
ಬೆಂಗಳೂರು, (ಜ.02): ಶಿವಮೊಗ್ಗದಲ್ಲಿ ಜನವರಿ 2 ಹಾಗೂ 3ರಂದು ಎರಡು ದಿನಗಳ ಕಾಲ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಇದರಲ್ಲಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಭಾಗವಹಿಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ಜನವರಿ 1ರಂದೇ ಅರುಣ್ ಸಿಂಗ್ ಅವರು ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದು, ಕುಮಾರಕೃಪ ಅತಿಥಿಗೃಹದಲ್ಲಿ ವಾಸ್ತವ್ಯಹೂಡಿದ್ದರು. ಈ ವೇಳೆ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಪ್ರಮುಖ ನಾಯಕರು ಮಹತ್ವದ ಮಾತುಕತೆ ನಡೆಸಿದ್ದಾರೆ.
ಸಿಎಂ ತವರಲ್ಲಿ ಮಹತ್ವದ ಸಭೆ: ಬಿಎಸ್ವೈ, ಅರುಣ್ ಸಿಂಗ ನೇತೃತ್ವದಲ್ಲಿ ಕಾರ್ಯತಂತ್ರ...! .
ಕುಮಾರಕೃಪ ಅತಿಥಿಗೃಹದಲ್ಲಿ ವಾಸ್ತವ್ಯಹೂಡಿದ್ದ ಅರುಣ್ ಸಿಂಗ್ ಅವರನ್ನ ಭೇಟಿ ಮಾಡಿದ ಸಿಎಂ ಯಡಿಯೂರಪ್ಪ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹಸಚಿವ ಬಸವರಾಜ್ ಬೊಮ್ಮಾಯಿ ಸೇರಿದಂತೆ ಮತ್ತಿತರ ಪ್ರಮುಖ ನಾಯಕರು ಚರ್ಚೆ ನಡೆಸಿದರು.
ಕೆಲವೇ ಆಪ್ತ ನಾಯಕರಿಗೆ ಮಾತ್ರ ಅರುಣ್ ಸಿಂಗ್ ಅವರ ಭೇಟಿಗೆ ಅವಕಾಶ ಕಲ್ಪಿಸಲಾಗಿತ್ತು. ಕೆಲವು ನಾಯಕರು ಅವರನ್ನು ಭೇಟಿಯಾಗುವ ಇಚ್ಛೆ ಹೊಂದಿದ್ದರಾದರೂ ಅವಕಾಶ ಸಿಗಲಿಲ್ಲ. ಸುಮಾರು 20 ನಿಮಿಷಗಳಿಗೂ ಹೆಚ್ಚು ಕಾಲ ಅರುಣ್ ಸಿಂಗ್ ಜೊತೆ ಬಿಎಸ್ವೈ, ಗೋವಿಂದ ಕಾರಜೋಳ ಅವರುಗಳು, ಸಚಿವ ಸಂಪುಟ ವಿಸ್ತರಣೆ/ ಪುನಾರಚನೆ, ನಿಗಮ ಮಂಡಳಿಗೆ ಅಧ್ಯಕ್ಷರ ನೇಮಕಾತಿ, ಪಕ್ಷದೊಳಗಿನ ಭಿನ್ನಮತ ಸೇರಿದಂತೆ ಕೆಲವು ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.