ಗಲಭೆ ನಡೆಯುತ್ತೆ ಎಂದು ಅಮಿತ್‌ ಶಾ ಹೇಳಿದ ಬೆನ್ನಲ್ಲೇ ಪರಂಗೆ ಕಲ್ಲು: ಕಾಂಗ್ರೆಸ್‌

Published : Apr 29, 2023, 12:39 PM IST
ಗಲಭೆ ನಡೆಯುತ್ತೆ ಎಂದು ಅಮಿತ್‌ ಶಾ ಹೇಳಿದ ಬೆನ್ನಲ್ಲೇ ಪರಂಗೆ ಕಲ್ಲು: ಕಾಂಗ್ರೆಸ್‌

ಸಾರಾಂಶ

ಪರಮೇಶ್ವರ್‌ ಅವರ ಮೇಲೆ ಷಡ್ಯಂತ್ರ ರೂಪಿಸಿ ಕಲ್ಲು ತೂರಲಾಗಿದೆ. ಈ ಘಟನೆ ಕರ್ನಾಟಕವೇ ತಲೆ ತಗ್ಗಿಸುವಂತಹದು: ಕರ್ನಾಟಕ ಕಾಂಗ್ರೆಸ್‌ 

ಬೆಂಗಳೂರು(ಏ.29):  ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರ ಮೇಲೆ ಷಡ್ಯಂತ್ರ ರೂಪಿಸಿ ಕಲ್ಲು ತೂರಿದ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ರಾಜ್ಯ ಕಾಂಗ್ರೆಸ್‌, ಇದು ಕರ್ನಾಟಕವೇ ತಲೆ ತಗ್ಗಿಸುವಂತಹ ಘಟನೆ ಎಂದು ಟೀಕಿಸಿದೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ‘ಕರ್ನಾಟಕ ಕಾಂಗ್ರೆಸ್‌’, ಪರಮೇಶ್ವರ್‌ ಅವರ ಮೇಲೆ ಷಡ್ಯಂತ್ರ ರೂಪಿಸಿ ಕಲ್ಲು ತೂರಲಾಗಿದೆ. ಈ ಘಟನೆ ಕರ್ನಾಟಕವೇ ತಲೆ ತಗ್ಗಿಸುವಂತಹದು. ವಿರೋಧ ಪಕ್ಷಗಳ ನಾಯಕರ ಮೇಲೆ ಮೊದಲಿಂದಲೂ ವ್ಯವಸ್ಥಿತವಾಗಿ ದಾಳಿ ನಡೆಸಲಾಗುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ‘ಗಲಭೆ ನಡೆಯುತ್ತದೆ’ ಎಂಬ ಎಚ್ಚರಿಕೆ ನೀಡಿದ್ದರು. ಈ ಹೇಳಿಕೆ ಬೆನ್ನಲ್ಲೇ ಕಲ್ಲು ತೂರಾಟ ನಡೆದಿದೆ ಎಂದು ಆರೋಪಿಸಲಾಗಿದೆ.

ಕೊರಟಗೆರೆ: ಪ್ರಚಾರ ವೇಳೆ ಪರಂ ತಲೆಗೆ ಗಾಯ

ದಲಿತ ನಾಯಕರ ಮೇಲೆ ಬಿಜೆಪಿಗೆ ಏಕಿಷ್ಟುದ್ವೇಷ ಎಂದೂ ಪ್ರಶ್ನೆ ಮಾಡಲಾಗಿದೆ. ಕೊರಟಗೆರೆ ತಾಲೂಕಿನಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ಪರಮೇಶ್ವರ್‌ ಅವರ ಮೇಲೆ ಕಲ್ಲೂ ತೂರಾಟ ನಡೆಸಿದ್ದು ಬಳಿಕ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌ ಬಿಜೆಪಿ ವಿರುದ್ಧ ಹರಿಹಾಯ್ದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