ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಾ ಗೆಲ್ಲಿಸಿ ನನ್ನ ಕೈ ಬಲಪಡಿಸಿ: ಸಿಎಂ ಸಿದ್ದರಾಮಯ್ಯ

Published : Nov 09, 2024, 06:30 AM IST
ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಾ ಗೆಲ್ಲಿಸಿ ನನ್ನ ಕೈ ಬಲಪಡಿಸಿ: ಸಿಎಂ ಸಿದ್ದರಾಮಯ್ಯ

ಸಾರಾಂಶ

ಅಕ್ರಮ ಗಣಿಗಾರಿಕೆ ಮಾಡಿದವರಿಗೆ ಎಂದಿಗೂ ಅವಕಾಶ ನೀಡಬೇಡಿ. ಇಂಥವರಿಗೆ ಅಧಿಕಾರ ಕೊಟ್ಟರೆ ಲೂಟಿ ಹೊಡೆಯುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. 

ಕುರುಗೋಡು (ಬಳ್ಳಾರಿ) (ನ.09): ಅಕ್ರಮ ಗಣಿಗಾರಿಕೆ ಮಾಡಿದವರಿಗೆ ಎಂದಿಗೂ ಅವಕಾಶ ನೀಡಬೇಡಿ. ಇಂಥವರಿಗೆ ಅಧಿಕಾರ ಕೊಟ್ಟರೆ ಲೂಟಿ ಹೊಡೆಯುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ತಾಲೂಕಿನ ಸಮೀಪದ ಏಳುಬೆಂಚಿ ಗ್ರಾಮದಲ್ಲಿ ಶುಕ್ರವಾರ ಸಂಡೂರು ವಿಧಾನಸಭಾ ಉಪ ಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ಪರ ಬಿರುಸಿನ ಪ್ರಚಾರ ನಡೆಸಿ ಮಾತನಾಡಿದರು. ಅಭಿವೃದ್ಧಿ ಬಗ್ಗೆ ಹೆಚ್ಚು ಒಲವು ಹೊಂದಿರುವ ಕಾಂಗ್ರೆಸ್ ಅಭ್ಯರ್ಥಿ ಸಂಸದ ಈ. ತುಕಾರಾಂ ಪತ್ನಿ ಅನ್ನಪೂರ್ಣಾ ಅವರಿಗೆ ಮತ ಚಲಾಯಿಸಿ, ನನ್ನ ಕೈಬಲ ಪಡಿಸಿ ಎಂದು ಮನವಿ ಮಾಡಿದರು.

ಬಳ್ಳಾರಿ ಜಿಲ್ಲೆಯನ್ನು ಜನಾರ್ದನ ರೆಡ್ಡಿ ಸಿಂಗಾಪುರ, ಬೀಜಿಂಗ್ ಮಾಡುವೆ ಅಂತ ಹೇಳುತ್ತಾರೆ. ರೆಡ್ಡಿ ಬೆಂಬಲಿಸುತ್ತಿರುವ ಬಿಜೆಪಿ ಅಭ್ಯರ್ಥಿಯನ್ನು ಯಾವುದೇ ಕಾರಣಕ್ಕೂ ಗೆಲ್ಲಿಸಬಾರದು. ಸಂಡೂರಿನಲ್ಲಿ ರಸ್ತೆ, ನೀರು, ಶಾಲೆ, ಅಂಗನವಾಡಿ, ಆಸ್ಪತ್ರೆ, ಮೊಬೈಲ್ ಕ್ಲಿನಿಕ್ ಸೇರಿ ಏನೇನು ಅಭಿವೃದ್ಧಿ ಆಗಿದೆಯೋ ಅದೆಲ್ಲ ಸಂತೋಷ್ ಲಾಡ್ ಮತ್ತು ತುಕಾರಾಮ್ ಅವರ ಅವಧಿಯಲ್ಲಿ ಮಾತ್ರ ಎಂದು ಸಿದ್ದರಾಮಯ್ಯ ಹೇಳಿದರು.

