ಸ್ವಾರ್ಥಕ್ಕಾಗಿ ಸಂವಿಧಾನ ಬದಲಿಸಿದ್ದು ಕಾಂಗ್ರೆಸ್‌: ಸಂಸದ ಗೋವಿಂದ ಕಾರಜೋಳ

Published : Jul 10, 2024, 11:40 PM ISTUpdated : Jul 11, 2024, 07:48 AM IST
ಸ್ವಾರ್ಥಕ್ಕಾಗಿ ಸಂವಿಧಾನ ಬದಲಿಸಿದ್ದು ಕಾಂಗ್ರೆಸ್‌: ಸಂಸದ ಗೋವಿಂದ ಕಾರಜೋಳ

ಸಾರಾಂಶ

ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಕರ್ನಾಟಕ ರಾಯಭಾರಿಯಾಗಿ ನಾನು ಕೆಲಸ ಮಾಡುತ್ತೇನೆ. ನರೇಂದ್ರ ಮೋದಿ ಅವರ ಬೆಂಬಲಿಗನಾಗಿ, ಪ್ರತಿನಿಧಿಯಾಗಿ ಕಾರ್ಯನಿರ್ವಹಿಸುತ್ತೀದ್ದೇನೆ ಎಂದು ಚಿತ್ರದುರ್ಗ ಸಂಸದ ಹಾಗೂ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.  

ಲೋಕಾಪುರ (ಜು.10): ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಕರ್ನಾಟಕ ರಾಯಭಾರಿಯಾಗಿ ನಾನು ಕೆಲಸ ಮಾಡುತ್ತೇನೆ. ನರೇಂದ್ರ ಮೋದಿ ಅವರ ಬೆಂಬಲಿಗನಾಗಿ, ಪ್ರತಿನಿಧಿಯಾಗಿ ಕಾರ್ಯನಿರ್ವಹಿಸುತ್ತೀದ್ದೇನೆ ಎಂದು ಚಿತ್ರದುರ್ಗ ಸಂಸದ ಹಾಗೂ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು. ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಮೋದಿಯವರ ಬಗ್ಗೆ ಕಾಂಗ್ರೆಸ್ ಪಕ್ಷ ಅಪಪ್ರಚಾರ ಮಾಡಿ ಜನರಿಗೆ ತಪ್ಪು ಕಲ್ಪನೆ ಮಾಡಿ, ಅಲ್ಪಸಂಖ್ಯಾತರಿಗೆ ತೊಂದರೆಕೊಡತಾರ, ದೇಶದ ಸಂವಿಧಾನದ ಬದಲಾವಣೆ, ಎಸ್ಸಿ, ಎಸ್ಟಿ ಹಿಂದುಳಿದ ವರ್ಗದವರಿಗೆ ತೆಲೆಕೆಡಿಸುವ ಕೆಲಸ ಮಾಡಿದ್ದು ಕಾಂಗ್ರೆಸ್ ಪಕ್ಷ. 

ದೇಶಕ್ಕೆ ಅಪಾಯ ಇರುವುದು ಸಂವಿಧಾನವನ್ನು ಬದಲಾವಣೆ ಮಾಡಿದ್ದು ಕಾಂಗ್ರೆಸ್ ಪಕ್ಷ. ೭೮ ಸಾರಿ ಸಂವಿಧಾನ ತಿದ್ದುಪಡಿ ಮಾಡಿದ್ದು ಕಾಂಗ್ರೆಸ್ ಪಕ್ಷ. ನೆಹರೂ ಕಾಲದಿಂದ ಮನಮೋಹನಸಿಂಗ್ ಕಾಲದವರೆಗೂ ಅನೇಕ ಬಾರಿ ಸಂವಿಧಾನ ತಿದ್ದುಪಡಿ ಮಾಡಿದ್ದಾರೆ. ದೇಶದ ಹಿತಕ್ಕಾಗಿ ಅಲ್ಲಾ ತಮ್ಮ ಸ್ವಾರ್ಥಕ್ಕಾಗಿ ತಿದ್ದುಪಡಿ ಮಾಡಿದ್ದಾರೆ ಹೊರತು, ತಮ್ಮ ಬಂಧುಬಳಗದವರಿಗೆ ಅನುಕೂಲವಾಗುವ ಸಲುವಾಗಿ ತಿದ್ದುಪಡಿ ಮಾಡಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿ ಮುಖಂಡ ಲೋಕಣ್ಣ ಕತ್ತಿ ಮಾತನಾಡಿ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ತರೋಣ. ಕಾರ್ಯಕರ್ತರು ಎದೆಗುಂದದೆ ಮುಂಬರುವ ಜಿಪಂ, ತಾಪಂ, ಪಟ್ಟಣ ಪಂಚಾಯಿತ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸೋಣ. ಇದಕ್ಕೆ ಈಗಿನಿಂದಲೇ ತಯಾರಿ ಮಾಡಿ, ಪಕ್ಷಕ್ಕಾಗಿ ಒಟ್ಟಾಗಿ ಕಾರ್ಯನಿರ್ವಹಿಸೋಣ. ಮುಧೋಳ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದೂ ಒಂದುವರೆ ವರ್ಷವಾದರೂ ಯಾವುದೇ ಅಭಿವೃದ್ಧಿ ಕಂಡಿಲ್ಲ. ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಇದ್ದಾಗಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿದ್ದು ಕಣ್ಣಾರೆ ಕಂಡಿದ್ದೇವೆ ಎಂದರು.

