ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್‌, ವಿಪಕ್ಷಗಳಿಂದ ಬಿಜೆಪಿಗೆ ನಾಯಕರ ಗುಳೆ..!

Published : Mar 29, 2024, 10:06 AM IST
ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್‌, ವಿಪಕ್ಷಗಳಿಂದ ಬಿಜೆಪಿಗೆ ನಾಯಕರ ಗುಳೆ..!

ಸಾರಾಂಶ

ಕಟಕ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಡಿಯಿಂದ ಆರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಸಂಸದ ಭ್ರಾತೃಹರಿ ಮಹಲ್ ಗುರುವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇದು ಬಿಜು ಜನತಾ ದಳ ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದೆ.

ಚಂಡೀಗಢ/ನವದೆಹಲಿ(ಮಾ.29):  ಲೋಕಸಭೆ ಚುನಾವಣೆಗೂ ಮುನ್ನ ದೇಶದ ಶ್ರೀಮಂತ ಮಹಿಳೆ, ಹರಿಯಾಣದ ಹಿಸಾರ್ ಕ್ಷೇತ್ರದ ಜಿಂದಾಲ್ ಅವರ ಪತ್ನಿ ಸಾವಿತ್ರಿ ಜಿಂದಾಲ್ ಗುರುವಾರ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.  ಇತ್ತೀಚೆಗಷ್ಟೇ ತಮ್ಮ ಮಗ ನವೀನ್ ಜಿಂದಾಲ್ ಜಿಜೆಪಿಗೆ ಸೇರ್ಪಡೆಗೊಂಡಿದ್ದರು. ಅದರ ಬೆನ್ನಲ್ಲೇ ಹರ್ಯಾಣ ಮುಖ್ಯ ಮಂತ್ರಿ ನಯಬ್ ಸಿಂಗ್ ಸೈನಿ, ಮಾಜಿ ಸಿಎಂ ಮನೋಹರ್‌ಲಾಲ್ ಖಟ್ಟ‌ರ್ ಮತ್ತು ಇತರ ಬಿಜೆಪಿ ನಾಯಕರ ಸಮ್ಮು ಖದಲ್ಲಿ ಅವರು ಬಿಜೆಪಿ ಸೇರಿದರು.

ಸಾವಿತ್ರಿ ಬುಧವಾರ ರಾತ್ರಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಪೋಸ್ಟ್ ಮಾಡಿದ್ದರು. ಸಾವಿತ್ರಿ ಜಿಂದಾಲ್ ಅವರು ಇಂಡಿಯಾದ ಅತ್ಯಂತ ಶ್ರೀಮಂತ ಮಹಿಳೆಯೆಂದು ಪೋರ್ಟ್ ಇಂಡಿಯಾ ಸಂಸ್ಥೆ ಪ್ರಕಟಿಸಿತ್ತು.

ಬಿಜೆಪಿ-ಜೆಡಿಎಸ್‌ ಮೈತ್ರಿಯಿಂದ ಕಾಂಗ್ರೆಸ್‌ಗೆ ನಿದ್ದೆ ಬರ್ತಿಲ್ಲ: ವಿಜಯೇಂದ್ರ

ಬಿಜೆಪಿಯ ಭ್ರಾತೃಹರಿ ಮತ್ತಚ್ ಬಿಜೆಪಿ ಸೇರ್ಪಡೆ: 

ಕಟಕ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಡಿಯಿಂದ ಆರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಸಂಸದ ಭ್ರಾತೃಹರಿ ಮಹಲ್ ಗುರುವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇದು ಬಿಜು ಜನತಾ ದಳ ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದೆ.
ಇಲ್ಲಿನ ಮುಖ್ಯ ಕಚೇರಿಯಲ್ಲಿ ಬಿಜೆಪಿ ಹಿರಿಯ ನಾಯಕರ ಸಮ್ಮುಖದಲ್ಲಿ ಮಹಲ್ ಬಿಜೆಪಿಗೆ ಸೇರಿಕೊಂಡಿದ್ದಾರೆ. 2019 ರ ಲೋಕಸಭೆ ಚುನಾವಣೆಯಲ್ಲಿ ಕಟಕ್‌ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಹಚ್ ಬಿಜೆಪಿಯ ಪ್ರಕಾಶ್ ಮಿಶ್ರಾ ಅವರನ್ನು ಭಾರಿ ಮತಗಳ 'ಅಂತರದಿಂದ ಅಂತ ಸೋಲಿಸುವ ಮೂಲಕ ಜಯಗಳಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!