ಬಿಜೆಪಿ ನಾಯಕನನ್ನು ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಿದ ಕಾಂಗ್ರೆಸ್​!

Published : Dec 22, 2020, 06:01 PM IST
ಬಿಜೆಪಿ ನಾಯಕನನ್ನು ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಿದ ಕಾಂಗ್ರೆಸ್​!

ಸಾರಾಂಶ

ಪಕ್ಷದಲ್ಲಿ ಸಕ್ರಿಯವಾಗಿದ್ದು, ಹಲವಾರು ವರ್ಷಗಳಿಂದ ಸೇವೆ ಸಲ್ಲಿಸಿದವರನ್ನು ಪಕ್ಷದ ಉನ್ನತ ಜವಾಬ್ದಾರಿಗಳಿಗೆ ಆಯ್ಕೆ ಮಾಡುವುದು ಸಹಜ. ಆದರೆ ಕಾಂಗ್ರೆಸ್‌ ಬಿಜೆಪಿ ಸೇರಿದ ಮಾಜಿ ನಾಯಕನನ್ನು ಯುವ ಘಟಕ ಪದಾಧಿಕಾರಿಯಾಗಿ ಆಯ್ಕೆ ಮಾಡಿ ಪೇಚಿಗೀಡಾದೆ.

ಭೋಪಾಲ್, (ಡಿ.22)​: ಕಾಂಗ್ರೆಸ್​ ತನ್ನ ಪಕ್ಷದ ಯುವ ಘಟಕಕ್ಕೆ ತನ್ನ ಪಕ್ಷದ ಕಾರ್ಯಕರ್ತರನ್ನು ಆಯ್ಕೆ ಮಾಡುವ ಬದಲು ಬಿಜೆಪಿಯ ನಾಯಕನನ್ನು ಆಯ್ಕೆ ಮಾಡಿ ನಗೆಪಾಟಲಿಗಿಡಾಗಿದೆ. 

ಹೌದು... ಜ್ಯೋತಿರಾದಿತ್ಯ ಸಿಂಧ್ಯಾ ಅವರ ಜತೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಹಾಗೂ ಈಗ ಬಿಜೆಪಿ ನಾಯಕನಾಗಿರುವ ಹರ್ಷಿತ್ ಸಿಂಘೈ ಎಂಬವರನ್ನು ಮಧ್ಯ ಪ್ರದೇಶದ ತನ್ನ ಯುವ ಘಟಕದ ಪ್ರಧಾನ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಿ ಕಾಂಗ್ರೆಸ್ ಪೇಚಿಗೀಡಾಗಿದೆ. 

'ಕೈ'ಗೆ ಗುಡ್​​ಬೈ: ಜೆಡಿಎಸ್ ಜೊತೆ ಮೈತ್ರಿ ಬಗ್ಗೆ ಬಿಜೆಪಿ ಶಾಸಕ ಸುಳಿವು

ಮಧ್ಯಪ್ರದೇಶದ ರಾಜಕೀಯ ನಾಯಕ ಜ್ಯೋತಿರಾದಿತ್ಯಾ ಸಿಂಧ್ಯಾ ಕಾಂಗ್ರೆಸ್​ ತ್ಯಜಿಸಿ, ಬಿಜೆಪಿ ಸೇರ್ಪಡೆಗೊಂಡು ಹಲವು ತಿಂಗಳುಗಳೇ ಕಳೆದಿದೆ. ಜ್ಯೋತಿರಾದಿತ್ಯಾ ಅವರ ಬೆನ್ನಲ್ಲೇ ಹಲವು ನಾಯಕರು ಕಾಂಗ್ರೆಸ್​ ತ್ಯಜಿಸಿ ಬಿಜೆಪಿ ಸೇರ್ಪಡೆಗೊಂಡಿದ್ದರು. ಅದರಲ್ಲಿ ಎನ್​ಎಸ್​ಯುಐ ನಾಯಕ ಹರ್ಷಿತ್​ ಸಿಂಘೈ ಕೂಡ ಒಬ್ಬರು. 

ಅವರು ಪಾರ್ಟಿ ತ್ಯಜಿಸಿ ಸರಿ ಸುಮಾರು 9 ತಿಂಗಳು ಕಳೆದಿದೆ. ಇದೀಗ ಮಧ್ಯಪ್ರದೇಶ ಯುವ ಕಾಂಗ್ರೆಸ್​ ಘಟಕವು ಹರ್ಷಿತ್​ ಅವರನ್ನು ಜಬಲ್ಪುರದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಿದೆ. ಆಯ್ಕೆ ಮಾಡಿ, ಹಲವು ಗಂಟೆಗಳ ನಂತರ ಎಚ್ಚೆತ್ತುಕೊಂಡ ಪಕ್ಷ ನೇಮಕಾತಿಯನ್ನು ರದ್ದು ಮಾಡಿದೆ.

ಹರ್ಷಿತ್​ ಅವರು ಪ್ರಧಾನ ಕಾರ್ಯದರ್ಶಿ ಚುನಾವಣೆಗೆ 2018ರಲ್ಲಿಯೇ ನಾಮಪತ್ರ ಸಲ್ಲಿಸಿದ್ದರಂತೆ. ಆದರೆ ಅದಾದ ಮೇಲೆ ಚುನಾವಣೆಯನ್ನು ಸ್ಥಗಿತಗೊಳಿಸಲಾಗಿತ್ತು. ಈ ವರ್ಷದ ಆರಂಭದಲ್ಲಿ ಅವರು ಕಾಂಗ್ರೆಸ್​ ತ್ಯಜಿಸಿ ಬಿಜೆಪಿ ಸೇರಿದ್ದು, ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಅದರ ಜತೆ ನಾಮಪತ್ರವೂ ರದ್ದಾಗಿತ್ತು. ನವೆಂಬರ್​ನಲ್ಲಿ ನಾಮಪತ್ರ ಹಿಂಪಡೆದಿರುವುದಾಗಿಯೂ ಕಾಂಗ್ರೆಸ್​ನ ಕಚೇರಿಗೆ ಇ ಮೇಲ್​ ಮಾಡಿದ್ದರಂತೆ. ಆದರೂ ಅದನ್ನು ಗಮನಿಸದ ಪಕ್ಷ, ಅವರನ್ನೇ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಿದೆ. ಚುನಾವಣಾ ಫಲಿತಾಂಶ ಹೊರಬಿದ್ದಂತೆ ಸಾಕಷ್ಟು ಜನರು ಹರ್ಷಿತ್​ ಅವರಿಗೆ ಅಭಿನಂದನೆಗಳನ್ನೂ ಸಲ್ಲಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?