ಸಿಎಂ ಸಿದ್ದರಾಮಯ್ಯ ಅವರಿಗೆ ಆಡಳಿತದ ಮೇಲೆ ಹಿಡಿತ ತಪ್ಪಿದೆ: ಸಂಸದ ಗೋವಿಂದ ಕಾರಜೋಳ

ಈ ವೇಳೆ ಬಿಜೆಪಿ ಮುಖಂಡರಾದ ಅರುಣ ಕಾರಜೋಳ, ಬಿಜೆಪಿ ಗ್ರಾಮೀಣ ಮಂಡಳದ ಅಧ್ಯಕ್ಷ ಸಂಗನಗೌಡ ಕಾತರಕಿ, ಕೆಎಂಎಫ್ ನಿರ್ದೇಶಕ ವಿವೇಕಾನಂದ ಪಾಟೀಲ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ನಾರಾಯಣ ಯಡಹಳ್ಳಿ, ಲೋಕಣ್ಣ ಕತ್ತಿ, ಎಂ.ಎಂ.ವಿರಕ್ತಮಠ, ಬಿ.ವ್ಹಿ.ಹಲಕಿ, ವ್ಹಿ.ಎಂ.ತೆಗ್ಗಿ, ಯಮನಪ್ಪ ಹೊರಟ್ಟಿ, ಬಿ.ಎಲ್.ಬಬಲಾದಿ, ಪರಮಾನಂದ ಟೊಪಣ್ಣವರ, ವಿರೇಶ ಪಂಚಕಟ್ಟಿಮಠ, ಪ್ರಕಾಶ ಚಿತ್ತರಗಿ, ಆಶೀಫ್ ಜೀರಗಾಳ, ಸಿದ್ರಾಮಪ್ಪ ದೇಸಾಯಿ, ಶಿವಪ್ಪ ಚೌಧರಿ, ಪಿಕೆಪಿಎಸ್ ಅಧ್ಯಕ್ಷ ಹೊಳಬಸು ಕಾಜಗಾರ, ವಿನೋದ ಘೋರ್ಪಡೆ, ಮಾರುತಿ ರಂಗಣ್ಣವರ, ಗೋಪಾಲಗೌಡ ಪಾಟೀಲ, ಅರುಣ ಮುಧೋಳ, ಮಲಿಕಸಾಬ ಭಾಗವಾನ, ಕಾಶಲಿಂಗ ಮಾಳಿ ವರ್ಚಗಲ್, ಲಕ್ಷಾನಟ್ಟಿ, ಅರಳಿಕಟ್ಟಿ, ಹೆಬ್ಬಾಳ, ದಾದನಟ್ಟಿ, ಹೊಸಕೊಟಿ, ವಿವಿಧ ಗ್ರಾಮಗಳಿಂದ ಅನೇಕ ಬಿಜೆಪಿ ಮುಖಂಡರು, ಕಾರ್ಯಕರ್ತರು ಗೋವಿಮದ ಕಾರಜೋಳ ಅವರನ್ನು ಸನ್ಮಾನಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