ರೈತರ ಹಿತದೃಷ್ಟಿಯಿಂದ ಬೇಸಿಗೆ ಬೆಳೆಗೂ ನೀರು ಹರಿಸುತ್ತೇವೆ. ಬಿಜೆಪಿ ಮಂಡಿಸಿದ ಆಯವ್ಯಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಕೇವಲ ₹೨೧ ಸಾವಿರ ಕೋಟಿ ಮೀಸಲಿಟ್ಟಿದ್ದರು. ಕಾಂಗ್ರೆಸ್ ಸರ್ಕಾರ ₹೩೯೧೨೧ ಕೋಟಿ ಮೀಸಲಿಟ್ಟಿದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ನಿಗಮಕ್ಕೆ ₹೫ ಸಾವಿರ ಕೋಟಿ ನೀಡಿದ್ದೇವೆ. ಜನಸಾಮಾನ್ಯರ ಅಭಿವೃದ್ಧಿಗಾಗಿ ಏನು ಬೇಕು? ಎಲ್ಲ ಯೋಜನೆಗಳನ್ನು ಜಾರಿಗೆ ತರುತ್ತೇವೆ ಎಂದರು.

ಇನ್ನೂ ಮೂರೂವರೆ ವರ್ಷ ನಾನೇ ಸಿಎಂ: ಸಿಬಿಐ, ಇ.ಡಿ, ಐಟಿ ಬಳಸಿ ನನ್ನ ವಿರುದ್ಧ ಷಡ್ಯಂತ್ರ ಎಂದ ಸಿದ್ದರಾಮಯ್ಯ

ಕೇಂದ್ರದಲ್ಲಿ ಮನಮೋಹನ್ ಸಿಂಗ್ ಅವಧಿಯಲ್ಲಿ ಜಾರಿಗೆ ತಂದಿರುವ ೩೭೧ಜೆ ಪರಿಣಾಮ ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ಬರುವ ೭ ಜಿಲ್ಲೆಯ ಯುವಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ದೊರೆಯುತ್ತಿದೆ. ಹೈದರಾಬಾದ್ ಕರ್ನಾಟಕ, ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 371 ಜೆ ಜಾರಿ ಮಾಡಿದ್ದು ಕಾಂಗ್ರೆಸ್. ನಮ್ಮ ಪ್ರಧಾನಿ ಮನಮೋಹನ್ ಸಿಂಗ್, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಧರಂಸಿಂಗ್ ಮತ್ತು ನಾನು ಸೇರಿ 371 ಜೆ ಜಾರಿ ಮಾಡಿದ್ದೇವೆ. ಬಳಿಕ ನಾನು ಮುಖ್ಯಮಂತ್ರಿಯಾಗಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ₹5000 ಕೋಟಿ ಅನುದಾನ ನೀಡಿದ್ದೇನೆ. 371 ಜೆ ಬಂದಿದ್ದರಿಂದ ಇಲ್ಲಿನ ಮಕ್ಕಳು ಎಂಜಿನಿಯರ್, ಡಾಕ್ಟರ್ ಆದರು. ಸರ್ಕಾರಿ ಕೆಲಸಕ್ಕೆ ಸಾವಿರಾರು ಸಂಖ್ಯೆಯಲ್ಲಿ ಸೇರಲು ಅವಕಾಶವಾಯಿತು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Mallikarjun Kharge: ಬಿಜೆಪಿ, ಆರೆಸ್ಸೆಸ್‌ ಅನ್ನು ವಿಷ ಸರ್ಪಕ್ಕೆ ಹೋಲಿಸಿದ ಕೇಸ್‌: ಖರ್ಗೆ ಬಂಧನಕ್ಕೆ ರಾಜ್ಯ ಬಿಜೆಪಿ ದೂರು
Karnataka News Live: Kali Tiger Reserve Eco-Sensitive Zone - ಕಾಳಿ ಹುಲಿ ಸಂರಕ್ಷಿತ ಪ್ರದೇಶ ಇನ್ನು ಪರಿಸರ ಸೂಕ್ಷ್ಮ ವಲಯ - ಕೇಂದ್ರ ಸರ್ಕಾರ ಮಹತ್ವದ ಘೋಷಣೆ