ಇಲಾಖಾ ತನಿಖೆಗೆ ಆದೇಶಿಸಿದ ಸಿಎಂ ಸಿದ್ದರಾಮಯ್ಯ
ಸದ್ಯ ಕಾವೇರಿ ನಿವಾಸದಲ್ಲಿ ಪೇಂಟಿಂಗ್ ಕಾರ್ಯ ಆರಂಭವಾಗಿದೆ. ಸಂಪೂರ್ಣ ನವೀಕರಣಕ್ಕೆ ಇನ್ನೂ ಒಂದು ತಿಂಗಳು ಬೇಕಾಗಬಹುದು. ಆ ನಂತರವೇ ಮುಖ್ಯಮಂತ್ರಿಗಳು ಈ ನಿವಾಸಕ್ಕೆ ವಾಸ್ತವ್ಯ ಬದಲಿಸಲು ಸಾಧ್ಯವಾಗಲಿದೆ ಎನ್ನುತ್ತವೆ ಮೂಲಗಳು.