ಕಾಂಗ್ರೆಸ್‌, ಜೆಡಿಎಸ್‌ನ 10-12 ಶಾಸ​ಕರು ಬಿಜೆ​ಪಿಗೆ ಶೀಘ್ರ: ಅಶೋಕ್‌

Published : Jun 19, 2022, 05:30 AM IST
ಕಾಂಗ್ರೆಸ್‌, ಜೆಡಿಎಸ್‌ನ 10-12 ಶಾಸ​ಕರು ಬಿಜೆ​ಪಿಗೆ ಶೀಘ್ರ: ಅಶೋಕ್‌

ಸಾರಾಂಶ

*  ಹಳೇ ಮೈಸೂರು ಭಾಗದ 10-12 ಶಾಸ​ಕರು ಬಿಜೆ​ಪಿಗೆ ಶೀಘ್ರ *  ಮೊದಲ ಕಂತಿನಲ್ಲಿ ಕೆಲವಷ್ಟು ಮುಖಂಡರು ಬಂದಿದ್ದಾರೆ *  ಇನ್ನೊಂದು ಕಂತಿನಲ್ಲಿ ಮತ್ತಷ್ಟು ಶಾಸಕರನ್ನು ಕರೆ ತರಲು ತಯಾರಿ ನಡೆಯುತ್ತಿದೆ

ತುಮ​ಕೂ​ರು(ಜೂ.19): ಹಳೇ ಮೈಸೂರು ಪ್ರಾಂತ್ಯದ ಕಾಂಗ್ರೆಸ್‌, ಜೆಡಿಎಸ್‌ನ 10 ರಿಂದ 12 ಶಾಸಕರು ಬಿಜೆಪಿಗೆ ಬರುತ್ತಾರೆ ಎಂದು ಕಂದಾಯ ಸಚಿವ ಆರ್‌. ಅಶೋಕ್‌ ತಿಳಿ​ಸಿ​ದ್ದಾ​ರೆ. 

ತುರು​ವೇ​ಕೆರೆ ತಾಲೂಕು ಮಾಯ​ಸಂದ್ರ​ದಲ್ಲಿ ಶನಿವಾರ ಸುದ್ದಿ​ಗಾ​ರ​ರೊಂದಿಗೆ ಮಾತ​ನಾಡಿ ಹಳೇ ಮೈಸೂರು ಪ್ರಾಂತ್ಯದಲ್ಲಿ ಬಿಜೆಪಿ ಈಗ ಶಕ್ತಿಶಾಲಿ ಆಗುತ್ತಿದ್ದು, ಈ ಭಾಗದ ಬಹಳಷ್ಟು ಜನ ಬಿಜೆಪಿಗೆ ಬರುತ್ತಿದ್ದಾರೆ ಎಂದರು.

TUMAKURU: ಆರ್. ಅಶೋಕ್ ಗ್ರಾಮ ವಾಸ್ತವ್ಯ: ಇಂದು - ನಾಳೆ ಸಾರ್ವಜನಿಕರ ಸಮಸ್ಯೆ ಆಲಿಸಲಿರುವ ಸಚಿವರು

ಮೊದಲ ಕಂತಿನಲ್ಲಿ ಕೆಲವಷ್ಟು ಮುಖಂಡರು ಬಂದಿದ್ದಾರೆ. ಈ ಭಾಗದಲ್ಲಿ ಹೆಚ್ಚಿನ ಶಾಸಕರು ಗೆಲ್ಲುವ ನಿಟ್ಟಿನಲ್ಲಿ ಕಾರ್ಯತಂತ್ರ ಮಾಡುತ್ತಿದ್ದೇವೆ ಎಂದ ಅವರು, ಇನ್ನೊಂದು ಕಂತಿನಲ್ಲಿ ಮತ್ತಷ್ಟು ಶಾಸಕರನ್ನು ಕರೆ ತರಲು ತಯಾರಿ ನಡೆಯುತ್ತಿದೆ ಎಂದ​ರು. ರಾಜ್ಯಸಭಾ ಚುನಾವಣೆಯಲ್ಲಿ ಯಾರಾರ‍ಯರು ಯಾರಿಗೆ ಮತ ಹಾಕಿದ್ದಾರೆ ಅನ್ನೋದು ಗೊತ್ತು. ಇದು ಕೇವಲ ಟ್ರೈಲರ್‌ ಅಷ್ಟೇ, ಪಿಕ್ಚರ್‌ ಅಭಿ ಬಾಕಿ ಹೈ ಎಂದರು. ರಾಜ್ಯದಲ್ಲಿ ಮೋದಿ, ಬೊಮ್ಮಾಯಿ, ಯಡಿಯೂರಪ್ಪನವರ ಆಶೀರ್ವಾದದಿಂದ ಮುಂದಿನ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಬಾವುಟ ಹಾರಿಸುತ್ತದೆ ಎಂದು ಇದೇ ವೇಳೆ ತಿಳಿಸಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಾಲುಮರದ ತಿಮ್ಮಕ್ಕ ಹೆಸರಲ್ಲಿ ಪ್ರತಿ ವರ್ಷ ಪ್ರಶಸ್ತಿ ಪ್ರದಾನ: ಸಿಎಂ ಸಿದ್ದರಾಮಯ್ಯ
Karnataka News Live: ಒಂದು ಕಣ್ಣಿಗೆ ಬೆಣ್ಣೆ, ಮತ್ತೊಂದು ಕಣ್ಣಿಗೆ ಸುಣ್ಣ: ಯತೀಂದ್ರಗೆ ಆಲ್ ದಿ ಬೆಸ್ಟ್ ಹೇಳಿದ ಕಾಂಗ್ರೆಸ್ ಶಾಸಕ