
ಬೆಂಗಳೂರು, (ಅ.14) : ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ರಂಗೇರುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ದಿ. ಐಎಎಸ್ ಅಧಿಕಾರಿ ಡಿ.ಕೆ. ರವಿ ಪತ್ನಿ ಹಾಗೂ ಹನುಮಂತರಾಯಪ್ಪರ ಪುತ್ರಿ ಕುಸುಮಾ ಅಖಾಡಕ್ಕಿಳಿದಿದ್ದಾರೆ.
ಜ್ಯೋತಿಷಿಗಳ ಸಲಹೆಯಂತೆ ನಿನ್ನೆ (ಮಂಗಳವಾರ) ನಾಮಪತ್ರ ಸಲ್ಲಿಸಿರುವ ಕುಸುಮಾ, ಇಂದು (ಬುಧವಾರ) ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗು ಮಾಜಿ ಸಿಎಂ ಸಿದ್ದರಾಮಯ್ಯನವರ ಜತೆ ತೆರಳೆ ಎರಡನೇ ಬಾರಿ ನಾಮಪತ್ರ ಸಲ್ಲಿಸಿದರು.
ಆದ್ರೆ, 2ನೇ ಬಾರಿ ನಾಮೊತ್ರ ಸಲ್ಲಿಸುವ ವೇಳೆ ಸಿದ್ದರಾಮಯ್ಯನವರ ಕಾರು ಚಾಲಕನ ಎಡವಟ್ಟಿನಿಂದಾಗಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕುಸುಮಾ ನಾಮಪತ್ರ ಸಲ್ಲಿಕೆ : ಪತಿ ಹೆಸರಿನ ಕಲಂನಲ್ಲಿ ಭರ್ತಿ ಮಾಡಿದ್ದೇನು..?
ಹೌದು....ಕುಸುಮಾ ಸೇರಿದಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಎಸ್ಕಾರ್ಟ್ ಹಾಗೂ ಪೈಲೆಟ್ ವಾಹನ ಚಾಲರ ವಿರುದ್ಧ ರಾಜರಾಜೇಶ್ವರಿ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
ನಾಮಪತ್ರ ಸಲ್ಲಿಸುವ ಕಚೇರಿಯ 100 ಮೀಟರ್ ದೂರದಲ್ಲಿ ಬ್ಯಾರಿಕೇಡ್ ಹಾಕಲಾಗಿತ್ತು. ಆದ್ರೆ, ಸಿದ್ದರಾಮಯ್ಯನವರ ಚಾಲಕರು ಬ್ಯಾರಿಕೇಡ್ ತೆಗೆದು ನೂರು ಮೀಟ್ ವ್ಯಾಪ್ತಿಯೊಳಗೆ ಕಾರು ಚಲಾಯಿಸಿಕೊಂಡು ಹೋಗಿದ್ದಾರೆ. ಇದರಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಕೇಸ್ ದಾಖಲಾಗಿದೆ.
ಐಪಿಸಿ ಸೆಕ್ಷನ್ 353 (ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿ) ಹಾಗೂ 188 (ಸರ್ಕಾರಿ ಅಧಿಕಾರಿಯ ಆದೇಶ ಪಾಲಿಸದಿರುವುದು) ಅಡಿಯಲ್ಲಿ ದೂರು ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.