ಕಾಂಗ್ರೆಸ್‌ನಿಂದಲೂ ಬಿಹಾರ ಚುನಾವಣೆ ಬಹಿಷ್ಕಾರ?

Kannadaprabha News   | Kannada Prabha
Published : Jul 25, 2025, 06:10 AM IST
Congress flag

ಸಾರಾಂಶ

 ಬಿಹಾರದಲ್ಲಿ ನಡೆಯುತ್ತಿರುವ ಮತಪಟ್ಟಿ ಪರಿಷ್ಕರಣೆಯನ್ನು ವಿರೋಧಿಸಿ, ವಿಧಾನಸಭೆ ಚುನಾವಣೆಯನ್ನು ಬಹಿಷ್ಕರಿಸುವ ಸುಳಿವು ನೀಡಿದ್ದ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ಗೆ ಕಾಂಗ್ರೆಸ್‌ ಕೂಡ ಬೆಂಬಲ ಸೂಚಿಸಿದ್ದು, ಇಂಡಿಯಾ ಕೂಟದ ಮುಂದೆಯೂ ಬಹಿಷ್ಕಾರದ ಆಯ್ಕೆಯಿದೆ ಎಂದು ಹೇಳಿದೆ.

 ನವದೆಹಲಿ: ಬಿಹಾರದಲ್ಲಿ ನಡೆಯುತ್ತಿರುವ ಮತಪಟ್ಟಿ ಪರಿಷ್ಕರಣೆಯನ್ನು ವಿರೋಧಿಸಿ, ವಿಧಾನಸಭೆ ಚುನಾವಣೆಯನ್ನು ಬಹಿಷ್ಕರಿಸುವ ಸುಳಿವು ನೀಡಿದ್ದ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ಗೆ ಕಾಂಗ್ರೆಸ್‌ ಕೂಡ ಬೆಂಬಲ ಸೂಚಿಸಿದ್ದು, ಇಂಡಿಯಾ ಕೂಟದ ಮುಂದೆಯೂ ಬಹಿಷ್ಕಾರದ ಆಯ್ಕೆಯಿದೆ ಎಂದು ಹೇಳಿದೆ.

ವಿಶೇಷ ಮತಪಟ್ಟಿ ಪರಿಷ್ಕರಣೆಯನ್ನು ‘ತುಘಲಖ್‌ ಮಾದರಿಯ ಪ್ರಕ್ರಿಯೆ’ ಎಂದು ಕರೆದಿರುವ ಬಿಹಾರದ ಕಾಂಗ್ರೆಸ್‌ ಉಸ್ತುವಾರಿ ಕೃಷ್ಣ ಅಲ್ಲವಾರು, ‘ಚುನಾವಣಾ ಆಯೋಗವು ತೋರಿಸಿರುವ ಅಂಕಿಅಂಶಗಳು ಸಂಪೂರ್ಣ ಸುಳ್ಳು. ಅದನ್ನು ಎಲ್ಲಾ ರೀತಿಯಲ್ಲಿ ವಿರೋಧಿಸುತ್ತೇವೆ. ಈ ಸಮಸ್ಯೆ ಬಗ್ಗೆ ಒಟ್ಟಾಗಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ. ನಮ್ಮ ಮುಂದೆ ಎಲ್ಲಾ ರೀತಿಯ ಆಯ್ಕೆಗಳೂ ತೆರೆದಿವೆ

ಬಿಜೆಪಿ ತಿರುಗೇಟು:

ಬಿಹಾರ ಚುನಾವಣೆ ಬಹಿಷ್ಕಾರದ ಮಾತನ್ನಾಡಿರುವ ತೇಜಸ್ವಿ ಮತ್ತು ಇಂಡಿಯಾ ಕೂಟವನ್ನು ಟೀಕಿಸಿರುವ ಎನ್‌ಡಿಎ ಕೂಟ, ‘ಅವರ ಅಕ್ರಮ ಬಯಲಾಗಿದ್ದು, ಅವರಿಗೀಗ ಸೋಲಿನ ಭಯ ಶುರುವಾಗಿದೆ. ಆದ್ದರಿಂದಲೇ ಚುನಾವಣೆಯಿಂದ ಹಿಂದೆ ಸರಿಯುವುದಾಗಿ ಹೇಳುತ್ತಿದ್ದಾರೆ. ಇಲ್ಲವೇ, ಯಾವುದೋ ರಾಜಕೀಯ ಪಿತೂರಿ ನಡೆಸುತ್ತಿದ್ದಾರೆ’ ಎಂದು ತಿರುಗೇಟು ನೀಡಿದೆ.

