ಪರೀಕ್ಷೆ ಬರೆದಿದ್ದೇನೆ, ರಿಸಲ್ಟ್ ಉತ್ತಮವಾಗಿರಲಿದೆ ಎಂದ ಕಾಂಗ್ರೆಸ್ ಅಭ್ಯರ್ಥಿ

Published : Nov 04, 2020, 02:34 PM ISTUpdated : Nov 04, 2020, 02:43 PM IST
ಪರೀಕ್ಷೆ ಬರೆದಿದ್ದೇನೆ, ರಿಸಲ್ಟ್ ಉತ್ತಮವಾಗಿರಲಿದೆ ಎಂದ ಕಾಂಗ್ರೆಸ್ ಅಭ್ಯರ್ಥಿ

ಸಾರಾಂಶ

ಆರ್.ಆರ್ ನಗರ ಉಪಚುನಾವಣೆ ಮುಗಿದಿದ್ದ, ಇದೇ ನವೆಂಬರ್ 10ರಂದು ಫಲಿತಾಂಶ ಹೊರ ಬೀಳಲಿದೆ. ಅದಕ್ಕೂ ಮುನ್ನ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು, (ನ.03): ಲೆಕ್ಚರರ್ ಆಗಿದ್ದ ದಿವಂಗತ ಡಿ.ಕೆ. ರವಿ ಪತ್ನಿ ಕುಸುಮಾ ಅವರು ರಾಜರಾಜೇಶ್ವರಿ ವಿಧಾನಸಭಾ ಉಪಚುನಾವಣೆ ಅಖಾಡಕ್ಕೆ ಇಳಿದು ಸುಮಾರು ಹದಿನೈದರಿಂದ ಇಪ್ಪತ್ತು ದಿನಗಳ ವರೆಗೆ ವಿಶ್ರಾಂತಿ ಇಲ್ಲದೇ ಗೆಲುವಿಗಾಗಿ ಸುತ್ತಾಡಿ ಇದೀಗ ಫುಲ್ ರಿಲ್ಯಾಕ್ಸ್ ಮೂಡ್‌ನಲ್ಲಿದ್ದಾರೆ.

ಇನ್ನು ಉಪಚುನಾವಣೆಯ ಫಲಿತಾಂಶ ಏನಾಗಲಿದೆ ಎನ್ನುವ ಬಗ್ಗೆ ಸ್ವತಃ ಕುಸುಮಾ ಅವರು ಸುವರ್ಣ ನ್ಯುಸ್ ಜತೆ ಮಾತನಾಡಿದ್ದು, ನಿನ್ನೆ (ನ.03) ಪರೀಕ್ಷೆ ಬರೆದು ಬಂದಿದ್ದೇನೆ. ರಿಸಲ್ಟ್ ಉತ್ತಮವಾಗಿರುವ ವಿಶ್ವಾಸ ನನಗಿದೆ ಎಂದಿದ್ದಾರೆ.

ಬೈ ಎಲೆಕ್ಷನ್: BJP, JDS, ಕಾಂಗ್ರೆಸ್ ಸೋಲು-ಗೆಲುವಿಗೆ ಕಾರಣವಾಗಬಹುದಾದ ಅಂಶಗಳು..

ಆರ್.ಆರ್ ನಗರದ ಜನರು ತೋರಿಸಿರುವ ಪ್ರೀತಿ ವಿಶ್ವಾಸ ನನಗೆ ಸಾಕಷ್ಟು ಆತ್ಮ ವಿಶ್ವಾಸ ಹೆಚ್ಚಿಸಿದೆ.. ನಾನು ರಾಜಕೀಯದಲ್ಲಿ ಸಕ್ರೀಯವಾಗಿರುವ ನಿರ್ಧಾರ ಮಾಡಿದ್ದೇನೆ. ಜನರ ಮಧ್ಯೆ ಕಾರ್ಯನಿರ್ವಹಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.

ಆರ್ ಆರ್ ನಗರದ ಪ್ರತಿ ಮನೆಗಳಲ್ಲೂ ನನ್ನಂತ ಒಬ್ಬ ಹೆಣ್ಣು ಮಗಳು ಇರ್ತಾರೆ ಅಂತ ನನಗೆ ಅನಿಸ್ತು. ಅವರು ಕುಸುಮಾ ಪರ ಮತ ಚಲಾಯಿಸಿದ್ದಾರೆ ಎಂಬ ನಂಬಿಕೆ ನನಗಿದೆ. ಮಹಿಳೆಯರು ನನಗೆ ಹೆಚ್ಚಿನ ಪ್ರೀತಿ ವಿಶ್ವಾಸ ತೋರಿಸಿದ್ದಾರೆ ಎಂದು ಹೇಳಿದರು.

ಜೆಡಿಎಸ್, ಬಿಜೆಪಿ ಇಬ್ಬರು ನನಗೆ ಎದುರಾಳಿಗಳೇ. ಜೆಡಿಎಸ್ ಕಾಂಗ್ರೆಸ್ ಗೆ ಬರುವ ಮತಗಳನ್ನ ವಿಭಜಿಸಿದೆ ಎಂದು ನಾನು ಅಂದುಕೊಂಡಿಲ್ಲ. ಗೆಲ್ಲುವ ವಿಶ್ವಾಸ ನನಗಿದೆ.. ಫಲಿತಾಂಶ ಏನೇ ಆದ್ರು ರಾಜಕೀಯಕ್ಕೆ ಬಂದ ಮೇಲೆ ಜನರ ಸೇವಾ ಕಾರ್ಯದಲ್ಲಿ ತೊಡಗಿಕೊಳ್ತೇನೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಯಮಾಡಿ ಅರ್ಥ ಮಾಡಿಕೊಳ್ಳಿ ತಪ್ಪು ತಿಳಿಯಬೇಡಿ: ಸೋದರನ ಪೋಸ್ಟ್‌ಗೆ ಹೆಬ್ಬಾಳ್ಕರ್ ಪ್ರತಿಕ್ರಿಯೆ
ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