ರಾಹುಲ್‌ ಗಾಂಧಿ, ಪ್ರಿಯಾಂಕಾ ಸ್ಪರ್ಧೆಗೆ ಕಾಂಗ್ರೆಸ್‌ ಸಮಿತಿ ಪಟ್ಟು

Published : Apr 28, 2024, 06:29 AM IST
ರಾಹುಲ್‌ ಗಾಂಧಿ, ಪ್ರಿಯಾಂಕಾ ಸ್ಪರ್ಧೆಗೆ ಕಾಂಗ್ರೆಸ್‌ ಸಮಿತಿ ಪಟ್ಟು

ಸಾರಾಂಶ

ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರಾಹುಲ್‌ ಅಮೇಠಿಯಿಂದ ಹಾಗೂ ಪ್ರಿಯಾಂಕಾ ರಾಯ್‌ಬರೇಲಿಯಿಂದ ಸ್ಪರ್ಧಿಸಬೇಕು ಎಂಬ ಒಕ್ಕೊರಲ ಆಗ್ರಹ ಕೇಳಿಬಂತು. ಅಂತಿಮ ನಿರ್ಣಯವನ್ನು ಅಧ್ಯಕ್ಷರಿಗೆ ಬಿಡಲಾಯಿತು. 

ನವದೆಹಲಿ(ಏ.28): ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಪ್ರತಿನಿಧಿಸುತ್ತಿದ್ದ ಉತ್ತರ ಪ್ರದೇಶದ ರಾಯ್‌ಬರೇಲಿ ಹಾಗೂ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಕಳೆದ ಚುನಾವಣೆಯಲ್ಲಿ ಪರಾಭವಗೊಂಡ ಅದೇ ರಾಜ್ಯದ ಅಮೇಠಿಯ ಕಾಂಗ್ರೆಸ್‌ ಅಭ್ಯರ್ಥಿ ಘೋಷಣೆ ಬಗ್ಗೆ ಪಕ್ಷದ ಚುನಾವಣಾ ಸಮಿತಿ ಶನಿವಾರ ಮಹತ್ವದ ಸಭೆ ನಡೆಸಿತು.

ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರಾಹುಲ್‌ ಅಮೇಠಿಯಿಂದ ಹಾಗೂ ಪ್ರಿಯಾಂಕಾ ರಾಯ್‌ಬರೇಲಿಯಿಂದ ಸ್ಪರ್ಧಿಸಬೇಕು ಎಂಬ ಒಕ್ಕೊರಲ ಆಗ್ರಹ ಕೇಳಿಬಂತು. ಅಂತಿಮ ನಿರ್ಣಯವನ್ನು ಅಧ್ಯಕ್ಷರಿಗೆ  ಬಿಡಲಾಯಿತು ಎಂದು ಮೂಲಗಳು ಹೇಳಿವೆ.

ಸಂವಿಧಾನ ಬದಲಿಸಲು ಬಿಜೆಪಿ ಯತ್ನ: ರಾಹುಲ್ ಗಾಂಧಿ

ಶೀಘ್ರ ನಿರ್ಣಯ- ಖರ್ಗೆ:

ಇದಕ್ಕೂ ಮುನ್ನ ಗುವಾಹಟಿಯಲ್ಲಿ ಮಾತನಾಡಿದ ಖರ್ಗೆ, ಎರಡೂ ಕ್ಷೇತ್ರಗಳ ಅಭ್ಯರ್ಥಿಯನ್ನು ಕೆಲ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಹೇಳಿದರು. ಇದೇ ವೇಳೆ ಕಾಂಗ್ರೆಸ್‌ ನಾಯಕರು ಕ್ಷೇತ್ರ ಬದಲಿಸುವ ಕುರಿತಾದ ಟೀಕೆಗೆ ಉತ್ತರಿಸಿದ ಅವರು, ‘ಕಾಂಗ್ರೆಸ್‌ ನಾಯಕರು ಕ್ಷೇತ್ರ ಬದಲಿಸುವುದನ್ನು ಪ್ರಶ್ನಿಸುವವರು ವಾಜಪೇಯಿ ಹಾಗೂ ಅಡ್ವಾಣಿ ಎಷ್ಟು ಬಾರಿ ತಮ್ಮ ಕ್ಷೇತ್ರ ಬದಲಿಸಿದ್ದಾರೆ ಎಂಬುದನ್ನೂ ನನಗೆ ಹೇಳಬೇಕು’ ಎಂದು ತಿರುಗೇಟು ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!