ಅಭಿವೃದ್ಧಿ ಕುರಿತು ಬಹಿರಂಗ ಚರ್ಚೆಗೆ ಬನ್ನಿ: ಖರ್ಗೆ ಸವಾಲು

Published : Aug 08, 2022, 11:49 AM IST
ಅಭಿವೃದ್ಧಿ ಕುರಿತು ಬಹಿರಂಗ ಚರ್ಚೆಗೆ ಬನ್ನಿ: ಖರ್ಗೆ ಸವಾಲು

ಸಾರಾಂಶ

ಭಾವನಾತ್ಮಕ ವಿಷಯ ಹೇಳಿ ಜನರಿಗೆ ಮೋಸ ಮಾಡುವ ಬಿಜೆಪಿಗರು ಎಷ್ಟುಜನ ಯುವಕರಿಗೆ ಉದ್ಯೋಗ ನೀಡಿದ್ದಾರೆ. ಕಲಬುರಗಿ ಜಿಲ್ಲೆಗೆ, ಚಿತ್ತಾಪುರ ಮತಕ್ಷೇತ್ರಕ್ಕೆ ಎಷ್ಟುಅನುದಾನ ತಂದಿದ್ದಾರೆ. ಅಭಿವೃದ್ಧಿ ಕುರಿತು ಬಹಿರಂಗ ಚರ್ಚೆಗೆ ಬರಲಿ ಎಂದು ಸವಾಲು ಹಾಕಿದರು.

 ಶಹಾಬಾದ್‌ (ಆ.8) : ಭಾವನಾತ್ಮಕ ವಿಷಯ ಹೇಳಿ ಜನರಿಗೆ ಮೋಸ ಮಾಡುವ ಬಿಜೆಪಿಗರು ಎಷ್ಟುಜನ ಯುವಕರಿಗೆ ಉದ್ಯೋಗ ನೀಡಿದ್ದಾರೆ. ಕಲಬುರಗಿ ಜಿಲ್ಲೆಗೆ, ಚಿತ್ತಾಪುರ ಮತಕ್ಷೇತ್ರಕ್ಕೆ ಎಷ್ಟುಅನುದಾನ ತಂದಿದ್ದಾರೆ ಎಂದು ಪ್ರಶ್ನಿಸಿದ ಶಾಸಕ ಪ್ರಿಯಂಕ ಖರ್ಗೆ ಅವರು, ಈ ಕುರಿತು ಬಹಿರಂಗ ಚರ್ಚೆಗೆ ನಾನು ಸಿದ್ಧ ಎಂದು ಬಿಜೆಪಿಗೆ ಸವಾಲು ಹಾಕಿದರು. ನಾಲವಾರ ವಲಯದ ಕೊಲ್ಲೂರ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ಕೋಣೆ ಉದ್ಘಾಟನೆಯಲ್ಲಿ ಮಾತನಾಡಿದ ಅವರು, ನನ್ನ ಎದುರು ಮಾತನಾಡಲು ಅಳುಕು ಇದ್ದರೆ, ನನ್ನ ಅನುಪಸ್ಥಿತಿಯಲ್ಲಿ ಬಹಿರಂಗ ಚರ್ಚೆ ನಡೆಸಲಿ. ಮೂರು ವರ್ಷದಲ್ಲಿ ಕಲಬುರಗಿ, ಚಿತ್ತಾಪುರದ ಎಷ್ಟುಯುವಕರಿಗೆ ಉದ್ಯೋಗ ನೀಡಿದ್ದಿರಿ, ಕಲ್ಯಾಣ ಕರ್ನಾಟಕ, ಸರ್ಕಾರದ ವಿವಿಧ ಇಲಾಖೆಗಳ ಅನುದಾನವೆಷ್ಟುಎಂಬುವುದನ್ನು ಬಹಿರಂಗಪಡಿಸಿ ಎಂದರು.

 

ಈವರೆಗಿನ ಎಲ್ಲ ಕೋಮುಗಲಭೆ, ಹತ್ಯೆ ನ್ಯಾಯಾಂಗ ತನಿಖೆ ನಡೆಸಿ: ಪ್ರಿಯಾಂಕ್‌ ಖರ್ಗೆ

ಲೋಕಸಭೆ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಿದ ಖುಷಿಯಲ್ಲಿರುವ ಕಲಬುರಗಿ ಜನರಿಗೆ ಬಿಜೆಪಿಗರು ಮಾಡಿದ ಒಳ್ಳೆಯ ಕೆಲಸವೇನು? ಖರ್ಗೆ ಅವರು ತಂದಿದ್ದ ಬೃಹತ್‌ ಯೋಜನೆಯೂ ವಾಪಸ್ಸು ಹೋಗಿವೆ, ಖರ್ಗೆ ಅವರನ್ನು ಕೈಬಿಟ್ಟು ಜನರು ಮರಗುತ್ತಿದ್ದಾರೆ. ಜನರಿಗೆ ಬೇಕಾಗಿರುವದು ಅಭಿವೃದ್ಧಿ, ಹಸಿದ ಹೊಟ್ಟೆಗೆ ಅನ್ನ, ಯುವಕರಿಗೆ ಉದ್ಯೊಗ, ಇದರ ಬಗ್ಗೆ ಮಾತನಾಡಿ ಎಂದರೆ ನೆರೆಯ ಪಾಕಿಸ್ತಾನ ಹಾಗೂ ರಾಮ ಮಂದಿರ ತೋರಿಸಿ ಭಾವನೆ ಕೆರಳಿಸುತ್ತಾರೆ ಎಂದು ಹೇಳಿದರು.

80 ದಾಟಿರುವ ಖರ್ಗೆಗೆ ಯಾರು ದುಃಖಿಸುವವರೇ ಇಲ್ಲ: ವ್ಯಂಗ್ಯವಾಡಿದ ಬಿಜೆಪಿ

ಕಾರ್ಯಕ್ರಮದಲ್ಲಿ ಚಿತ್ತಾಪುರ ಬಿಸಿಸಿ ಅಧ್ಯಕ್ಷ ಭೀಮಣ್ಣ ಸಾಲಿ, ಕೊಲ್ಲೂರ ಗ್ರಾಪಂ ಅಧ್ಯಕ್ಷ ಸಾಬಮ್ಮಾ ಹಳ್ಳಿ, ವೀರಣ್ಣಗೌಡ ಪರಸರೆಡ್ಡಿ, ಶ್ರೀನಿವಾಸ ಸಗರ, ಅಜೀಜ ಸೇಠ, ಪಾಶಾ ಪಟೇಲ, ರಮೇಶ ಮರಗೋಳ, ಶರಣು ಸಾಹು, ಕೃಷ್ಣಾರೆಡ್ಡಿ ಹಿರೆಡ್ಡಿ, ಸಾಬಣ್ಣ ಬನ್ನಟ್ಟಿ, ತಾಪಂ ಮಾಜಿ ಸದಸ್ಯ ಭಾಗಪ್ಪ, ಸಿದ್ದಣ್ಣ ಕೊಲಕುಂದಿ, ಕುಮಾರಗೌಡ ಪೊಲೀಸ್‌ ಪಾಟೀಲ, ಶರಣು ವಾರದ, ನಜೀರ ಖುರೇಷಿ, ಎಂ.ಡಿ.ಕರೀಮ, ಬಸವಂತರಾಯ ಪೊಲೀಸ್‌ ಪಾಟೀಲ, ಶ್ರೀಶೈಲ ನಾಟೀಕಾರ, ರಮೇಶ ಹಡಪದ. ಹಣಮಂತ ಕಡಬೂರ ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!