ತಾಕತ್ತಿದ್ದರೆ ಪ್ರದೀಪ ಈಶ್ವರ ದಾವಣಗೆರೆ ಜಿಲ್ಲೆಗೆ ಬರಲಿ: ಬಿಜೆಪಿ ನಾಯಕ ನೇರ ಸವಾಲು!

Published : Mar 26, 2026, 08:35 AM IST
Come to Davanagere if You Have the Guts BJP Leader Challenges Pradeep Eshwar

ಸಾರಾಂಶ

ಬಿಜೆಪಿಯವರನ್ನು ಅಯೋಗ್ಯರು ಎಂದಿದ್ದಲ್ಲದೆ, ಮುಸ್ಲಿಂ ಮಹಿಳೆಯರಿಗೆ ಅವಮಾನಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಶಾಸಕ ಪ್ರದೀಪ ಈಶ್ವರ್ ವಿರುದ್ಧ ಬಿಜೆಪಿ ಮುಖಂಡ ಬಿ.ಜಿ.ಅಜಯಕುಮಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾಕತ್ತಿದ್ದರೆ ದಾವಣಗೆರೆಗೆ ಬರಲಿ ಎಂದು ಸವಾಲು.

ದಾವಣಗೆರೆ (ಮಾ.26): ಬಿಜೆಪಿಯವರರನ್ನು ಅಯೋಗ್ಯರು, ಮುಠ್ಠಾಳರು ಎಂದಿರುವ ಹಾಗೂ ಮುಸ್ಲಿಂ ಮಹಿಳೆಯರಿಗೆ ಅವಮಾನಿಸಿರುವ ಕಾಂಗ್ರೆಸ್ ಶಾಸಕ ಪ್ರದೀಪ ಈಶ್ವರ್‌ಗೆ ತಾಕತ್ತಿದ್ದರೆ ದಾವಣಗೆರೆಗೆ ಬರಲಿ ಎಂದು ಬಿಜೆಪಿ ಮುಖಂಡ, ಮಾಜಿ ಮೇಯರ್ ಬಿ.ಜಿ.ಅಜಯಕುಮಾರ ಸವಾಲು ಹಾಕಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ನಾಮಪತ್ರ ಸಲ್ಲಿಸಲು ದಾವಣಗೆರೆಗೆ ಬಂದಿದ್ದ ಶಾಸಕ ಪ್ರದೀಪ ಈಶ್ವರ ಸುದ್ದಿಗಾರರ ಜೊತೆ ಮಾತನಾಡುತ್ತಾ ಬಿಜೆಪಿಯವರನ್ನು ಅಯೋಗ್ಯರು, ಮುಠ್ಠಾಳರು ಅಂದಿದ್ದಲ್ಲದೇ, ಮುಸ್ಲಿಂ ಮಹಿಳೆಯರಿಗೆ ಬಿಜೆಪಿಯವರು ಗೌರವ ನೀಡುವುದಿಲ್ಲ ಎಂಬ ಹೇಳಿಕೆ ನೀಡಿದ್ದು ಖಂಡನೀಯ ಎಂದರು.

ಶಿಕ್ಷಣ ಸಂಸ್ಥೆಗಳ ಮೂಲಕ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿರುವ ಪ್ರದೀಪ ಈಶ್ವರ ಬಗ್ಗೆ ಸಾಕಷ್ಟು ಗೌರವ ಇತ್ತು. ತುಂಬಾ ಬುದ್ಧಿವಂತ ವ್ಯಕ್ತಿಯೆಂದು ತಿಳಿದಿದ್ದೆವು. ಆದರೆ, ಸಂವಿಧಾನಾತ್ಮಕ ಜವಾಬ್ಧಾರಿ, ಸ್ಥಾನದಲ್ಲಿರುವಂತಹ ಪ್ರದೀಪ ಈಶ್ವರ್‌ಗೆ ಬಿಜೆಪಿಯವರ ಬಗ್ಗೆ ಹೀಗೆ ಹಗುರವಾಗಿ ಮಾತನಾಡಲು ಯಾವ ನೈತಿಕತೆ ಇದೆ? ಬಿಜೆಪಿಯವರು ಮಹಿಳೆಯರನ್ನು ಕೀಳಾಗಿ ನೋಡುತ್ತಾರೆನ್ನುವ ಮೂಲಕ ದಾವಣಗೆರೆಯ ಸಮಸ್ತ ಮುಸ್ಲಿಂ ಮಹಿಳೆಯರಿಗೂ ಪ್ರದೀಪ ಈಶ್ವರ ಅಮಾನಿಸಿದ್ದಾರೆ ಎಂದು ದೂರಿದರು.

ನಾವು ಬಿಜೆಪಿಯವರು ಎಂದಿಗೂ ಮಹಿಳೆಯರನ್ನು ಕೀಳಾಗಿ ಕಾಣುವುದಿಲ್ಲ. ಮಹಿಳೆಯನ್ನೇ ದೇಶದ ರಾಷ್ಟ್ರಪತಿ ಮಾಡಿದ್ದು ಬಿಜೆಪಿ ಎಂಬುದನ್ನು ಪ್ರದೀಪ ಈಶ್ವರ ಅರಿಯರಿ. ಮುಂದಿನ ಚುನಾವಣೆಯಲ್ಲಿ ನಿನ್ನದೇ ಕ್ಷೇತ್ರದ ಮತದಾರರು ನಿನಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಎಚ್ಚರಿಸಿದರು.

