ಸ್ಯಾಮ್ ಪಿತ್ರೋಡಾ ಹೇಳಿಕೆಯಿಂದ ಕಾಂಗ್ರೆಸ್‌ ಅಜೆಂಡಾ ಬಟಾಬಯಲು: ಅಮಿತ್‌ ಶಾ

Published : Apr 25, 2024, 06:56 AM IST
ಸ್ಯಾಮ್ ಪಿತ್ರೋಡಾ ಹೇಳಿಕೆಯಿಂದ ಕಾಂಗ್ರೆಸ್‌ ಅಜೆಂಡಾ ಬಟಾಬಯಲು: ಅಮಿತ್‌ ಶಾ

ಸಾರಾಂಶ

ಮನಮೋಹನ್‌ ಸಿಂಗ್‌ ಬಹಳ ಹಿಂದೆಯೇ ಮುಸ್ಲಿಮರಿಗೆ ಆಸ್ತಿಯ ಹಕ್ಕಿರುವುದಾಗಿ ಹೇಳಿದ್ದರು. ಈಗ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಸಂಪತ್ತಿನ ಮರುಹಂಚಿಕೆ ಕುರಿತು ಪ್ರಸ್ತಾಪಿಸಿದೆ. ಸ್ಯಾಮ್‌ ಪಿತ್ರೋಡಾ ಕೂಡ ಇದಕ್ಕೆ ಪುಷ್ಟಿ ನೀಡುವಂತೆ ಹೇಳಿಕೆ ನೀಡಿರುವುದು ಕಾಂಗ್ರೆಸ್‌ ಅಜೆಂಡಾವನ್ನು ಬಯಲು ಮಾಡಿದೆ: ಕೇಂದ್ರ ಗೃಹ ಸಚಿವ ಅಮಿತ್‌ ಶಾ 

ಕೊಚ್ಚಿ(ಏ.25):  ಸಂಪತ್ತಿನ ಮರುಹಂಚಿಕೆ ಕುರಿತಾಗಿ ಕಾಂಗ್ರೆಸ್‌ ಮುಖಂಡ ಸ್ಯಾಮ್ ಪಿತ್ರೋಡಾ ನೀಡಿರುವ ಹೇಳಿಕೆಯು ಕಾಂಗ್ರೆಸ್‌ ಪಕ್ಷದ ಅಜೆಂಡಾವನ್ನು ಸಂಪೂರ್ಣವಾಗಿ ಬಯಲು ಮಾಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕಿಡಿ ಕಾರಿದ್ದಾರೆ.

ಚುನಾವಣಾ ರ್‍ಯಾಲಿಯಲ್ಲಿ ಮಾತನಾಡಿದ ಅವರು, ‘ಮನಮೋಹನ್‌ ಸಿಂಗ್‌ ಬಹಳ ಹಿಂದೆಯೇ ಮುಸ್ಲಿಮರಿಗೆ ಆಸ್ತಿಯ ಹಕ್ಕಿರುವುದಾಗಿ ಹೇಳಿದ್ದರು. ಈಗ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಸಂಪತ್ತಿನ ಮರುಹಂಚಿಕೆ ಕುರಿತು ಪ್ರಸ್ತಾಪಿಸಿದೆ. ಸ್ಯಾಮ್‌ ಪಿತ್ರೋಡಾ ಕೂಡ ಇದಕ್ಕೆ ಪುಷ್ಟಿ ನೀಡುವಂತೆ ಹೇಳಿಕೆ ನೀಡಿರುವುದು ಕಾಂಗ್ರೆಸ್‌ ಅಜೆಂಡಾವನ್ನು ಬಯಲು ಮಾಡಿದೆ. ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಿಂದ ಈ ಅಂಶವನ್ನು ಕೂಡಲೇ ತೆಗೆಯಬೇಕು. ಇಲ್ಲವೇ ಇದುವೇ ನಮ್ಮ ನಿಜವಾದ ಉದ್ದೇಶ ಎಂಬುದಾಗಿ ಒಪ್ಪಿಕೊಳ್ಳಬೇಕು’ ಎಂದು ಆಗ್ರಹಿಸಿದರು.

'ಜಿಂದಗಿ ಕೆ ಸಾಥ್‌ ಬೀ, ಜಿಂದಗಿ ಕೆ ಬಾದ್‌ ಬೀ..' ಎಲ್‌ಐಸಿ ಸ್ಲೋಗನ್‌ ಹೇಳಿಕೆ ಕಾಂಗ್ರೆಸ್‌ಗೆ ತಿವಿದ ಮೋದಿ!

ನಿರ್ಮಲಾ ಆಕ್ಷೇಪ:

ಪಿತ್ರಾರ್ಜಿತ ಆಸ್ತಿ ಕಾಯ್ದೆ ಜಾರಿಗೆ ತಂದರೆ ಅದು ಬಡ ಹಾಗೂ ಮಧ್ಯಮ ವರ್ಗದವರಿಗೆ ಭಾರಿ ಹೊಡೆತ ನೀಡಲಿದೆ. ಏಕೆಂದರೆ ಇದ್ದ ಚಿಕ್ಕ ಪ್ರಮಾಣದ ಆಸ್ತಿಯೂ ಮಕ್ಕಳಿಗೆ ವರ್ಗಾವಣೆ ಆಗುವುದಿಲ್ಲ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಕಿಡಿಕಾರಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!