ಮೃತರೂ ಮತದಾರರಾಗಿ ಉಳಿಯಬೇಕೆ?: ವಿಪಕ್ಷಕ್ಕೆ ಚು.ಆಯೋಗ ತಿರುಗೇಟು

ನವದೆಹಲಿ: ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಎದ್ದಿರುವ ವಿಪಕ್ಷಗಳ ಟೀಕೆಗೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪ್ರತಿಕ್ರಿಯಿಸಿದ್ದು, ‘ಸತ್ತವರು, ಶಾಶ್ವತವಾಗಿ ವಲಸೆ ಹೋದವರು ಅಥವಾ ಒಂದಕ್ಕಿಂತ ಹೆಚ್ಚು ಸ್ಥಳಗಳಲ್ಲಿ ಮತದಾರರಾಗಿರುವವರನ್ನು ಪಟ್ಟಿಗೆ ಸೇರಿಸಲು ಸಾಧ್ಯವೇ?’ ಎಂದು ಪ್ರಶ್ನಿಸಿದ್ದಾರೆ. 

ಚುನಾವಣಾ ಆಯೋಗ ದೇಶಾದ್ಯಂತ ಚುನಾವಣೆಯನ್ನೇ ಕದಿಯುತ್ತಿದೆ ಎಂಬ ರಾಹುಲ್‌ ಆರೋಪಕ್ಕೆ ಜ್ಞಾನೇಶ್ ಕುಮಾರ್ ತಿರುಗೇಟು ನೀಡಿದ್ದು, ‘ನ್ಯಾಯಸಮ್ಮತ ಚುನಾವಣೆ ಹಾಗೂ ಬಲಿಷ್ಠ ಪ್ರಜಾಪ್ರಭುತ್ವದ ಅಡಿಪಾಯಕ್ಕಾಗಿ ಒಂದು ಪಾರದರ್ಶಕ ವ್ಯವಸ್ಥೆಯಲ್ಲಿ ಶುದ್ಧ ಮತದಾರರ ಪಟ್ಟಿಯನ್ನು ತಯಾರಿಸಲು ಸಾಧ್ಯವಿಲ್ಲವೇ? ಬಿಹಾರದಿಂದ ಮೊದಲ್ಗೊಂಡು ಇಡೀ ದೇಶದಲ್ಲಿ ಅನರ್ಹರಿಗೆ ಮತದಾನಕ್ಕೆ ಅವಕಾಶ ಮಾಡಿಕೊಡುವುದು ಸಂವಿಧಾನವಿರೋಧಿ ಕ್ರಮವಾಗಿದೆ. ಈ ಪ್ರಶ್ನೆ ಕುರಿತು ರಾಜಕೀಯ ಸಿದ್ಧಾಂತಗಳನ್ನು ಮೀರಿ ಭಾರತೀಯ ನಾಗರಿಕರೆಲ್ಲರೂ ಆಲೋಚಿಸಬೇಕಿದೆ’ ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಮಸ್ಯೆಗಳ ನಿವಾರಣೆ, ಸವಾಲುಗಳಿಗೆ ಧಾರ್ಮಿಕ ಗುರುಗಳಿಂದ ಪರಿಹಾರ: ಬಿ.ವೈ.ವಿಜಯೇಂದ್ರ
ಜಾತಿ ವ್ಯವಸ್ಥೆಗೆ ಪರಿಹಾರ ರೂಪದ ವಿದ್ಯೆ ಅಗತ್ಯ: ಸಿಎಂ ಸಿದ್ದರಾಮಯ್ಯ