ಮುಸ್ಲಿಮರ ಬಗ್ಗೆ ದೊಡ್ಡದಾಗಿ ಮಾತನಾಡುವ ಕಾಂಗ್ರೆಸ್ಸಿನವರು ದಾವಣಗೆರೆ ದಕ್ಷಿಣದಲ್ಲಿ ಸುಮಾರು 82 ಸಾವಿರದಷ್ಟಿರುವ ಮುಸ್ಲಿಂ ಸಮುದಾಯಕ್ಕೆ ಯಾಕೆ ಟಿಕೆಟ್ ನೀಡಲಿಲ್ಲ? 6 ಸಲ ಶಾಸಕರನ್ನಾಗಿಸಿದ ಅದೇ ಮುಸ್ಲಿಮರನ್ನು ನಿಮ್ಮ ಪಕ್ಷ ಕಡೆಗಣಿಸಿದ್ದು ಕಾಣಲಿಲ್ಲವೇ ಪ್ರದೀಪ ಈಶ್ವರ? ಶಿಗ್ಗಾಂವ್‌ನಲ್ಲಿ 4 ಸಲ ಟಿಕೆಟ್ ನೀಡಿದಂತೆ ದಾವಣಗೆರೆ ದಕ್ಷಿಣದಲ್ಲೇಕೆ ಮುಸ್ಲಿಮರಿಗೆ ಟಿಕೆಟ್ ಕೊಡಲಿಲ್ಲ? ನಿಮ್ಮ ಪಕ್ಷ ಟಿಕೆಟ್ ಕೊಡದಿದ್ದಕ್ಕೆ ಇಂದು ಮುಸ್ಲಿಂ ಸಮುದಾಯದ 24 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ ಎಂದು ಹೇಳಿದರು.

ಮಾಜಿ ಮೇಯರ್ ಎಸ್.ಟಿ.ವೀರೇಶ, ಬಿಜೆಪಿ ಕಾನೂನು ಪ್ರಕೋಷ್ಟದ ಪದಾಧಿಕಾರಿ, ವಕೀಲರೂ ಆದ ಎ.ಸಿ.ರಾಘವೇಂದ್ರ ಮೊಹರೆ, ಎಚ್.ದಿವಾಕರ, ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾತಿ ವೀರೇಶ ದೊಗ್ಗಳ್ಳಿ. ತಾರೇಶ ನಾಯ್ಕ, ಅಣ್ಣೇಶ ನಾಯ್ಕ, ಸಂತೋಷ ಪೈಲ್ವಾನ, ಎಚ್.ಪಿ.ವಿಶ್ವಾಸ, ಮಂಜು ಬೆಳ್ಳೂಡಿ ಇತರರು ಇದ್ದರು.

ದಾವಣಗೆರೆಯಲ್ಲಿ ಸಣ್ಣ ಪುಟ್ಟ ಗಲಾಟೆ ಇತರೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿ ಶೀಟರ್ ಪಟ್ಟಿಯಲ್ಲಿ ಇರುವಂತಹ ಕೆಲವರಿಗೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಮೊಬೈಲ್ ಗೆ ಕರೆ ಮಾಡಿ, ಕಾಂಗ್ರೆಸ್ಸಿಗೆ ಬೆಂಬಲಿಸುವಂತೆ ಒತ್ತಾಯ ಮಾಡುತ್ತಿದ್ದಾರೆ. ಶಾಸಕ ಪ್ರದೀಪ ಈಶ್ವರ ಹೇಳಿಕೆ, ಕೆಲವು ಪೊಲೀಸ್ ಅಧಿಕಾರಿ, ಸಿಬ್ಬಂದಿ ಬೆದರಿಕೆ ಹಾಕಿರುವ ಬಗ್ಗೆ ಜಿಲ್ಲಾ ಚುನಾವಣಾಧಿಕಾರಿ, ರಾಜ್ಯ ಚುನಾವಣಾಧಿಕಾರಿ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಲಿದೆ.

ಬಿ.ಜಿ.ಅಜಯಕುಮಾರ ಮಾಜಿ ಮೇಯರ್, ದಾವಣಗೆರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Karnataka Latest News: ತಾಕತ್ತಿದ್ದರೆ ಪ್ರದೀಪ ಈಶ್ವರ ದಾವಣಗೆರೆ ಜಿಲ್ಲೆಗೆ ಬರಲಿ - ಬಿಜೆಪಿ ನಾಯಕ ನೇರ ಸವಾಲು!
ರಾಹುಕಾಲ ನಂಬಲ್ಲ, ಯುಗಾದಿ, ಶಿವರಾತ್ರಿ ದಿನವೂ ಮಾಂಸ ತಿಂದಿದ್ದೇನೆ: ಸಿಎಂ ಸಿದ್ದರಾಮಯ್ಯ